ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್‍ಗಳ ದೇಣಿಗೆ

ಸೋನು ಸೂದ್‍ ಸಹಯೋಗದಲ್ಲಿ ನೂತನ ಕಾರ್ಯಕ್ರಮ #ಶಿಕ್ಷಾ ಹರ್ ಹಾಥ್‍

Team Udayavani, Jan 28, 2021, 11:08 AM IST

ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್‍ಗಳ ದೇಣಿಗೆ

ಬೆಂಗಳೂರು: ದೇಶದ ನಂ.1 ಸ್ಮಾರ್ಟ್‌ಫೋನ್ ಮತ್ತು ಸ್ಮಾರ್ಟ್ ಟಿ.ವಿ. ಸಂಸ್ಥೆ ಎಂಐ ಇಂಡಿಯಾದಿಂದ ಬಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗ ನೆರವು ನೀಡುವ ಶಿಕ್ಷಾಹರ್‌ಹಾಥ್ ಎಂಬ ಕಾರ್ಯಕ್ರಮವನ್ನು ಖ್ಯಾತ ನಟ ಸೋನು ಸೂದ್ ಅವರ ಸಹಯೋಗದಲ್ಲಿ ಪ್ರಾರಂಭಿಸಿದೆ.

ಈ ಕಾರ್ಯಕ್ರಮವು ದೇಶಾದ್ಯಂತ ಸ್ಮಾರ್ಟ್‌ಫೋನ್‌ಗಳ ಲಭ್ಯತೆ ಇಲ್ಲದೆ ಆನ್‌ಲೈನ್ ಶಿಕ್ಷಣ ಪಡೆಯಲಾಗದ ದುರ್ಬಲ ವರ್ಗಗಳ ಮಕ್ಕಳಿಗೆ ನೆರವಾಗುತ್ತದೆ. ಈ ಸಹಯೋಗದ ಭಾಗವಾಗಿ ಎಂಐ ಇಂಡಿಯಾ ಸಾವಿರಾರು ವಿದ್ಯಾರ್ಥಿಗಳಿಗೆ ರೆಡ್‌ಮಿ ಸ್ಮಾರ್ಟ್‌ಫೋನ್‌ಗಳನ್ನು ದೇಣಿಗೆ ನೀಡಲು ನಿರ್ಧರಿಸಿದೆ.

ಇದನ್ನೂ ಓದಿ:ಸರಳವಾಗಿ ಸೆಟ್ಟೇರಿದ ಬೆಲ್‌ಬಾಟಂ-2: ರಿಷಭ್ ಗೆ ಹರಿಪ್ರಿಯಾ, ತಾನ್ಯ ಹೋಪ್ ಸಾಥ್

ಹೆಚ್ಚುವರಿಯಾಗಿ ಈ ಬ್ರಾಂಡ್ ಗ್ರಾಹಕರಿಗೆ ಅವರ ಹಳೆಯ ಸ್ಮಾರ್ಟ್‌ಫೋನ್‌ಗಳನ್ನು ನೀಡಲು ಮೈಕ್ರೊಸೈಟ್ ಪ್ರಾರಂಭಿಸಿದೆ. ಗ್ರಾಹಕರು https://shikshaharhaath.com ಗೆ ಭೇಟಿ ನೀಡಬಹುದು ಮತ್ತು ಅವರ ಫೋನ್‌ಗಳನ್ನು ನೀಡಬಹುದು. ಗ್ರಾಹಕರು ತಮ್ಮ ಸುಸ್ಥಿತಿಯಲ್ಲಿರುವ ಸ್ಮಾರ್ಟ್‌ಫೋನ್‌ಗಳನ್ನು ಹತ್ತಿರದ ಎಂಐ ಹೋಮ್, ಎಂಐ ಸ್ಟುಡಿಯೊ, ಎಂಐ ಸರ್ವೀಸ್ ಸೆಂಟರ್‌ಗಳಲ್ಲಿ ಹಾಕಬಹುದು. ಈ ಸೆಕೆಂಡ್ ಹ್ಯಾಂಡ್ ಸ್ಮಾರ್ಟ್‌ಫೋನ್‌ಗಳನ್ನು ಎಂಐ ಇಂಡಿಯಾದ ಸರ್ವೀಸ್ ಸೆಂಟರ್‌ಗಳಲ್ಲಿ ದುರಸ್ತಿ ಮಾಡಿ ನವೀಕರಿಸಿ ಮಕ್ಕಳಿಗೆ ನೀಡಲಾಗುತ್ತದೆ.

ಈ ಸಹಯೋಗ ಕುರಿತು ಎಂಐ ಇಂಡಿಯಾದ ಎಂ.ಡಿ. ಮನು ಕುಮಾರ್ ಜೈನ್ ಮಾತನಾಡಿ, ನಾವು ತಂತ್ರಜ್ಞಾನ ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದರಲ್ಲಿ ನಂಬಿಕೆ ಇರಿಸಿದ್ದೇವೆ. ಶಿಕ್ಷಣವು ಮುಂದಿನ ತಲೆಮಾರುಗಳ ಸಬಲೀಕರಣ ಮತ್ತು ಸುರಕ್ಷಿತಗೊಳಿಸುವ ಪ್ರಮುಖ ಸಾಧನವಾಗಿದೆ. ಕೋವಿಡ್ ಸಮಯದಲ್ಲಿ ನಾವು ಸ್ಮಾರ್ಟ್‌ಫೋನ್ ಇಲ್ಲದೇ ಇರುವುದರಿಂದ ಯಾವುದೇ ಮಗುವು ಶಿಕ್ಷಣವನ್ನು ತಪ್ಪಿಸಿಕೊಳ್ಳಬಾರದು ಎಂದು ದೃಢವಾಗಿ ನಂಬುತ್ತೇವೆ. ಶಿಕ್ಷಾಹರ್‌ಹಾಥ್ ಉಪಕ್ರಮವು ಎಲ್ಲರಿಗೂ ಶಿಕ್ಷಣ ಎನ್ನುವ ನಮ್ಮ ಬದ್ಧತೆಯನ್ನು ದೃಢೀಕರಿಸುತ್ತದೆ. ಸೋನು ಸೂದ್ ಅವರೊಂದಿಗೆ ಈ ಉಪಕ್ರಮ ಮುಂದಕ್ಕೆ ಕೊಂಡೊಯ್ಯಲು ಸಹಯೋಗಕ್ಕೆ ಬಹಳ ಹೆಮ್ಮೆ ಪಡುತ್ತೇವೆ. ಕೋವಿಡ್ ಸಮಯದಲ್ಲಿ ಅವರ ಅದ್ಭುತ ಕೊಡುಗೆಯಿಂದ ಸೋನು ಅಸಹಾಯಕರಿಗೆ ನೆರವಾಗಿ ಇತರರಿಗೂ ಸ್ಫೂರ್ತಿ ತುಂಬಿದ್ದಾರೆ ಎಂದರು.

ಇದನ್ನೂ ಓದಿ: ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!

ನಟ ಸೋನು ಸೂದ್ ಮಾತನಾಡಿ, ಈ ಸಾಂಕ್ರಾಮಿಕವು ನಮ್ಮ ಸ್ಥೈರ್ಯವನ್ನು ಅಲ್ಲಾಡಿಸಿದೆ ಮತ್ತು ನಾವು ಅದನ್ನು ನಿಭಾಯಿಸಿದ್ದೇ ಅಲ್ಲದೆ ಮತ್ತಷ್ಟು ಸದೃಢ ಮತ್ತು ಒಗ್ಗಟ್ಟಿನಿಂದ ಬೆಳೆದಿದ್ದೇವೆ. ಲಾಕ್‌ಡೌನ್ ಶಿಕ್ಷಣದ ವ್ಯಾಖ್ಯೆಯನ್ನು ಬದಲಾಯಿಸಿದೆ ಮತ್ತು ಇದು ಬಡ ಸಮುದಾಯಗಳನ್ನು ಬಾಧಿಸಿದೆ. ಆದ್ದರಿಂದ ಮಕ್ಕಳಿಗೆ ಆನ್‌ಲೈನ್ ತರಗತಿಗಳಿಗೆ ಅವಕಾಶ ಕಲ್ಪಿಸಲು ಮತ್ತು ಅವರ ಶಿಕ್ಷಣದ ಮುಂದುವರಿಕೆ ದೃಢೀಕರಿಸಲು ಎಂಐ ಇಂಡಿಯಾದೊಂದಿಗೆ ನಮ್ಮ ಸಹಯೋಗ ಉತ್ತಮ ಭವಿಷ್ಯ ನಿರ್ಮಿಸುವಲ್ಲಿ ನೆರವಾಗುವ ಹೆಜ್ಜೆಯಾಗಿದೆ. ಈ ಉಪಕ್ರಮವು ದೇಶದಲ್ಲಿ ಸಾಕ್ಷರತೆ ಮತ್ತು ಆನ್‌ಲೈನ್ ಶಿಕ್ಷಣ ಹೆಚ್ಚಿಸುವ ನಮ್ಮ ಹೆಜ್ಜೆಯಾಗಿದೆ’ ಎಂದರು.

ಎಂಐ ಇಂಡಿಯಾದ ಸಿಎಸ್‌ಆರ್ ಲೀಡ್ ಪ್ರತೀಕ್ ದಾಸ್ ಮಾತನಾಡಿ, ಶಿಕ್ಷಾಹರ್‌ಹಾಥ್ ಭಾರತದ ಭವಿಷ್ಯದ ನಾಯಕರನ್ನು ಸುಶಿಕ್ಷಿತರಾಗಿಸುವ ಮತ್ತು ಸಬಲೀಕರಣಗೊಳಿಸುವ ನಮ್ಮ ಧ್ಯೇಯದ ವಿಸ್ತರಣೆಯಾಗಿದೆ. ಸೋನು ಸೂದ್ ದೇಶಾದ್ಯಂತ ಅತ್ಯಂತ ದುರ್ಬಲರನ್ನು ತಲುಪುವಲ್ಲಿ ನೆರವಾಗಿದ್ದಕ್ಕೆ ಬಹಳ ಉತ್ಸುಕರಾಗಿದ್ದೇವೆ. ಈ ಉಪಕ್ರಮವು ಸ್ಮಾರ್ಟ್‌ಫೋನ್‌ಗಳನ್ನು ದಾನ ಮಾಡುವುದಾಗಿದೆ ಹಾಗೂ ಜನರು ತಮ್ಮ ಹಳೆಯ ಫೋನ್‌ಗಳನ್ನು ದುರ್ಬಲರಿಗೆ ದಾನ ಮಾಡಲು ಕೂಡಾ ಉತ್ತೇಜಿಸುವುದಾಗಿದೆ’ ಎಂದರು.

ಈ ಚಳವಳಿಯು ಹಿಂದೆ ಮಕ್ಕಳಿಗೆ ಈ ಸ್ಮಾರ್ಟ್‌ಫೋನ್‌ಗಳು ಆನ್‌ಲೈನ್ ಕಲಿಕೆ ಮತ್ತು ಶಿಕ್ಷಣಕ್ಕೆ ಲಭ್ಯವಾಗಬೇಕೆನ್ನುವ ನಿಟ್ಟಿನಲ್ಲಿ ಎಂಐ ಇಂಡಿಯಾ ಕೈಗೊಂಡ ಪ್ರಯತ್ನಗಳ ಮುಂದುವರಿಕೆಯಾಗಿದೆ. ಎಂಐ ಇಂಡಿಯಾ ತನ್ನ 2020ರಲ್ಲಿ ತನ್ನ ಎಂಐ ಸ್ಕಾಲರ್‌ಶಿಪ್ ಪ್ರೋಗ್ರಾಮ್ ಮೂಲಕ ಎಲ್ಲರಿಗೂ ಲಭ್ಯವಾಗುವ ಶಿಕ್ಷಣ ಪೂರೈಸುವ ನಿಟ್ಟಿನಲ್ಲಿ ಪ್ರಾರಂಭಿಸಿತು. ಈ ಬ್ರಾಂಡ್ ಟೀಚ್ ಫಾರ್ ಇಂಡಿಯಾ ಹಾಗೂ ಬಡ್ಡಿ4ಸ್ಟಡಿ ಸಹಯೋಗದಲ್ಲಿ ಎಂಐ ಸ್ಕಾಲರ್‌ಶಿಪ್ ಪ್ರೋಗ್ರಾಮ್ ಅಡಿಯಲ್ಲಿ 2 ಕೋಟಿ ರೂ.ಗಳನ್ನು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಮೀಸಲಿರಿಸಿದ್ದು ಅವರಿಗೆ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ನೆರವಾಗುತ್ತಿದೆ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewe

Nothing ಫೋನ್ (2ಎ), ನಥಿಂಗ್ಸ್ ಬಡ್ಸ್ ಮತ್ತು ನೆಕ್‌ಬ್ಯಾಂಡ್ ಪ್ರೋ ಬಿಡುಗಡೆ

1-wqeqwe

Flipkart ನಿಂದ ಯುಪಿಐ ಹ್ಯಾಂಡಲ್ ಆರಂಭ

1-weqweqweqwe

Boult Z40 Ultra TWS ಬಿಡುಗಡೆ: ಅತ್ಯುತ್ತಮ ಗುಣಮಟ್ಟದ ಸೌಂಡ್

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

1 ಮಿಲಿಯನ್ ಮಾರಾಟ ಕಂಡ ಭಾರತೀಯ ಬ್ರಾಂಡ್ ಇಯರ್ ಬಡ್ ಯಾವುದಿದು?

18

ಅಧಿಕ ಹೃದಯ ಬಡಿತದ ಸೂಚನೆ ನೀಡಿದ ಆಪಲ್ ವಾಚ್: ಅಪಾಯದಿಂದ ಪಾರಾದ ಬೆಂಗಳೂರಿನ ಟೆಕಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.