ರೈಲ್ವೆ ಇಲಾಖೆಯ ಐಆರ್ಎಸ್ಡಿಸಿ ಸ್ಥಗಿತ
Team Udayavani, Oct 20, 2021, 5:22 PM IST
ನವದೆಹಲಿ: ರೈಲ್ವೆ ಇಲಾಖೆಯ ಭಾರತೀಯ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ನಿಗಮ (ಐಆರ್ಎಸ್ಡಿಸಿ)ವನ್ನು ಸ್ಥಗಿತಗೊಳಿಸಿರುವುದಾಗಿ ಸೋಮವಾರದಂದು ಇಲಾಖೆ ಆದೇಶ ಹೊರಡಿಸಿದೆ.
ವಿವಿಧ ಸಚಿವಾಲಯಗಳ ಸರ್ಕಾರಿ ಸಂಸ್ಥೆಗಳನ್ನು ವಿಲೀನಗೊಳಿಸಲು ಆರ್ಥಿಕ ಸಚಿವಾಲಯದಿಂದ ಶಿಫಾರಸು ನೀಡಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಐಆರ್ಎಸ್ಡಿಸಿ ನಿರ್ವಹಣೆಯಲ್ಲಿದ್ದ ರೈಲ್ವೆ ನಿಲ್ದಾಣಗಳನ್ನು ಆಯಾ ವಲಯ ರೈಲ್ವೆಯ ನಿರ್ವಹಣೆಗೆ ನೀಡಲಾಗುವುದು ಎಂದು ತಿಳಿಸಲಾಗಿದೆ.
2012ರ ಮಾರ್ಚ್ನಲ್ಲಿ ಆರಂಭಿಸಲಾದ ಐಆರ್ಎಸ್ಡಿಸಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಜೊತೆಗೆ, ಮುಂಬೈನ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣದ ಪುನಾರಭಿವೃದ್ಧಿಗೆ ಬಿಡ್ಡಿಂಗ್ ಪ್ರಕ್ರಿಯೆಯನ್ನೂ ನಡೆಸಿತ್ತು.
ಇದನ್ನೂ ಓದಿ:100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ
ಇತ್ತೀಚೆಗೆ ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣ ಮತ್ತು ಚಂಡೀಗಢದ ನಿಲ್ದಾಣದಲ್ಲಿ ರೈಲ್ವೆ ಆರ್ಕೇಡ್ ನಿರ್ಮಾಣಕ್ಕೆ ಬಿಡ್ಗೆ ಆಹ್ವಾನ ನೀಡಿತ್ತು.
ರೈಲ್ವೆ ಇಲಾಖೆಯು ಈ ಹಿಂದೆ ಸೆ.7ರಂದು ಇಲಾಖೆಯ ಐಆರ್ಒಎಎಫ್ ಕಾರ್ಯಾಚರಣೆಯನ್ನೂ ಸ್ಥಗಿತಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
Bhuvanam gaganam Teaser: ಭುವನಂ ಗಗನಂ ಟೀಸರ್ ಬಂತು
Bharjari Gandu: ಟ್ರೇಲರ್ನಲ್ಲಿ ಭರ್ಜರಿ ಗಂಡು
Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್ನಲ್ಲಿ ಶೂಟಿಂಗ್!
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್