ಮೊಬೈಲ್‌ ಬ್ಯಾಂಕಿಂಗ್‌ಗೆ ಮಾಲ್ವೇರ್‌


Team Udayavani, May 15, 2020, 7:31 AM IST

ಮೊಬೈಲ್‌ ಬ್ಯಾಂಕಿಂಗ್‌ಗೆ ಮಾಲ್ವೇರ್‌

ಸಾಂದರ್ಭಿಕ ಚಿತ್ರ

ನವದೆಹಲಿ: ನಿಮ್ಮಲ್ಲಿ ಆ್ಯಂಡ್ರಾಯ್ಡ್ ಮೊಬೈಲ್‌ ಇದೆಯೇ, ನೀವು ಮೊಬೈಲ್‌ ಬ್ಯಾಂಕಿಂಗ್‌ ಬಳಕೆದಾರರೇ? ಸ್ವಲ್ಪ ಎಚ್ಚರ ತಪ್ಪಿದರೂ ನಿಮ್ಮ ಖಾತೆಗೆ ಕನ್ನ ಬೀಳುವ ಸಾಧ್ಯತೆಯಿದೆ.
ಇವೆಂಟ್‌ ಬೋಟ್‌ ಎಂಬ ಮೊಬೈಲ್‌ ಬ್ಯಾಂಕಿಂಗ್‌ ಮಾಲ್ವೇರ್‌ ಒಂದು ಇತ್ತೀಚೆಗೆ ಸೈಬರ್‌ ಸ್ಪೇಸ್‌ನಲ್ಲಿ ಸಕ್ರಿಯವಾಗಿದ್ದು, ಭಾರತದ ಆ್ಯಂಡ್ರಾಯ್ಡ್ ಫೋನ್‌ ಬಳಕೆದಾರರ ವೈಯಕ್ತಿಕ ಹಣಕಾಸಿನ ಮಾಹಿತಿಯನ್ನು ಕದಿಯುತ್ತಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಫೆಡರಲ್‌ ಸೈಬರ್‌ ಸೆಕ್ಯೂರಿಟಿ ಸಂಸ್ಥೆಯೇ ಹೊರಹಾಕಿದೆ.

“ಟ್ರೋಜನ್‌ ವೈರಸ್‌ ನಿಮಗೆ ಅರಿವಿಲ್ಲದಂತೆಯೇ ಕಣ್ಣಿಗೆ ಮಣ್ಣೆರಚಿ ಹಣಕಾಸು ಮಾಹಿತಿಯನ್ನು ಕದಿಯುತ್ತಿದೆ’ ಎಂದು ಸಂಸ್ಥೆ ಎಚ್ಚರಿಕೆ ನೀಡಿದೆ. ಈ ಟ್ರೋಜನ್‌ ವೈರಸ್‌ ಥರ್ಡ್‌ ಪಾರ್ಟಿ ಅಪ್ಲಿಕೇಷನ್‌ ಡೌನ್‌ಲೋಡ್‌ ಮಾಡುವಂಥ ಸೈಟ್‌ಗಳನ್ನು ಬಳಸಿಕೊಂಡು ಮೈಕ್ರೋಸಾಫ್ಟ್ ವರ್ಡ್‌, ಅಡೋಬೆ ಪ್ಲ್ಯಾಶ್‌ ಹಾಗೂ ಇತರೆ ಅಪ್ಲಿಕೇಷನ್‌ಗಳಂತೆ ಸೋಗು ಹಾಕಿ ಗೊತ್ತೇ ಇಲ್ಲದಂತೆ ನಿಮ್ಮ ಮೊಬೈಲ್‌ ಫೋನ್‌ನೊಳಕ್ಕೆ ನುಸುಳುತ್ತದೆ. ಗ್ರಾಹಕರ ಹಣಕಾಸು ಆ್ಯಪ್‌ಗ್ಳಲ್ಲಿನ ದತ್ತಾಂಶಗಳನ್ನು ಕದಿಯುವ, ಎಸ್‌ಎಂಎಸ್‌ ಸಂದೇಶಗಳನ್ನು ಓದುವ ಮತ್ತು ಛೇದಿಸುವ ಸಾಮರ್ಥ್ಯವನ್ನು ಈ ಮಾಲ್ವೇರ್‌ ಹೊಂದಿದೆ.

ಇವೆಂಟ್‌ ಬೋಟ್‌ ಸದ್ಯಕ್ಕೆ ಅಮೆರಿಕ ಮತ್ತು ಐರೋಪ್ಯ ಮೂಲದ ಬ್ಯಾಂಕಿಂಗ್‌ ಆ್ಯಪ್ಲಿಕೇಷನ್‌ಗಳು, ಹಣ ವರ್ಗಾವಣೆ ಸೇವೆಗಳು, ಕ್ರಿಪ್ಟೋಕರೆನ್ಸಿ ವ್ಯಾಲೆಟ್‌ಗಳು, ಇತರ ಹಣಕಾಸು ಸಂಬಂಧಿ ಆ್ಯಪ್ಲಿಕೇಷನ್‌ ಸೇರಿದಂತೆ ಸುಮಾರು 200 ವಿವಿಧ ಆ್ಯಪ್ಲಿಕೇಷನ್‌ಗಳನ್ನು ಟಾರ್ಗೆಟ್‌ ಮಾಡಿದೆ. ಈವರೆಗೂ ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಇವೆಂಟ್‌ ಬೋಟ್‌ ಕಾಣಸಿಕ್ಕಿಲ್ಲ. ಆದರೆ, ಅದು ಮೊಬೈಲ್‌ ಫೋನ್‌ನ ನೈಜ ಅಪ್ಲಿಕೇಷನ್‌ ನ ಸೋಗಿನಲ್ಲಿ ಕಾಣಿಸಿಕೊಂಡು ಗ್ರಾಹಕರನ್ನು ಯಾಮಾರಿಸುವ ಸಾಧ್ಯತೆ ಅಧಿಕವಾಗಿದೆ ಎಂದು ಭಾರತದ ಕಂಪ್ಯೂಟರ್‌ ತುರ್ತು
ಪ್ರತಿಕ್ರಿಯೆ ತಂಡ(ಸಿಇಆರ್‌ ಟಿ- ಇಂಡಿಯಾ) ಹೇಳಿದೆ. ಅಲ್ಲದೆ, ಯಾವುದೇ ಕಾರಣಕ್ಕೂ ವಿಶ್ವಾಸಾರ್ಹವಲ್ಲದ ಮೂಲಗಳಿಂದ, ಅಪರಿಚಿತ ವೆಬ್‌ ಸೈಟ್‌, ಲಿಂಕ್‌ಗಳಿಂದ ಆ್ಯಪ್ಲಿಕೇಷನ್‌
ಗಳನ್ನು ಡೌನ್‌ಲೋಡ್‌ ಅಥವಾ ಇನ್‌ಸ್ಟಾಲ್‌ ಮಾಡಿಕೊಳ್ಳಬೇಡಿ. ಗೂಗಲ್‌ ಪ್ಲೇಸ್ಟೋರ್‌ನಿಂದ ಕೂಡ ಯಾವುದೇ ಆ್ಯಪ್‌ ಡೌನ್‌ಲೋಡ್‌ ಮಾಡುವ ಮುನ್ನ ಅವುಗಳ ವಿವರವನ್ನು ಪರಿಶೀಲಿಸಿ, ಎಷ್ಟು ಡೌನ್‌ ಲೋಡ್‌ ಆಗಿದೆ, ಬಳಕೆದಾರರು ಏನನ್ನುತ್ತಾರೆ, ಗ್ರಾಹಕರ ಪ್ರತಿಕ್ರಿಯೆಯೇನು ಎಂಬ ಮಾಹಿತಿಯನ್ನು ಸೂಕ್ಷ್ಮವಾಗಿ ಓದಿಕೊಂಡೇ ಡೌನ್‌ಲೋಡ್‌ ಮಾಡಿ ಎಂದು ಸಿಇಆರ್‌ಟಿ
ಸಲಹೆ ನೀಡಿದೆ.

ಟಾಪ್ ನ್ಯೂಸ್

14

ಭಾರತದಲ್ಲಿ ರಿಲೀಸ್‌ಗೂ ಮುನ್ನ: ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

ಭಾರತದಲ್ಲಿ ರಿಲೀಸ್‌ಗೂ ಮುನ್ನ: ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.