ಬರಲಿದೆ ಮಾರುತಿ-ಸುಜುಕಿ ಹೈಬ್ರಿಡ್‌ ಕಾರು 


Team Udayavani, Aug 25, 2021, 6:20 AM IST

Untitled-1

ಹೊಸದಿಲ್ಲಿ: ಪ್ರತೀ ಲೀಟರ್‌ ಪೆಟ್ರೋಲ್‌ಗೆ 104.98 ರೂ. ಆಗುತ್ತಿರುವಂತೆಯೇ ವಿದ್ಯುತ್‌ ಚಾಲಿತ ಕಾರುಗಳಿಗೆ ಬೇಡಿಕೆ ಹೆಚ್ಚಲಾರಂಭಿಸಿದೆ.

ಆದರೆ ಸೂಕ್ತ ರೀತಿಯಲ್ಲಿ ಚಾರ್ಜಿಂಗ್‌ ವ್ಯವಸ್ಥೆಯೇ ಸವಾಲಾಗಿದೆ. ಅದಕ್ಕೆ ಪರಿಹಾರ ಸೂತ್ರ ವನ್ನು ದೇಶದ ಜನಪ್ರಿಯ ಕಾರು ತಯಾರಿಕ ಕಂಪೆನಿ ಮಾರುತಿ ಸುಜುಕಿ ಕಂಡುಹಿಡಿಯಲು ಮುಂದಾಗಿದೆ. ಚಲಿಸುತ್ತಲೇ ಸ್ವಯಂ ಚಾಲಿತವಾಗಿ ಚಾರ್ಜ್‌ ಆಗುವ ಹೈಬ್ರಿಡ್‌ (ಎಚ್‌ಇವಿ)  ವ್ಯವಸ್ಥೆ ಹೊಂದಿರುವ ಕಾರನ್ನು ಸಂಶೋಧಿಸಿ ಅಭಿವೃದ್ಧಿ ಪಡಿಸಲು ಟೊಯೊಟಾ ಜತೆಗೆ ಒಪ್ಪಂದಕ್ಕೆ ನಿರ್ಧರಿಸಿದೆ.

ಟಾಟಾ ಮೋಟಾರ್ಸ್‌, ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಮತ್ತು ಹ್ಯುಂಡೈ ಈಗಾಗಲೇ ವಿದ್ಯುತ್‌ಚಾಲಿತ ಕಾರುಗಳನ್ನು ಮಾರುಕಟ್ಟೆಗೆ ತಂದಿವೆ. ವಿದ್ಯುತ್‌ ಕಾರುಗಳ ತಯಾರಿಕೆಯಲ್ಲಿ ಮಾರುತಿ ಸುಜುಕಿ ಉಳಿದವುಗಳಂತೆ ಮುಂದಿಲ್ಲ. ಮಾರುತಿ ಸುಜುಕಿಯ  ಕಾರ್ಪೊರೇಟ್‌ ಯೋಜನೆಗಳು ಮತ್ತು ಸರಕಾರಿ ವ್ಯವಹಾರಗಳ ವಿಭಾಗದ ಉಪಾಧ್ಯಕ್ಷ ರಾಹುಲ್‌ ಭಾರತಿ ಮಾತನಾಡಿ “ಟೊಯೊಟಾ ಜತೆಗೂಡಿ ಕೆಲವು ವಾಹನಗಳವನ್ನು ಹೈಬ್ರಿಡ್‌ ವ್ಯಾಪ್ತಿಯಲ್ಲಿ ಮುಂದಿನ ತಿಂಗಳು ಪರೀಕ್ಷೆಗೆ ಒಳಪಡಿಸಲಾಗುತ್ತದೆ’ ಎಂದಿದ್ದಾರೆ.

ಸ್ವಯಂ ಚಾಲಿತವಾಗಿ ಚಾರ್ಜ್‌ ಆಗುವ ಕಾರುಗಳಲ್ಲಿ ಇಂಟರ್‌ನಲ್‌ ಕಂಬಷನ್‌ ಎಂಜಿನ್‌ (ಐಸಿಇ)ಮೂಲಕ ಬ್ಯಾಟರಿ ಗಳಿಗೆ ಇಂಧನ ಪೂರೈಸುತ್ತದೆ. ಜತೆಗೆ ಟೈರ್‌ಗಳು ಚಲಿಸುತ್ತಿರುವಂತೆಯೇ ಹೆಚ್ಚುವರಿ ವಿದ್ಯುತ್‌ ಪೂರೈಸಲಿವೆ. ಹೀಗಾಗಿ ಐಸಿಇ ವ್ಯವಸ್ಥೆಯ ಮೂಲಕ ಹೆಚ್ಚಿನ ಮೈಲೇಜ್‌ ಕೂಡ ಸಿಗಲಿದೆ. ಜತೆಗೆ ಪರಿಸರ ಮಾಲಿನ್ಯ ಕೂಡ ಕಡಿಮೆಯಾಗಲಿದೆ ಎಂದಿದ್ದಾರೆ.

ಇಂಥ ಕಾರುಗಳು ಮಾರುಕಟ್ಟೆಗೆ ಬಂದರೆ, ದೂರ ಸಂಚಾರದ ವೇಳೆ ಕ್ಷಿಪ್ರ ಚಾರ್ಜಿಂಗ್‌ ಕೇಂದ್ರಗಳನ್ನು ಹುಡುಕುವ ಪರಿಸ್ಥಿತಿಯೂ ಬರುವುದಿಲ್ಲ. 2018 ರಿಂದಲೇ ವ್ಯಾಗನ್‌ ಆರ್‌ ಕಾರುಗಳ ಬ್ಯಾಟರಿಗಳನ್ನು ಬದಲಾಯಿಸಿ ಪರೀಕ್ಷೆಗೆ ಒಳಪಡಿಸುವ ಕ್ರಮ ಜಾರಿಗೆ ತಂದಿದೆ. 2025ರ ವೇಳೆಗೆ ಮಾರುತಿ ಸುಜುಕಿ ವಿದ್ಯುತ್‌ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಸಾಧ್ಯತೆ ಇದ್ದು, 10 ಲಕ್ಷ ರೂ. ಒಳಗೆ ಬೆಲೆ ಇರಬಹುದೆಂದು ಅಂದಾಜಿಸಲಾಗುತ್ತಿದೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

Mahindra XUV 300 ಹೆಸರು ಬದಲು…ಈಗ XUV 3XO; ಏ.29ಕ್ಕೆ ಮಾರುಕಟ್ಟೆಗೆ ಬಿಡುಗಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.