ಅಚ್ಚರಿಯ ಬೆಳವಣಿಗೆ: ಗೂಗಲ್ ಪ್ಲೇಸ್ಟೋರ್ ನಿಂದ Paytm App ರಿಮೂವ್


Team Udayavani, Sep 18, 2020, 3:05 PM IST

paytm

ನವದೆಹಲಿ: ಪೇಮೆಂಟ್ ಆ್ಯಪ್ ಪೇಟಿಎಂ ಅಚ್ಚರಿ ಎಂಬಂತೆ ಗೂಗಲ್ ಪ್ಲೇ ಸ್ಟೋರ್ ನಿಂದ ಕಣ್ಮರೆಯಾಗಿದೆ. ಅದಾಗ್ಯೂ ಪೇಟಿಎಂ ಬ್ಯುಸಿನೆಸ್, ಪೇಟಿಎಂ ಮನಿ, ಪೇಟಿಎಂ ಮಾಲ್, ಮತ್ತು ಇತರ ಆ್ಯಪ್ ಗಳು ಪ್ಲೇಸ್ಟೋರ್ ನಲ್ಲಿ ಲಭ್ಯವಿದೆ.

One 97 Communication Ltd. ಪೇಟಿಎಂ ಮಾಲಿಕತ್ವವನ್ನು ಹೊಂದಿತ್ತು. ಇದೀಗ ಈ ಆ್ಯಪ್ ಗೂಗಲ್ ಪ್ಲೇ ಸ್ಟೋರ್ ನಿಂದ ರಿಮೂವ್ ಆಗಿದ್ದು ಆ್ಯಪಲ್ ಸ್ಟೋರ್ ನಲ್ಲಿ ಮಾತ್ರ ಲಭ್ಯವಿದೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಸ್ಪಷ್ಟನೆ ನೀಡಿದ ಪೇಟಿಎಂ “ಪೇಟಿಎಂ ಆ್ಯಂಡ್ರಾಯ್ಡ್ ಆ್ಯಪ್ ತಾತ್ಕಲಿಕವಾಗಿ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿಲ್ಲ. ಮಾತ್ರವಲ್ಲದೆ ಯಾವುದೇ ಹೊಸ ಅಪ್ ಡೆಟ್ ಗಳು ಕೂಡ ದೊರಕುವುದಿಲ್ಲ. ಶೀಘ್ರದಲ್ಲಿ ವಾಪಾಸಾಗುತ್ತೇವೆ. ನಿಮ್ಮ ಎಲ್ಲಾ ಪಾವತಿ ಸೇವೆಗಳು ಸಂಪೂರ್ಣ ಭದ್ರವಾಗಿದೆ’ ಎಂದಿದೆ.

ಗೂಗಲ್ ಹೊಸ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಈ ಆ್ಯಪ್ ಅನ್ನು ತೆಗೆದುಹಾಕಲಾಗಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಕೆಲವೊಂದು ಸಂಭಾವ್ಯ ಹಾನಿಯಿಂದ ಬಳಕೆದಾರರನ್ನು ರಕ್ಷಿಸಲು ಹೊಸ ನೀತಿಗಳನ್ನು ಜಾರಿಗೆ ತರಲಾಗಿದೆ. ಯಾವುದೇ ಅಪ್ಲಿಕೇಶನ್ ಗಳು ಈ ನೀತಿಗಳನ್ನು ಉಲ್ಲಂಘಿಸಿದಾಗ, ಅದರ ಡೆವಲಪರ್‌ಗೆ ಮಾಹಿತಿ ನೀಡುತ್ತೇವೆ.  ಆದರೇ ಆ್ಯಪ್ ಡೆವಲಪರ್ ಗಳು ಈ ನೀತಿಗಳನ್ನು ಅನುಸರಿಸದಿದ್ದರೇ ಪ್ಲೇಸ್ಟೋರ್ ನಿಂದ ಅವನ್ನು ತೆಗೆದುಹಾಕಲಾಗುವುದು. ಹೊಸ ನೀತಿಗಳನ್ನು ಅಳವಡಿಸಿಕೊಂಡರೇ ಮಾತ್ರ ಅಂತಹ ಆ್ಯಪ್ ಗಳಿಗೆ ಪ್ಲೇಸ್ಟೋರ್ ನಲ್ಲಿ ಜಾಗವಿರುತ್ತದೆ. ಅದಾಗ್ಯೂ 2ನೇ ಬಾರಿ ಗೂಗಲ್ ನಿಯಮ ಉಲ್ಲಂಘಿಸಿದರೇ ಹೆಚ್ಚು ಗಂಭೀರವಾದ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಗೂಗಲ್ ಆ್ಯಂಡ್ರಾಯ್ಡ್ ಸೆಕ್ಯೂರಿಟಿ ಮತ್ತು ಪ್ರೈವಸಿಯ ಉಪಾಧ್ಯಕ್ಷ ಸುಝಾನೆ ಫ್ರೇ ತಿಳಿಸಿದ್ದಾರೆ.

ಆನ್ ಲೈನ್ ಕ್ಯಾಸಿನೋ ಮತ್ತು ಜೂಜು ಅಥವಾ ಸ್ಪೋರ್ಟ್ಸ್ ಬೆಟ್ಟಿಂಗ್ ಕುರಿತಾದ ಆ್ಯಪ್ ಗಳನ್ನು ಗೂಗಲ್ ಪ್ರೋತ್ಸಾಹಿಸುವುದಿಲ್ಲ.  ಇಂತಹ ಆ್ಯಪ್ ಗಳ  ಜಾಹೀರಾತು ಅಥವಾ ಲಿಂಕ್ ಹಂಚಿಕೊಳ್ಳುವುದು ಹಾಗೂ ಥರ್ಢ್ ಪಾರ್ಟಿ ಆ್ಯಪ್ ಗಳಿಗೆ ಬಳಕೆದಾರರನ್ನು ಸೆಳೆಯುವುದು ಗೂಗಲ್ ಪಾಲಿಸಿಯ ಉಲ್ಲಂಘನೆಯಾಗುತ್ತದೆ ಎಂದು ಸುಝಾನೆ ತಿಳಿಸಿದ್ದಾರೆ.

ಈ ಕಾರಣಕ್ಕಾಗಿ ಪೇಟಿಎಂ ಅಪ್ಲಿಕೇಶನ್ ನನ್ನು ರಿಮೂವ್ ಮಾಡಲಾಗಿದೆ. ಪೇಟಿಎಂ ಭಾರತೀಯ ಮೂಲದ ಕಂಪೆನಿ One 97 Communication Ltd. ಮಾಲಿಕತ್ವವನ್ನು ಹೊಂದಿದ್ದು, ವಿಜಯ್ ಶಂಕರ್ ಶರ್ಮಾ ಇದರ ಸಂಸ್ಥಾಪಕರಾಗಿದ್ದಾರೆ. ಈ ಕಂಪೆನಿ ಚೀನಾದ ಆಲಿಬಾಬ ಗ್ರೂಪ್ ನ ಮಿತ್ರ ಸಂಸ್ಥೆ  fintech firm Ant Financials ನಿಂದ ಭಾರೀ ಹಣವನ್ನು ಪಡೆದಿದೆ ಎಂದು ವರದಿಯಾಗಿದೆ.

 

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.