ಮೊಬೈಲ್‌ ಮಾರ್ಕೆಟ್‌ ಬೂಮ್‌!

ಸ್ಮಾರ್ಟ್‌ ಫೋನ್‌ ಖರೀದಿಯಲ್ಲಿ ದಾಖಲೆ

Team Udayavani, Nov 18, 2019, 5:35 AM IST

Mobile-s

ಭಾರತದಲ್ಲಿ ಆರ್ಥಿಕತೆ ನಿಧಾನಗತಿಯಲ್ಲಿದೆಯೋ, ಜಿಡಿಪಿ ಕುಸಿತ ಕಂಡಿದೆಯೋ !? ಅದೇನೇ ಇರಲಿ, ಸ್ಮಾರ್ಟ್‌ಫೋನ್‌ ಮಾರುಕಟ್ಟೆಗೆ ಮಾತ್ರ ಇದ್ಯಾವುದೂ ಅಡ್ಡಿಯಾಗಿಲ್ಲ! ಈರುಳ್ಳಿ ಕೆಜಿಗೆ 70 ರೂ. ಆಗಿದೆಯೆಂದು ಭಾರತೀಯರು ಕೊಳ್ಳಲು ಹಿಂಜರಿಯಬಹುದು. ಆದರೆ ಸ್ಮಾರ್ಟ್‌ಫೋನ್‌ ಖರೀದಿಯಲ್ಲಿ ಮಾತ್ರ ಹಿಂದೇಟು ಹಾಕಿಲ್ಲ! ಜುಲೈ-ಆಗಸ್ಟ್‌-ಸೆಪ್ಟೆಂಬರ್‌ ತ್ತೈಮಾಸಿಕದಲ್ಲಿ ಭಾರತೀಯರು ಒಟ್ಟು 4.66 ಕೋಟಿ ಫೋನ್‌ ಖರೀದಿಸಿ ದಾಖಲೆ ಮಾಡಿದ್ದಾರೆ!

ಭಾರತದಲ್ಲಿ ಆರ್ಥಿಕತೆ ಮಂದಗತಿಯಲ್ಲಿದೆ ಎಂಬ ಈ ಸನ್ನಿವೇಶದಲ್ಲಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಮಾತ್ರ ನಾಗಾಲೋಟದಿಂದ ಸಾಗಿದೆ! ಈ ವರ್ಷದ ಜುಲೈನಿಂದ ಸೆಪ್ಟೆಂಬರ್‌ವರೆಗಿನ ತ್ತೈಮಾಸಿಕದಲ್ಲಿ ಹಿಂದೆಂದಿಗಿಂತ ಅಧಿಕ ಸ್ಮಾರ್ಟ್‌ ಫೋನ್‌ಗಳು ಭಾರತದಲ್ಲಿ ಮಾರಾಟವಾಗಿವೆ! ಈ ಮೂರು ತಿಂಗಳ ಅವಧಿಯಲ್ಲಿ ಮಾರಾಟವಾಗಿರುವ ಮೊಬೈಲ್‌ ಫೋನ್‌ಗಳ ಸಂಖ್ಯೆ 46.6 ಮಿಲಿಯನ್‌ (ದಶಲಕ್ಷ)! ಅಂದರೆ 4.66 ಕೋಟಿ ಸ್ಮಾರ್ಟ್‌ಫೋನ್‌ಗಳನ್ನು ಭಾರತೀಯರು ಈ ಮೂರು ತಿಂಗಳಲ್ಲಿ ಖರೀದಿಸಿದ್ದಾರೆ! ಇದು ಕಳೆದ ವರ್ಷ ಇದೇ ತ್ತೈಮಾಸಿಕದಲ್ಲಿ ಮಾರಾಟವಾಗಿದ್ದ ಸ್ಮಾರ್ಟ್‌ಫೋನ್‌ಗಳಿಗಿಂತ ಶೇ. 9.3 ರಷ್ಟು ಹೆಚ್ಚಿದೆ. ಇದು ದಾಖಲೆ ಪ್ರಮಾಣದ ಮಾರಾಟವಾಗಿದೆ.

ಐಡಿಸಿ ಸಂಸ್ಥೆ (ಇಂಟರ್‌ನ್ಯಾಷನಲ್‌ ಡಾಟಾ ಸೆಂಟರ್‌) ಬಿಡುಗಡೆ ಮಾಡಿರುವ ವರದಿಯಲ್ಲಿ ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ಬೂಮ್‌ನಲ್ಲಿ ಸಾಗಿರುವುದನ್ನು ಉಲ್ಲೇಖೀಸಲಾಗಿದೆ. ಈ ಅಧಿಕ ಮಾರಾಟಕ್ಕೆ ಪ್ರಮುಖ ಕಾರಣ ಆನ್‌ಲೈನ್‌ ಮಾರುಕಟ್ಟೆಯಲ್ಲಿ ಹಬ್ಬಗಳ ಪ್ರಯುಕ್ತ ನೀಡಲಾದ ರಿಯಾಯಿತಿಗಳು ಎಂಬುದನ್ನು ತಿಳಿಸಲಾಗಿದೆ. ಅಂಗಡಿಯೇತರ ಮಾರಾಟ ಹೊರತುಪಡಿಸಿ, ಆನ್‌ಲೈನ್‌ (ಅಮೆಜಾನ್‌, ಫ್ಲಿಪ್‌ಕಾರ್ಟ್‌ ಇತ್ಯಾದಿ) ಮೂಲಕವೇ ಶೇ. 45.5 ರಷ್ಟು ಸ್ಮಾರ್ಟ್‌ಫೋನ್‌ಗಳನ್ನು ಮಾರಾಟ ಮಾಡಲಾಗಿದೆ.

ನಂ. 1 ಸ್ಥಾನ ಕಾಯ್ದುಕೊಂಡ ಶಿಯೋಮಿ
ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಚೀನಾದ ಶಿಯೋಮಿ ಕಂಪೆನಿ ತನ್ನ ಮೊದಲ ಸ್ಥಾನವನ್ನು ಕಾಪಾಡಿಕೊಂಡಿದೆ. ಶೇ. 27.1ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ. ಈ ತ್ತೈಮಾಸಿಕದಲ್ಲಿ ಅದು ಕಳೆದ ಅವಧಿಗಿಂತ ಶೇ. 8.5ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಶಿಯೋಮಿ ಈ ತ್ತೈಮಾಸಿಕದಲ್ಲಿ 12.6 ದಶಲಕ್ಷ (1.26 ಕೋಟಿ) ಫೋನ್‌ಗಳನ್ನು ಮಾರಾಟ ಮಾಡಿದೆ.

ಇನ್ನು, ದಕ್ಷಿಣ ಕೊರಿಯಾದ ಸ್ಯಾಮ್‌ಸಂಗ್‌ ಕಂಪೆನಿ ಎರಡನೇ ಸ್ಥಾನದಲ್ಲಿದ್ದು, ಶೇ. 18.9ರಷ್ಟು ಮಾರುಕಟ್ಟೆ ಪಾಲು ಹೊಂದಿದೆ. ಅದು 88 ಲಕ್ಷ ಫೋನ್‌ಗಳನ್ನು ಈ ತ್ತೈಮಾಸಿಕದಲ್ಲಿ ಮಾರಾಟ ಮಾಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಸ್ಯಾಮ್‌ಸಂಗ್‌ 96 ಲಕ್ಷ ಫೋನ್‌ಗಳನ್ನು ಮಾರಿತ್ತು. ಕಳೆದ ವರ್ಷ ಈ ತ್ತೈಮಾಸಿಕದಲ್ಲಿ ಅದು ಶೇ. 22.6 ರಷ್ಟು ಮಾರುಕಟ್ಟೆ ಪಾಲು ಹೊಂದಿತ್ತು. ಸ್ಯಾಮ್‌ಸಂಗ್‌ ಪಾಲಿಗೆ ಕಳವಳಕಾರಿ ಸಂಗತಿಯೆಂದರೆ ಆ ಕಂಪೆನಿಯ, ಭಾರತದ ಮಾರುಕಟ್ಟೆ ಪಾಲು ಹಿಂದಿಗಿಂತ ಶೇ.8.5ರಷ್ಟು ಕಡಿಮೆಯಾಗಿದೆ.

ಮೂರನೇ ಸ್ಥಾನದಲ್ಲಿ ಚೀನಾದ ವಿವೋ ಕಂಪೆನಿಯಿದ್ದು, ಜುಲೈಯಿಂದ ಸೆಪ್ಟೆಂಬರ್‌ವರೆಗಿನ ತ್ತೈಮಾಸಿಕದಲ್ಲಿ 71 ಲಕ್ಷ ಫೋನ್‌ಗಳನ್ನು ಬಿಕರಿ ಮಾಡಿದೆ. ಅದರ ಮಾರುಕಟ್ಟೆ ಪಾಲು ಶೇ. 15.2 ಇದೆ. ಕಳೆದ ವರ್ಷ ಇದೇ ಅವಧಿಯಲ್ಲಿ ವಿವೋ 45 ಲಕ್ಷ ಫೋನ್‌ಗಳನ್ನು ಮಾರಿತ್ತು. ಈ ವರ್ಷ ಅದರ ಬೆಳವಣಿಗೆ ನಾಗಾಲೋಟದಿಂದ ಸಾಗಿದ್ದು, ಶೇ. 58.7ರಷ್ಟು ಏರಿಕೆ ಕಂಡಿದೆ. ಕಳೆದ ವರ್ಷದ ತ್ತೈಮಾಸಿಕದಲ್ಲಿ ಅದರ ಮಾರುಕಟ್ಟೆ ಪಾಲು 10.5ರಷ್ಟಿತ್ತು.

ಅತಿ ಕಡಿಮೆ ಅವಧಿಯಲ್ಲಿ ಯಶಸ್ಸು ಕಂಡ ರಿಯಲ್‌ ಮಿ ಕಂಪೆನಿ ನಾಲ್ಕನೇ ಸ್ಥಾನ ಗಳಿಸುವ ಮೂಲಕ ಟಾಪ್‌ 5ರಲ್ಲಿರುವುದು ವಿಶೇಷ. ಈ ತ್ತೈಮಾಸಿಕದಲ್ಲಿ ಅದು 67 ಲಕ್ಷ ಫೋನ್‌ಗಳನ್ನು ಭಾರತದಲ್ಲಿ ಮಾರಾಟ ಮಾಡಿದೆ. ಅದರ ಮಾರುಕಟ್ಟೆ ಪಾಲು ಶೇ. 14.3. 2018ರ ಇದೇ ತ್ತೈಮಾಸಿಕದಲ್ಲಿ ಅದು ಭಾರತದಲ್ಲಿ ಕೇವಲ 13 ಲಕ್ಷ ಫೋನ್‌ಗಳನ್ನು ಮಾರಿತ್ತು. ಕೇವಲ ಶೇ. 3.1ರಷ್ಟು ಮಾರುಕಟ್ಟೆ ಪಾಲು ಇತ್ತು. ವಿವೋ ಕಳೆದ ವರ್ಷಕ್ಕಿಂತ ಈ ಅವಧಿಯಲ್ಲಿ ಶೇ. 401 ರಷ್ಟು ಬೆಳವಣಿಗೆ ದಾಖಲಿಸಿರುವುದು ವಿಶೇಷ.

ಐದನೇ ಸ್ಥಾನ ಗಳಿಸಿರುವ ಒಪ್ಪೋ 55 ಲಕ್ಷ ಫೋನ್‌ಗಳನ್ನು ಮಾರಾಟ ಮಾಡಿದೆ. ಭಾರತದಲ್ಲಿ ಅದರ ಮಾರುಕಟ್ಟೆ ಪಾಲು ಶೇ. 11.8. ಕಳೆದ ವರ್ಷ ಇದೇ ಅವಧಿಯಲ್ಲಿ 29 ಲಕ್ಷ ಫೋನ್‌ಗಳನ್ನು ಒಪ್ಪೋ ಮಾರಾಟ ಮಾಡಿತ್ತು. ಶೇ. 6.7 ರಷ್ಟು ಮಾರುಕಟ್ಟೆ ಪಾಲು ಹೊಂದಿತ್ತು. ಕಳೆದ ಅವಧಿಗಿಂತ ಶೇ. 92.3ರಷ್ಟು ಬೆಳವಣಿಗೆಯನ್ನು ಕಂಪೆನಿ ದಾಖಲಿಸಿದೆ.

ಮೇಲಿನ ಐದು ಕಂಪೆನಿಗಳನ್ನು ಹೊರತುಪಡಿಸಿ, ಇನ್ನುಳಿದ ಕಂಪೆನಿಗಳು ಭಾರತದಲ್ಲಿ ಒಟ್ಟಾರೆಯಾಗಿ 59 ಲಕ್ಷ ಫೋನ್‌ಗಳನ್ನು ಮಾರಾಟ ಮಾಡಿವೆ. ಶೇ. 12.7 ರಷ್ಟು ಮಾರುಕಟ್ಟೆ ಪಾಲು ಹೊಂದಿವೆ. ಕಳೆದ ವರ್ಷ ಇತರ ಕಂಪೆನಿಗಳು ಶೇ. 29.8 ರಷ್ಟು ಮಾರುಕಟ್ಟೆ ಪಾಲು ಹೊಂದಿದ್ದವು. 1.26 ಕೋಟಿ ಫೋನ್‌ಗಳನ್ನು ಮಾರಿದ್ದವು. ಈ ವರ್ಷ ಇತರ ಕಂಪೆನಿಗಳು ಶೇ. 53.6ರಷ್ಟು ಕುಸಿತವನ್ನು ಮಾರಾಟದಲ್ಲಿ ಕಂಡಿವೆ.

ಒಂದೇ ಒಡೆತನದ ಕಂಪೆನಿಗಳು!
ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಶಿಯೋಮಿ, ಸ್ಯಾಮ್‌ಸಂಗ್‌ ಹೊರತುಪಡಿಸಿ ಐದನೇ ರ್‍ಯಾಂಕಿಂಗ್‌ನೊಳಗೆ ಇರುವ ವಿವೋ, ಒಪ್ಪೋ, ರಿಯಲ್‌ಮಿ ಕಂಪೆನಿಗಳ ಒಡೆತನ ಒಂದೇ ಕಂಪೆನಿಯದ್ದು! ಮೂರೂ ಕಂಪೆನಿಗಳ ಮಾಲೀಕತ್ವವನ್ನು ಚೀನಾದ ಬಿಬಿಕೆ ಎಲೆಕ್ಟ್ರಾನಿಕ್ಸ್‌ ಎಂಬ ಕಂಪೆನಿ ಹೊಂದಿದೆ. ಭಾರತದಲ್ಲಿ ಮೊದಲ ಸ್ಥಾನದಲ್ಲಿರುವ ಶಿಯೋಮಿ ಶೇ. 27.1 ರಷ್ಟು ಹಾಗೂ ಎರಡನೇ ಸ್ಥಾನದಲ್ಲಿರುವ ಸ್ಯಾಮ್‌ಸಂಗ್‌ ಶೇ. 18.9ರಷ್ಟು ಮಾರುಕಟ್ಟೆ ಪಾಲು ಹೊಂದಿವೆ ನಿಜ. ಆದರೆ ವಿವೋ, ಒಪ್ಪೋ, ರಿಯಲ್‌ಮಿಗಳ ಮಾರುಕಟ್ಟೆ ಪಾಲನ್ನು ಒಟ್ಟು ಕೂಡಿದರೆ, ಬಿಬಿಕೆ ಎಲೆಕ್ಟ್ರಾನಿಕ್ಸ್‌ ಮೊದಲ ಸ್ಥಾನದಲ್ಲಿ ನಿಲ್ಲುತ್ತದೆ. ಮೂರೂ ಬ್ರಾಂಡ್‌ಗಳ ಮಾರುಕಟ್ಟೆ ಪಾಲನ್ನು ಕೂಡಿದರೆ ಶೇ. 41.3 ರಷ್ಟಾಗುತ್ತದೆ. ಅಲ್ಲಿಗೆ ಭಾರತದ ಸ್ಮಾರ್ಟ್‌ ಫೋನ್‌ ಮಾರುಕಟ್ಟೆಯಲ್ಲಿ ಹೆಚ್ಚು ಕಡಿಮೆ ಅರ್ಧದಷ್ಟು ಪಾಲನ್ನು ಚೀನಾದ ಬಿಬಿಕೆ ಎಲೆಕ್ಟ್ರಾನಿಕ್ಸ್‌ ಹೊಂದಿದೆ! ಇನ್ನೊಂದು ಪ್ರಮುಖ ಅಂಶವೆಂದರೆ ಭಾರತದ ಪ್ರೀಮಿಯಂ ಸ್ಮಾರ್ಟ್‌ಫೋನ್‌ ವಿಭಾಗದಲ್ಲಿ ಪ್ರಮುಖ ಕಂಪೆನಿಯಾದ ಒನ್‌ ಪ್ಲಸ್‌ ಕಂಪೆನಿಯ ಒಡೆತನ ಸಹ ಬಿಬಿಕೆ ಎಲೆಕ್ಟ್ರಾನಿಕ್ಸ್‌ನದ್ದೇ!

-ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.