ಫೇಸ್ ಬುಕ್ ಪಾಸ್ ವರ್ಡ್ ಕಳವು: ಈ 25 ಆ್ಯಪ್ ಗಳನ್ನು ಕಿತ್ತೆಸೆದ ಗೂಗಲ್ ಪ್ಲೇ ಸ್ಟೋರ್ !


Team Udayavani, Jul 5, 2020, 8:05 AM IST

google-play

ನ್ಯೂಯಾರ್ಕ್: ಫೇಸ್ ಬುಕ್ ಬಳಕೆದಾರರ ಪಾಸ್ ವರ್ಡ್ ಮತ್ತು ಇತರ ಮಾಹಿತಿಗಳನ್ನು ಕೆಲವು ಆ್ಯಪ್ ಗಳು  ಹ್ಯಾಕ್ ಮಾಡಿವೆ ಎಂದು ಫ್ರೆಂಚ್ ಸೈಬರ್-ಸೆಕ್ಯುರಿಟಿ ಸಂಸ್ಥೆ  ಮಾಹಿತಿ ನೀಡಿದ ಬೆನ್ನಲ್ಲೇ,  ಗೂಗಲ್ ತನ್ನ ಪ್ಲೇ ಸ್ಟೋರ್‌ನಿಂದ 25 ಅಪ್ಲಿಕೇಶನ್‌ಗಳನ್ನು ತೆಗೆದುಹಾಕಿದೆ ಎಂದು ವರದಿಯಾಗಿದೆ.

ಆದರೇ ರಿಮೂವ್ ಮಾಡುವ ಮೊದಲು ಈ 25 ಅಪ್ಲಿಕೇಶನ್‌ಗಳನ್ನು ಒಟ್ಟು 2.34 ಮಿಲಿಯನ್ ಬಾರಿ ಜನರು ಡೌನ್‌ಲೋಡ್ ಮಾಡಿದ್ದಾರೆ ಎಂದು ಸಂಸ್ಥೆಯು ಉಲ್ಲೇಖಿಸಿದೆ. ಮಾತ್ರವಲ್ಲದೆ ಈ ಆ್ಯಪ್ ಗಳನ್ನು ಒಂದೇ  ಗುಂಪು ಸೇರಿ ರಚಿಸಿದೆ ಎಂಬ ಆಘಾತಕಾರಿ ಮಾಹಿತಿಯು ಹೊರಬಿದ್ದಿದೆ.

ಈ ಆ್ಯಪ್ ಗಳ ಫೀಚರ್ ಮತ್ತು ವೈಶಿಷ್ಟ್ಯಗಳು ವಿಭಿನ್ನವಾಗಿ ಕಂಡರೂ, ಇವುಗಳ ಉದ್ದೇಶ ಒಂದೇ ಆಗಿದ್ದವು. ಇದರಲ್ಲಿ ಕೆಲವು ಫೋಟೋ ಎಡಿಟರ್‌, ವಿಡಿಯೋ ಎಡಿಟರ್ ಅಪ್ಲಿಕೇಶನ್‌ಗಳು, ವಾಲ್‌ ಪೇಪರ್ ಅಪ್ಲಿಕೇಶನ್‌ಗಳು, ಫ್ಲ್ಯಾಷ್‌ಲೈಟ್ ಅಪ್ಲಿಕೇಶನ್‌ಗಳು, ಫೈಲ್ ಮ್ಯಾನೇಜರ್‌ಗಳು ಮತ್ತು ಮೊಬೈಲ್ ಗೇಮ್‌ಗಳು ಕೂಡ ಸೇರಿವೆ.

ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದು ಹಾಕಲಾಗಿರುವ ಅಪ್ಲಿಕೇಶನ್ ಗಳ ಪಟ್ಟಿ: 

ಸೂಪರ್ ವಾಲ್ ಪೇಪರ್ ಫ್ಲ್ಯಾಶ್ ಲೈಟ್, ವಾಲ್ ಪೇಪರ್ ಲೆವೆಲ್, ಕಾನ್ ಟೂರ್ ಲೆವೆಲ್ ವಾಲ್ ಪೇಪರ್, ಐ ಪ್ಲೇಯರ್ ಮತ್ತು ಐ ವಾಲ್ ಪೇಪರ್, ವಿಡಿಯೋ ಮೇಕರ್, ಕಲರ್ ವಾಲ್ ಪೇಪರ್ಸ್, ಪೆಡೋಮೀಟರ್. ಪವರ್ ಫುಲ್ ಫ್ಲ್ಯಾಶ್ ಲೈಟ್, ಸೂಪರ್ ಬ್ರೈಟ್ ಫ್ಲ್ಯಾಶ್ ಲೈಟ್, ಸೂಪರ್ ಫ್ಲ್ಯಾಶ್ ಲೈಟ್, ಸೋಲಿಟೈರ್, ಅಕ್ಯುರೇಟ್ ಸ್ಕ್ಯಾನಿಂಗ್ ಆಫ್ ಕ್ಯೂ ಆರ್ ಕೋಡ್, ಕ್ಲಾಸಿಕ್ ಕಾರ್ಡ್ ಗೇಮ್. ಜಂಕ್ ಫೈಲ್ ಕ್ಲೀನಿಂಗ್, ಸಿಂಥೇಟಿಕ್ ಝಡ್, ಫೈಲ್ ಮೆನೇಜರ್, ಕಾಂಪೋಸೈಟ್  ಝಡ್, ಸ್ಕ್ರೀನ್ ಶಾಟ್ ಕ್ಯಾಪ್ಚರ್, ಡೈಲಿ ಹೋರೋಸ್ಕೋಪ್ ವಾಲ್ ಪೇಪರ್ಸ್, ವುಕ್ಸಿಯಾ ರೀಡರ್, ಪ್ಲಸ್ ವೆದರ್,  ಎನಿಮ್ ಲೈವ್ ವಾಲ್ ಪೇಪರ್, ಐ ಹೆಲ್ತ್ ಸ್ಟೆಪ್ ಕೌಂಟರ್, ಕಾಮ್ ಟೈಪ್ ಫಿಕ್ಷನ್,ಪಾಡೆನಾಟೆಫ್

ಇವುಗಳಲ್ಲಿ ಸೂಪರ್ ವಾಲ್ ಪೇಪರ್ಸ್ ಫ್ಲ್ಯಾಶ್ ಲೈಟ್ ಮತ್ತು ಪಾಡೆನಾಟೆಫ್ ಆ್ಯಪ್ ಗಳು 5,00,000 ಡೌನ್ ಲೋಡ್ ಕಂಡಿವೆ. ಇನ್ನು ಕೆಲವು ಅಪ್ಲಿಕೇಶನ್ ಗಳು 1,00,000 ಬಾರಿ ಡೌನ್ ಲೋಡ್ ಆಗಿವೆ.

ಈ ಅಪ್ಲಿಕೇಶನ್‌ಗಳು ದುರುದ್ದೇಶಪೂರಿತ ಕೋಡ್ ಅನ್ನು ಒಳಗೊಂಡಿದ್ದು, ಈಗಾಗಲೇ ಬಳಸುತ್ತಿರುವ  ಫೇಸ್‌ಬುಕ್ ಅಥವಾ ಇತರ ಆ್ಯಪ್ ಗಳ  ಬ್ರೌಸರ್ ವಿಂಡೋವನ್ನು ನಕಲಿ ಮಾಡಿ ಲೋಡ್ ಮಾಡುತ್ತದೆ. ಆದರೇ ಬಳಕೆದಾರರು ಇದನ್ನು ಅಸಲಿ ಎಂದೇ ತಿಳಿದು ಕಾರ್ಯನಿರ್ವಹಿಸುತ್ತಾರೆ.  ಈ ಎಲ್ಲಾ ಅಪ್ಲಿಕೇಶನ್‌ ಗಳ ಮೇಲೆ ಮೇ ತಿಂಗಳಲ್ಲಿ ಗೂಗಲ್‌ ಗೆ ರಿಪೋರ್ಟ್  ಮಾಡಲಾಗಿತ್ತು.  ಇದೀಗ ಗೂಗಲ್ ತನ್ನ ಪ್ಲೇಸ್ಟೋರ್ ನಿಂದ ಈ ಆ್ಯಪ್ ಗಳನ್ನು  ಕಿತ್ತೆಸೆದಿದೆ.

ಟಾಪ್ ನ್ಯೂಸ್

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.