ನೆಕ್ಸಸ್‌ ಮಾಲ್‌ಗಳಲ್ಲಿ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಸ್ಥಾಪಿಸಲಿರುವ ಜಿಯೋ-ಬಿಪಿ


Team Udayavani, Jun 22, 2022, 8:56 PM IST

ನೆಕ್ಸಸ್‌ ಮಾಲ್‌ಗಳಲ್ಲಿ ಇವಿ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಸ್ಥಾಪಿಸಲಿರುವ ಜಿಯೋ-ಬಿಪಿ

ಮುಂಬೈ : ರಿಲಾಯನ್ಸ್‌ ಮತ್ತು ಬಿಪಿ ಜಂಟಿ ಸಂಸ್ಥೆಯಾಗಿರುವ ಜಿಯೋ-ಬಿಪಿ ಅಡಿಯಲ್ಲಿ ನೆಕ್ಸಸ್‌ ಮಾಲ್‌ಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಸ್ಥಾಪಿಸಲಿದೆ. 13 ನಗರಗಳಲ್ಲಿ ನೆಕ್ಸಸ್‌ನ 17 ಮಾಲ್‌ಗಳು ಇದ್ದು, ಇದರಲ್ಲಿ ಅತ್ಯಾಧುನಿಕ ಚಾರ್ಜಿಂಗ್‌ ಸ್ಟೇಷನ್‌ಗಳು ಮತ್ತು ಬ್ಯಾಟರಿ ಸ್ವ್ಯಾಪಿಂಗ್‌ ಸ್ಟೇಷನ್‌ಗಳನ್ನು ಸ್ಥಾಪಿಸಲಾಗುತ್ತದೆ.

ಎಲೆಕ್ಟ್ರಾನಿಕ್ ವಾಹನಕ್ಕೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಜಿಯೋ-ಬಿಪಿ ಶ್ರಮಿಸುತ್ತಿದೆ. ಕಳೆದ ವರ್ಷ ಭಾರತದಲ್ಲೇ ಎರಡು ಅತಿದೊಡ್ಡ ಇವಿ ಚಾರ್ಜಿಂಗ್‌ ಹಬ್‌ಗಳನ್ನು ಕಂಪನಿ ಸ್ಥಾಪಿಸಿದೆ. ನೆಕ್ಸಸ್‌ ಮಾಲ್‌ಗಳ ಜೊತೆಗಿನ ಈ ಸಹಭಾಗಿತ್ವದ ಅಡಿಯಲ್ಲಿ ದಿನವಿಡೀ ಕೆಲಸ ಮಾಡುವ ಚಾರ್ಜಿಂಗ್‌ ಮೂಲಸೌಕರ್ಯವನ್ನು ಸ್ಥಾಪಿಸಲಾಗುತ್ತದೆ. ಇದು ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರದ ವಾಹನಗಳಿಗೆ ಚಾರ್ಜಿಂಗ್‌ ಮತ್ತು ಬ್ಯಾಟರಿ ಸ್ವ್ಯಾಪಿಂಗ್‌ ವ್ಯವಸ್ಥೆ ಇರಲಿದೆ. ಮೊದಲ ಹಂತದಲ್ಲಿ, ನವಿ ಮುಂಬೈ, ಬೆಂಗಳೂರು, ಹೈದರಾಬಾದ್, ಪುಣೆ ಮತ್ತು ಅಹಮದಾಬಾದ್‌ನಲ್ಲಿರುವ ನೆಕ್ಸಸ್‌ ಮಾಲ್‌ಗಳಲ್ಲಿ ಜೂನ್ 2022 ರಿಂದ ಚಾರ್ಜಿಂಗ್‌ ಸ್ಟೇಷನ್‌ಗಳು ಲಭ್ಯವಾಗಿರಲಿವೆ.

ಇದನ್ನೂ ಓದಿ : ದುಬೈ: ಯೋಗಾದಲ್ಲಿ ಗಿನ್ನೆಸ್‌ ರೆಕಾರ್ಡ್‌ ಬರೆದ ಭಾರತೀಯ ಯೋಗ ಟೀಚರ್‌

ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚು ಹೆಚ್ಚು ಜನರು ಬಳಸಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ತಮ್ಮ ಮಾಲ್‌ಗಳಲ್ಲಿ ವಾಹನಗಳನ್ನು ಚಾರ್ಜ್‌ ಮಾಡಿಸಿಕೊಳ್ಳುವಂತೆ ತಮ್ಮ ಗ್ರಾಹಕರಿಗೆ ನೆಕ್ಸಸ್‌ ಪ್ರೋತ್ಸಾಹಿಸಲಿದೆ. 13 ನಗರಗಳಲ್ಲಿ 17 ಮಾಲ್‌ಗಳನ್ನು ಹೊಂದಿರುವ ನೆಕ್ಸಸ್‌ ಮಾಲ್‌ಗಳು ಸದ್ಯ ದೇಶದ ಅತಿದೊಡ್ಡ ಮಾಲ್‌ಗಳಲ್ಲಿ ಒಂದಾಗಿದೆ. ಇದು ಈಗಾಗಲೇ 100% ವಹಿವಾಟು ಚೇತರಿಕೆಯನ್ನು ಗಳಿಸಿದೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ನೆಕ್ಸಸ್‌ ಮಾಲ್‌ಗಳು ಗ್ರಾಹಕರಲ್ಲಿ ವಿಶ್ವಾಸ ಮೂಡಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿತ್ತು. ಇದರಿಂದಾಗಿ ಮಾಲ್‌ಗಳಲ್ಲಿ ವಹಿವಾಟು ಅತ್ಯಂತ ಬೇಗ ಚೇತರಿಸಿಕೊಂಡಿದೆ.

ಜಿಯೋ-ಬಿಪಿ ಪಲ್ಸ್‌ ಅಡಿಯಲ್ಲಿ ಭಾರತೀಯ ಗ್ರಾಹಕರಿಗೆ ಚಾರ್ಜಿಂಗ್‌ ಮೂಲಸೌಕರ್ಯವನ್ನು ಜಿಯೋ-ಬಿಪಿ ಜಂಟಿ ಸಂಸ್ಥೆಯು ಒದಗಿಸುತ್ತಿದೆ. ಜಿಯೋ-ಬಿಪಿ ಪಲ್ಸ್‌ ಮೊಬೈಲ್‌ ಆಪ್‌ ಬಳಸಿಕೊಂಡು ಗ್ರಾಹಕರು ತಮ್ಮ ಸಮೀಪದಲ್ಲಿ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಹುಡುಕಬಹುದು ಮತ್ತು ತಮ್ಮ ಎಲೆಕ್ಟ್ರಿಕ್ ವಾಹನಗಳನ್ನು ಸುಲಭವಾಗಿ ಚಾರ್ಜ್‌ ಮಾಡಿಕೊಳ್ಳಬಹುದು.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.