ದೇಶದ ಕಾನೂನು ಸುಪ್ರೀಂ, ಟ್ವಿಟರ್ ನಿಮಯ ಪಾಲಿಸಲೇ ಬೇಕು: ಸಚಿವ ವೈಷ್ಣವ್
ಕಾಯ್ದೆ 2000, ಸೆಕ್ಷನ್ 79(01)ರ ಅನ್ವಯ ಕಾನೂನು ರಕ್ಷಣೆಯನ್ನು ಕಳೆದುಕೊಳ್ಳಲಿದೆ ಎಂದು ಹೇಳಿದರು.
Team Udayavani, Jul 8, 2021, 3:52 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ನೂತನ ಮಾಹಿತಿ ತಂತ್ರಜ್ಞಾನ ಸಚಿವರಾಗಿ ಅಶ್ವಿನಿ ವೈಷ್ಣವ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಟ್ವೀಟರ್ ಗೆ ಎಚ್ಚರಿಕೆ ನೀಡಿದ್ದು, ದೇಶದ ಸರ್ವೊಚ್ಛ ಕಾನೂನನ್ನು ಪಾಲಿಸಲೇಬೇಕು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:‘ವಿಕ್ರಾಂತ್ ರೋಣ’ ಹಾಡಿಗೆ ಜಾಕ್ವೆಲಿನ್ ಪಡೆಯುತ್ತಿರುವ ಸಂಭಾವನೆ ಎಷ್ಟು ಕೋಟಿ ?
ನೂತನ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಅನುಸರಿಸಲು ಟ್ವಿಟರ್ ಕೇಂದ್ರ ಸರ್ಕಾರದ ಜತೆ ಜಿದ್ದಾಜಿದ್ದಿಗೆ ಬಿದ್ದಿರುವ ನಡುವೆಯೇ ನೂತನ ಸಚಿವ ವೈಷ್ಣವ್ ಈ ಎಚ್ಚರಿಕೆಯನ್ನು ನೀಡಿದ್ದಾರೆ. ಮುಖ್ಯವಾಗಿ ಭಾರತದ ಬಳಕೆದಾರರಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣವಾದ ಟ್ವಿಟರ್ ಕುಂದು ಕೊರತೆ ಇತ್ಯರ್ಥಪಡಿಸುವ ಅಧಿಕಾರಿಯನ್ನು ನೇಮಕ ಮಾಡಿಲ್ಲವಾಗಿತ್ತು.
ದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೈಷ್ಣವ್, ಭಾರತದಲ್ಲಿ ವಾಸಿಸುವವರು ಮತ್ತು ಕಾರ್ಯನಿರ್ವಹಿಸುವವರು ಈ ದೇಶದ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ತಿಳಿಸಿದರು.
ದೇಶದಲ್ಲಿ ಜಾರಿಗೊಳಿಸಿರುವ ನೂತನ ಮಾಹಿತಿ ತಂತ್ರಜ್ಞಾನ ಕಾಯ್ದೆಯನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ಕಡ್ಡಾಯವಾಗಿ ಪಾಲಿಸಲೇಬೇಕು. ಐಟಿ ಕಾಯ್ದೆಯನ್ನು ಅನುಸರಿಸದೇ ಇರುವುದು ಐಟಿ ನಿಯಮಗಳ ಪಾಲನೆ ಉಲ್ಲಂಘಟನಯಾಗಲಿದೆ. ಇದರ ಪರಿಣಾಮ ಐಟಿ ಕಾಯ್ದೆ 2000, ಸೆಕ್ಷನ್ 79(01)ರ ಅನ್ವಯ ಕಾನೂನು ರಕ್ಷಣೆಯನ್ನು ಕಳೆದುಕೊಳ್ಳಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್