ಎಲ್ಲ ಕಾರುಗಳಲ್ಲೂ 6 ಏರ್ಬ್ಯಾಗ್ ಕಡ್ಡಾಯ? ಸಚಿವ ನಿತಿನ್ ಗಡ್ಕರಿ
ಎಕಾನಮಿ ಕಾರುಗಳಲ್ಲೂ ಈ ನಿಯಮ ಕಡ್ಡಾಗೊಳಿ ಸುವುದಾಗಿ ಹೇಳಿಕೆ
Team Udayavani, Mar 31, 2022, 11:26 AM IST
ಹೊಸದಿಲ್ಲಿ: “ದೇಶದಲ್ಲಿ ಕಾರು ಅಪಘಾತಗಳಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಕಾರುಗಳಲ್ಲಿಯೂ 6 ಏರ್ಬ್ಯಾಗ್ಗಳನ್ನು ಕಡ್ಡಾಯ ಮಾಡಲಾಗುವುದು” ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, “ಕಾರುಗಳಲ್ಲಿ ಹೆಚ್ಚು ಸುರಕ್ಷತ ಕ್ರಮಗಳನ್ನು ಅನುಸರಿಸಿದ್ದರೆ 2020ರಲ್ಲಿ 13 ಸಾವಿರ ಮಂದಿಯ ಪ್ರಾಣ ಉಳಿಸಬಹುದಿತ್ತು’ ಎಂದೂ ಹೇಳಿದ್ದಾರೆ.
ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈಗಾಗಲೇ ಸುರಕ್ಷತ ಕ್ರಮಗಳನ್ನು ಕುರಿತ ಅಧಿಸೂಚನೆ ಪ್ರಕಟಿಸಿದೆ. ಇದರ ಪ್ರಕಾರ ಅ.1ರಿಂದ ಎಕಾನಮಿ ಸೇರಿದಂತೆ ಎಲ್ಲ ಕಾರುಗಳಲ್ಲಿಯೂ ಸೈಡ್ ಏರ್ಬ್ಯಾಗ್ಗಳನ್ನು ಒಳಗೊಂಡಂತೆ ಆರು ಏರ್ಬ್ಯಾಗ್ಗಳನ್ನು ಕಡ್ಡಾಯ ಮಾಡಲಾಗುತ್ತದೆ ಎಂದು ಗಡ್ಕರಿ ತಿಳಿಸಿದ್ದಾರೆ.
ಇದನ್ನೂ ಓದಿ:ಆರ್ಆರ್ಆರ್ ಸಿನಿಮಾ ಬಿಡುಗಡೆಯಾದ ಐದೇ ದಿನಗಳಲ್ಲಿ ಬರೋಬ್ಬರಿ 600 ಕೋಟಿ ರೂ.ಗಳಿಕೆ!
ಅಂದರೆ ಮುಂದಿನ ಅ. 1ರಿಂದ ಉತ್ಪಾದನೆಯಾಗುವ ಎಂ1 ಕೆಟಗರಿಯ ಎಲ್ಲ ವಾಹನಗಳಲ್ಲಿಯೂ ಡ್ರೈವರ್ ಸೀಟ್ ಮತ್ತು ಪಕ್ಕದ ಸೀಟು, ಎಡ ಮತ್ತು ಬಲ ಬದಿಯಲ್ಲಿ ತಲಾ ಎರಡು ಕಡೆಗಳಲ್ಲಿ ಏರ್ಬ್ಯಾಗ್ ಅಳವಡಿಸಬೇಕಾಗುತ್ತದೆ. ಜತೆಗೆ, ಎಂ1 ಕೆಟಗೆರಿ ವಾಹನಗಳ ಮುಂದಿನ ಸೀಟುಗಳಿಗೆ ಮೂರು ಅಂಶಗಳ ಸೀಟ್ ಬೆಲ್ಟ್ಗಳನ್ನೂ ಅಳವಡಿಸಬೇಕು ಎಂದು ಹೇಳಿದ್ದಾರೆ.
ಪತೀ ವರ್ಷವೂ ದೇಶದಲ್ಲಿ 5 ಲಕ್ಷ ಅಪಘಾತಗಳು ಸಂಭವಿಸುತ್ತಿದ್ದು, 1.5 ಲಕ್ಷ ಮಂದಿ ಸಾವನ್ನಪ್ಪುತ್ತಿದ್ದಾರೆ. ಅಪಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ