ಸರಕಾರ ಬಯಸಿದರೆ ಮಾತ್ರ ದರ ಹೆಚ್ಚಳ: ಜಿಯೋ

ಟೆಲಿಕಾಂ ಕ್ಷೇತ್ರದಲ್ಲಿ ದರ ಸಮರ, ಗ್ರಾಹಕರ ಜೇಬಿಗೆ ಕತ್ತರಿ

Team Udayavani, Nov 20, 2019, 7:31 PM IST

JIO

ಹೊಸದಿಲ್ಲಿ : ಟೆಲಿಕಾಂ ಕಂಪನಿಗಳಾದ ಏರ್‌ಟೆಲ್‌, ಐಡಿಯಾ ವೊಡಾಫೋನ್‌ ಅನಂತರ ರಿಲಯನ್ಸ್‌ ಜಿಯೋ ಕರೆ ದರವನ್ನು ಹೆಚ್ಚಿಸುತ್ತದೆ ಎಂದು ಸುದ್ದಿಯಾಗಿತ್ತು. ಆದರೆ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿರುವ ಜಿಯೋ, ಸರಕಾರ ಅನುಮತಿ ಸೂಚಿಸಿದರೆ ಮಾತ್ರ ದರ ಹೆಚ್ಚಿಸುವುದಾಗಿ ಹೇಳಿದೆ.

ವಿವಿಧ ಟೆಲಿಕಾಂ ಕಂಪೆನಿಗಳು ಡಿಸೆಂಬರ್‌ 1 ರಿಂದ ಕರೆ ದರಗಳನ್ನು ಹೆಚ್ಚಿಸಲಿದ್ದು, ಹೊಸ ಸೇವಾ ಸುಂಕ ಯೋಜನೆಗಳನ್ನು ಜಾರಿ ತರುವ ಮೂಲಕ ದರ ಸಮರದಿಂದಾಗಿ ಆಗಿರುವ ನಷ್ಟವನ್ನು ಸರಿದೂಗಿಸಲು ಚಿಂತಿಸಿದೆ. ಆದರೆ ದರಗಳ ವಿವರಗಳನ್ನು ಯಾವುದೇ ಕಂಪೆನಿ ನೀಡಿಲ್ಲ.

ಈ ಸುದ್ದಿಗಳ ಬೆನ್ನಲ್ಲೇ ಜಿಯೋ ಕೂಡ ದರ ಏರಿಸಲಿದೆ ಎಂದು ಹೇಳಲಾಗಿತ್ತು. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಿಯೋ ಸರಕಾರ ಬಯಸಿದರೆ ಮಾತ್ರ ದರ ಹೆಚ್ಚಿಸಲಿದ್ದೇವೆ. ಟೆಲಿಕಾಂ ಸುಂಕಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ಪ್ರಕ್ರಿಯೆಯನ್ನು ಟ್ರಾಯ್‌ ಪ್ರಾರಂಭಿಸಲಿದೆ ಎಂಬ ವಿಶ್ವಾಸವಿದೆ. ಇತರ ಅಪರೇಟರ್‌ಗಳಂತೆ, ನಾವು ಸರಕಾರದ ನಿಯಮಾವಳಿಗೆ ಬದ್ಧವಾಗಿರುತ್ತೇವೆ. ಭಾರತೀಯ ಗ್ರಾಹಕರಿಗೆ ಮತ್ತು ಉದ್ಯಮಕ್ಕೆ ತೊಂದರೆಯಾಗದ ರೀತಿಯಲ್ಲಿ ಬೆಲೆ ಹೆಚ್ಚಳ ಮಾಡುವ ಉದ್ದೇಶವಿದೆ ಎಂದು ತಿಳಿಸಿದೆ.

ಇಂಟರ್‌ನೆಟ್‌ ದರದಲ್ಲಿ ಹೆಚ್ಚಳವಿಲ್ಲ
ಇನ್ನು ಇಂಟರ್‌ನೆಟ್‌ ಬಳಕೆದಾರರ ಮೇಲೆ ಪ್ರತಿಕೂಲ ಪರಿಣಾಮ ಆಗದ ರೀತಿಯಲ್ಲಿ ನೋಡಿಕೊಳ್ಳುವುದರೊಂದಿಗೆ, ಸುಂಕ ಹೆಚ್ಚಳ ನಿಯಮದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಡಿಜಿಟಲ್‌ ಇಂಡಿಯಾದ ಯೋಜನೆಯ ಹೂಡಿಕೆಗೆ ಅನುಕೂಲವಾಗುವಂತೆ ಮತ್ತು ಹೂಡಿಕೆಗಳನ್ನು ಉಳಿಸಿಕೊಳ್ಳುವತ್ತ ಕೂಡ ರಿಲಯನ್ಸ್‌ ಹೆಚ್ಚಿನ ಮಹತ್ವ ನೀಡಲಿದೆ ಎಂದು ತಿಳಿಸಿದೆ. ಹೀಗಾಗಿ ಇಂಟರ್‌ನೆಟ್‌ ಡಾಟಾ ದರದಲ್ಲಿ ಯಾವುದೇ ಹೆಚ್ಚಳವಾಗುವುದಿಲ್ಲ ಎಂದು ಹೇಳಲಾಗಿದೆ.

ಭಾರತೀಯ ಟೆಲಿಕಾಂ ಕಂಪೆನಿಗಳು ಸುಂಕವನ್ನು ಹೆಚ್ಚಿಸಲು ಸರಕಾರದಿಂದ ವಿಧಿಸಬೇಕಾದ ಎಜಿಆರ್‌ಅನ್ನು ಉಲ್ಲೇಖೀಸಿದ್ದು, ಈ ಪಟ್ಟಿಯಲ್ಲಿ ವೊಡಾಫೋನ್‌ ಐಡಿಯಾ ಮತ್ತು ಏರ್‌ಟೆಲ್‌ ಸರಕಾರಕ್ಕೆ ಹೆಚ್ಚಿನ ಹಣವನ್ನು ಪಾವತಿಸಬೇಕಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

MIT: ಮಾ.27ರಿಂದ 31ರವರೆಗೆ ಸೋಲಾರ್‌ ಎಲೆಕ್ಟ್ರಿಕ್‌ ವೆಹಿಕಲ್‌ ಚಾಂಪಿಯನ್‌ಶಿಪ್‌

IIT Madras graduate Pawan Davuluri heads Microsoft Windows

Microsoft Windows ಮುಖ್ಯಸ್ಥರಾಗಿ ಐಐಟಿ ಮದ್ರಾಸ್ ಪದವೀಧರ ಪವನ್ ದಾವುಲೂರಿ

1-qweewqe

Sony Float Run: ಓಟ, ವಾಕಿಂಗ್, ಜಿಮ್ ಮಾಡುವವರಿಗೆ ವಿನ್ಯಾಸಗೊಳಿಸಿದ ಹೆಡ್ ಫೋನ್

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

STEAG: ಸೇನೆಯಲ್ಲಿ ಹೈಟೆಕ್‌ ತಂತ್ರಜ್ಞಾನ ಅಧ್ಯಯನಕ್ಕೆ “ಸ್ಟೀಗ್‌’ ತಂಡ!

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.