ಆನ್‍ ಲೈನ್‍ ಶಿಕ್ಷಣ ಸಾಂಪ್ರದಾಯಿಕ ತರಗತಿ ಕಲಿಕೆಗೆ ಪೂರಕ: ಎಚ್‍ಪಿ ಸಮೀಕ್ಷೆ


Team Udayavani, Jan 21, 2022, 11:11 AM IST

hp india future of learning study 2022

ಬೆಂಗಳೂರು: HP ಇಂಡಿಯಾ ಫ್ಯೂಚರ್ ಆಫ್ ಲರ್ನಿಂಗ್ ಸ್ಟಡಿ ನಡೆಸಿದ ಸಮೀಕ್ಷೆ ಪ್ರಕಾರ, ಕೋವಿಡ್‍ನಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಆನ್‍ಲೈನ್‍ ಶಿಕ್ಷಣವು ಮಕ್ಕಳ ಕಲಿಕೆಯನ್ನು ನಿರಂತರಗೊಳಿಸಲು ಸಹಾಯಕವಾಗಿದೆ ಎಂದು ತಿಳಿಸಿದೆ.

ಶೇ. 98ರಷ್ಟು ಪೋಷಕರು ಮತ್ತು ಶೇ. 99 ಶಿಕ್ಷಕರು ಆನ್‌ಲೈನ್ ಶಿಕ್ಷಣವು ಕಲಿಕೆಯನ್ನು ಮುನ್ನಡೆಸುತ್ತಿದೆ ಆನ್‌ಲೈನ್ ಕಲಿಕೆಯು ಸಾಂಪ್ರದಾಯಿಕ ತರಗತಿಯ ಕಲಿಕೆಗೆ ಪೂರಕವಾಗಿದೆ ಎಂದು ಶೇ. 91ರಷ್ಟು ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ಉನ್ನತ ಮಟ್ಟದ ಶಿಕ್ಷಣಕ್ಕಾಗಿ, ಸಾಂಪ್ರದಾಯಿಕ ತರಗತಿಗಳು ಪುನಾರಂಭವಾದ ನಂತರವೂ ಆನ್‌ಲೈನ್ ಕಲಿಕೆಯನ್ನು ಕೆಲವು ರೂಪದಲ್ಲಿ ಮುಂದುವರಿಸಲು ವಿದ್ಯಾರ್ಥಿಗಳು ಬಯಸುತ್ತಾರೆ ಎಂದು ಸಮೀಕ್ಷೆ ತಿಳಿಸಿದೆ.

ಆನ್‌ಲೈನ್ ಮತ್ತು ತರಗತಿಯ ಕಲಿಕೆಯನ್ನು ಸಂಯೋಜಿಸಿದಾಗ ಚೆನ್ನಾಗಿ ಅರ್ಥವಾಗುತ್ತದೆ, ಮತ್ತು ದೀರ್ಘಾವಧಿ ನೆನಪಿನಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ- ಇವು ವಿದ್ಯಾರ್ಥಿಗಳು ಹೈಬ್ರಿಡ್ ಕಲಿಕೆಗೆ ಆದ್ಯತೆ ನೀಡುವ ಪ್ರಮುಖ ಕಾರಣಗಳಾಗಿ ಹೊರಹೊಮ್ಮಿವೆ.

ಸಾಂಕ್ರಾಮಿಕ ಸೇರಿದಂತೆ ಅನಿವಾರ್ಯ ಕಾರಣಗಳಿಂದ ಆಗಾಗ ಶಾಲೆಗಳನ್ನು ತಾತ್ಕಾಲಿಕವಾಗಿ ಮುಚ್ಚಬೇಕಾಗುತ್ತದೆ. ಆದರೆ, ಆನ್‍ ಲೈನ್‍ ಕಲಿಕೆಯನ್ನು ಅಳವಡಿಸಿದ್ದರಿಂದ ಕಲಿಕೆಯು ಯಾವುದೇ ಅಡ್ಡಿ ಆತಂಕಗಳಿಲ್ಲದೆ ನಿರಂತರವಾಗಿ ಮುಂದುವರಿಯುತ್ತದೆ.

ಸವಾಲಿನ ಈ ಕಾಲದಲ್ಲಿ ತಂತ್ರಜ್ಞಾನವು ಸಹಾಯಕನಾಗಿ ಹೊರಹೊಮ್ಮಿದೆ. ಕಲಿಕೆಯ ಮೇಲೂ ಇದರ ಪ್ರಭಾವ ಗಾಢವಾಗಿದೆ. ಡಿಜಿಟಲ್ ಕಲಿಕೆಯತ್ತ ಒಲವು ವಿದ್ಯಾರ್ಥಿ-ಶಿಕ್ಷಕರ ನಡುವಿನ ಸಂಬಂಧವನ್ನು ಇನ್ನಷ್ಟು ಉತ್ತಮಗೊಳಿಸಿದೆ ಎಂದು HP ಇಂಡಿಯಾದ ಎಂಡಿ ಕೇತನ್ ಪಟೇಲ್ ತಿಳಿಸಿದ್ದಾರೆ.

ಮನರಂಜನೆಯಿಂದ ಕಲಿಕೆಯವರೆಗೆ, ಭಾರತವು ಬಹುತೇಕ ವೀಡಿಯೊ-ಫಸ್ಟ್ ದೇಶವಾಗಿ ಹೊರಹೊಮ್ಮಿದೆ. ವಿದ್ಯಾರ್ಥಿಗಳು (63%), ಶಿಕ್ಷಕರು (57%) ಮತ್ತು ಪೋಷಕರು (61%) ವೀಡಿಯೊ ರೂಪದಲ್ಲಿ ಅಧ್ಯಯನದ ವಸ್ತುವಿಗೆ ಹೆಚ್ಚು ಆದ್ಯತೆಯನ್ನು ನೀಡುತ್ತಿದ್ದಾರೆ.

ಸಮೀಕ್ಷೆಯಲ್ಲಿ ಭಾಗವಹಿಸಿದ 82% ಶಿಕ್ಷಕರು ಉತ್ತಮ ಆನ್‌ಲೈನ್ ಕಲಿಕೆಗೆ ಅನುಕೂಲವಾಗುವಂತೆ ಹೆಚ್ಚಿನ ಪರಿಕರಗಳ ಅಗತ್ಯವಿದೆ ಎಂದು ಹೇಳಿದ್ದಾರೆ. ಆದರೆ 74% ರಷ್ಟು ಜನರು ತಂತ್ರಜ್ಞಾನ ಆಧಾರಿತ ಸಾಧನಗಳನ್ನು ಬಳಸಲು ಮತ್ತು ಅವರ ಶಿಕ್ಷಣ ಕೌಶಲ್ಯಗಳನ್ನು ಹೆಚ್ಚಿಸಲು ಹೆಚ್ಚಿನ ತರಬೇತಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹೈಬ್ರಿಡ್ ಕಲಿಕೆಗೆ ಪಿಸಿ ಉತ್ತಮ: ಪ್ರತಿಕ್ರಿಯಿಸಿದವರಲ್ಲಿ, 88% ಶಿಕ್ಷಕರು, 72% ವಿದ್ಯಾರ್ಥಿಗಳು ಮತ್ತು 89% ಪೋಷಕರು ವಿದ್ಯಾರ್ಥಿಗಳ ನಡುವೆ ಡಿಜಿಟಲ್ ಕಲಿಕೆಗೆ ಪಿಸಿಗಳು ಸೂಕ್ತವೆಂದು ನಂಬುತ್ತಾರೆ. ಆನ್‌ಲೈನ್ ಕಲಿಕೆಗಾಗಿ ಪಿಸಿಗಳು ಅಗತ್ಯ ಎಂದು 79% ಶಿಕ್ಷಕರು ಅಭಿಪ್ರಾಯಪಟ್ಟಿದ್ದಾರೆ.

ಕಣ್ಣಿನ ಮೇಲೆ ಒತ್ತಡ ನಿವಾರಣೆ, ಫೈಲ್‌ಗಳ ತ್ವರಿತ ವರ್ಗಾವಣೆ ಮತ್ತು ಉತ್ತಮ ಕಾರ್ಯನಿರ್ವಹಣೆ ಪಿಸಿಗಳು ಆದರ್ಶ ಆಯ್ಕೆಯಾಗಿ ಹೊರಹೊಮ್ಮಲು ಪ್ರಮುಖ ಕಾರಣಗಳಾಗಿವೆ.

ಪ್ರಿಂಟರ್ ವಿದ್ಯಾರ್ಥಿಗಳಿಗೆ ಕಲಿಕೆ ಮತ್ತು ಸೃಜನಶೀಲತೆಯನ್ನು ಬೆಂಬಲಿಸುತ್ತದೆ

ಪ್ರತಿಕ್ರಿಯಿಸಿದವರಲ್ಲಿ, 75% ಶಿಕ್ಷಕರು ಕಡತಗಳಿಗೆ ಮತ್ತು ಮನೆಗೆಲಸದ ಸಲ್ಲಿಕೆಗಾಗಿ ಪ್ರಿಂಟರ್‌ಗಳನ್ನು ಬಳಸುವುದಕ್ಕೆ ಆದ್ಯತೆ ನೀಡಿದ್ದಾರೆ. ಪ್ರಿಂಟರ್‌ಗಳಿದ್ದರೆ ಕಲಿಕೆಯ ಫಲಿತಾಂಶವನ್ನು ಸುಧಾರಿಸಬಹುದೆಂದು 82% ವಿದ್ಯಾರ್ಥಿಗಳು ನಂಬುತ್ತಾರೆ. ಇದಲ್ಲದೆ, ಸುಲಭವಾಗಿ ವೀಕ್ಷಿಸಬಹುದಾದ ನೋಟ್ಸ್ ಮತ್ತು ಪ್ರ್ಯಾಕ್ಟೀಸ್ ಶೀಟ್‌ಗಳ ಅನುಕೂಲವು ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳಲ್ಲಿ ಸ್ಪಷ್ಟವಾದ ನಿಲುವಿಗೆ ಕಾರಣವಾಗಿದೆ.

207 ಶಿಕ್ಷಕರು (ವಯಸ್ಸು: 28 – 50 ವರ್ಷಗಳು), 679 ಪೋಷಕರು (ವಯಸ್ಸು: 30 – 60 ವರ್ಷಗಳು) ಮತ್ತು 711 ವಿದ್ಯಾರ್ಥಿಗಳು (ವಯಸ್ಸು: 14 – 22 ವರ್ಷಗಳು) ಸಮೀಕ್ಷೆಯಲ್ಲಿ ಭಾಗವಹಿಸಿದ್ದರು. ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತಾ, ಹೈದರಾಬಾದ್, ಬೆಂಗಳೂರು, ಲಕ್ನೋ, ಚಂಡೀಗಢ, ಪಾಟ್ನಾ, ಗುವಾಹಟಿ, ಇಂದೋರ್, ರಾಂಚಿ ಮತ್ತು ಕೊಚ್ಚಿಯಂತಹ 13 ನಗರಗಳಲ್ಲಿ ಸಂದರ್ಶನಗಳನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.