ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌


Team Udayavani, Jun 2, 2023, 9:00 AM IST

thumb-2

ಕೃತಕ ಬುದ್ಧಿಮತ್ತೆ (ಎಐ)ಯಿಂದ ಹೊಸ ಹೊಸ ತಂತ್ರಜ್ಞಾನಗಳು ಹಾಗೂ ಸೌಲಭ್ಯಗಳನ್ನು ಬಳಕೆದಾರರಿಗೆ ನೀಡುತ್ತಿರುವ ಗೂಗಲ್‌ ಇದೀಗ ಪ್ರವಾಹ ಮುನ್ಸೂಚನೆಯನ್ನು ನೀಡಬಲ್ಲ “ಫ್ಲಡ್‌ ಹಬ್‌’ ಸೇವೆಯನ್ನು 80 ದೇಶಗಳಿಗೆ ವಿಸ್ತರಿಸುತ್ತಿದೆ. ಏನಿದು ಫ್ಲಡ್‌ ಹಬ್‌? ಇದು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದರ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಮೊದಲು
ಗೂಗಲ್‌ ಕೃತಕ ಬುದ್ಧಿಮತ್ತೆ (ಅಐ) ಆಧಾರಿತ ಪ್ರವಾಹ ಮುನ್ಸೂಚನೆಯನ್ನು ನೀಡಬಲ್ಲ ತನ್ನ “ಫ್ಲಡ್‌ ಹಬ್‌’ ಸೇವೆಯನ್ನು 2018ರಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಪರಿಚಯಿಸಿತು. ಅನಂತರದಲ್ಲಿ ಬಾಂಗ್ಲಾದೇಶದಲ್ಲಿ ಪರಿಚಯಿಸಿದರೆ 2022 ರಲ್ಲಿ ಇತರ 18 ರಾಷ್ಟ್ರಗಳಿಗೆ ಈ ಸೇವೆಯನ್ನು ವಿಸ್ತರಿಸಿತು. ಇದೀಗ ವಿಶ್ವದ ಇನ್ನಿತರ 60 ರಾಷ್ಟ್ರ ಗಳಲ್ಲಿ ಫ್ಲಡ್‌ ಹಬ್‌ ಅನ್ನು ಪರಿಚಯಿಸಲಾಗುವುದು ಎಂದು ಗೂಗಲ್‌ ತಿಳಿಸಿದ್ದು, ಈ ಮೂಲಕ ಒಟ್ಟಾರೆ 80 ದೇಶಗಳಲ್ಲಿ ಫ್ಲಡ್‌ ಹಬ್‌ ಕಾರ್ಯ ನಿರ್ವಹಿಸಲಿದೆ.

ಎಲ್ಲೆಲ್ಲಿ?
ಆಫ್ರಿಕಾ, ದಕ್ಷಿಣ ಪೆಸಿಫಿಕ್‌ ಪ್ರದೇಶ, ಯುರೋಪ್‌, ದಕ್ಷಿಣ ಮತ್ತು ಮಧ್ಯ ಅಮೆರಿಕ ದೇಶಗಳ ಜತೆಗೆ ಪ್ರವಾಹಕ್ಕೆ ತುತ್ತಾಗಿರುವ ಅತೀ ಹೆಚ್ಚು ಶೇಕಡಾವಾರು ಜನಸಂಖ್ಯೆಯನ್ನು ಹೊಂದಿರುವ ಪ್ರದೇಶಗಳಲ್ಲಿಯೂ ಕಾರ್ಯನಿರ್ವಹಿಸ ಲಿದೆ. ಜಾಗತಿಕವಾಗಿ 460 ಮಿಲಿಯನ್‌ ಜನಸಂಖ್ಯೆಯನ್ನು ಇದು ಒಳಗೊಳ್ಳಲಿದೆ ಎಂದು ಗೂಗಲ್‌ ತಿಳಿಸಿದೆ.

ಏನಿದು ಫ್ಲಡ್‌ ಹಬ್‌?
ಕೃತಕ ಬುದ್ಧಿಮತ್ತೆ ಹಾಗೂ ಕಂಪ್ಯುಟೇಶನಲ್‌ ಪವರ್‌ ಸಹಾಯದಿಂದ ಫ್ಲಡ್‌ ಹಬ್‌, ಎಲ್ಲಿ, ಯಾವಾಗ ಪ್ರವಾಹ ತಲೆದೋರಲಿದೆ ಎಂದು ಮುನ್ಸೂ ಚನೆ ನೀಡುತ್ತದೆ. ಗೂಗಲ್‌ನ ಪ್ರಕಾರ 7 ದಿನಗಳಿಗೂ ಮುನ್ನವೇ ಇದು ಪ್ರವಾಹ ಮುನ್ಸೂಚನೆ ನೀಡಲಿದೆ.

ಹೇಗೆ ಕಾರ್ಯನಿರ್ವಹಿಸುತ್ತದೆ ?
ಹವಾಮಾನ ಸಂಸ್ಥೆಗಳು ನೀಡುವ ಹವಾಮಾನ ಮುನ್ಸೂಚನೆ ವರದಿ, ಸ್ಯಾಟಲೈಟ್‌ ಚಿತ್ರಗಳನ್ನು ಆಧರಿಸಿ ಫ್ಲಡ್‌ ಹಬ್‌ ಕಾರ್ಯನಿರ್ವಹಿಸುತ್ತದೆ. ಈ ತಂತ್ರಜ್ಞಾನವು ಎರಡು ರೀತಿಯ ಮಾಡೆಲ್‌ಗ‌ಳನ್ನು ಹೊಂದಿದೆ. ಹೈಡ್ರೋಲಾಜಿಕ್‌ (Hydrologic ) ಮಾಡೆಲ್‌ ನದಿಯಲ್ಲಿ ಹರಿಯುತ್ತಿರುವ ನೀರಿನ ಮಟ್ಟವನ್ನು ಅಂದಾಜಿಸಿದರೆ, ಇನಂಡೇಶನ್‌ (Inundation) ಮಾಡೆಲ್‌ ಯಾವೆಲ್ಲ ಪ್ರದೇಶಗಳು ಪ್ರವಾಹಕ್ಕೆ ತುತ್ತಾಗಲಿವೆ ಹಾಗೂ ಮುಳುಗಡೆಯ ಪ್ರಮಾಣ ಎಷ್ಟಿರಲಿದೆ ಎಂಬ ಬಗ್ಗೆ ಮಾಹಿತಿ ನೀಡುತ್ತದೆ.

ವಿವಿಧ ಸಂಸ್ಥೆಗಳ ಸಹಯೋಗ
ಪ್ರವಾಹಗಳಿಗೆ ಹೆಚ್ಚು ಒಳಪಡುವ ಹಾಗೂ ಇಂಟರ್ನೆಟ್‌, ಸ್ಮಾರ್ಟ್‌ಪೋನ್‌ ನಂತಹ ಸೌಲಭ್ಯಗಳನ್ನು ಹೊಂದದೇ ಇರುವ ಪ್ರದೇಶ ಹಾಗೂ ಸಮುದಾಯಗಳಿಗೂ ಈ ತಂತ್ರಜ್ಞಾನದ ನೆರವು ನೀಡಲು ಗೂಗಲ್‌, ಫೆಡರೇಶನ್‌ ಆಫ್ ರೆಡ್‌ಕ್ರಾಸ್‌ ಮತ್ತು ರೆಡ್‌ ಕ್ರೆಸೆಂಟ್‌ ಸೊಸೈಟಿಸ್‌, ಇಂಡಿಯನ್‌ ರೆಡ್‌ಕ್ರಾಸ್‌ ಸೊಸೈಟಿ ಹಾಗೂ ಯೇಲ್‌ ವಿಶ್ವವಿದ್ಯಾನಿಲಯದ ಇನ್‌ಕ್ಲುಶನ್‌ ಎಕನಾಮಿಕ್ಸ್‌ ಟೀಮ್‌ ಸ್ವಯಂಸೇವಕರಿಗೆ ತರಬೇತಿ ನೀಡಿ ಅಂತಹ ಪ್ರದೇಶಗಳಿಗೆ ಮಾಹಿತಿ ದೊರಕುವಂತೆ ಮಾಡಲಿದೆ.

– ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನ
– ವಾರಕ್ಕೂ ಮುನ್ನವೇ ನೆರೆಯ ಬಗ್ಗೆ ಮಾಹಿತಿ
– ಭಾರತದಲ್ಲಿನ ಪ್ರಯೋಗ ಯಶಸ್ವಿ
– ವಿಶ್ವದ 80 ದೇಶಗಳಿಗೆ ಸೇವೆ ವಿಸ್ತರಣೆ

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.