ಭಾರತದಲ್ಲಿ ಬಿಡುಗಡೆಯಾಗಿದೆ ಸ್ಯಾಮ್ ಸಂಗ್ ನ ಎ52ಎಸ್ 5ಜಿ ಸ್ಮಾರ್ಟ್ ಫೋನ್.! ಇಲ್ಲಿದೆ ಮಾಹಿತಿ
Team Udayavani, Sep 2, 2021, 1:36 PM IST
ನವ ದೆಹಲಿ : ಸ್ಮಾರ್ಟ್ ಫೋನ್ ಗಳ ದೈತ್ಯ ಸಂಸ್ಥೆ ಸ್ಯಾಮ್ ಸಂಗ್ ತನ್ನ ಎ ಸರಣಿಯ ಗ್ಯಾಲಕ್ಸಿ A52S 5G ಸ್ಮಾರ್ಟ್ಫೋನ್ ನನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.
ಸ್ಮಾರ್ಟ್ ಫೋನ್ ನನ್ನು ಇನ್ಫಿನಿಟಿ-ಒ ಡಿಸ್ಪ್ಲೇ, 64 ಎಂಪಿ ಕ್ವಾಡ್ ಕ್ಯಾಮೆರಾ ಒಐಎಸ್ ನೊಂದಿಗೆ ಬಿಡುಗಡೆ ಮಾಡಲಾಗಿದೆ, ಇದು ನೀರು ಮತ್ತು ಧೂಳು ನಿರೋಧಕ ಐಪಿ 67 ರೇಟಿಂಗ್ ನೊಂದಿಗೆ ಗ್ರಾಹಕರ ಕೈಗೆ ಸಿಗಲಿದೆ.
ಇದನ್ನೂ ಓದಿ : ಖ್ಯಾತ ಸ್ಪಿನ್ನರ್ ಗೆ ಮುಳುವಾದ ICL ಸೇರ್ಪಡೆ; ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ಚಾಲಕ ವೃತ್ತಿವರೆಗೆ
ಸ್ಯಾಮ್ ಸಂಗ್ ಬಿಡುಗಡೆಗೊಳಿಸಿರುವ ಈ ಹೊಸ ಸ್ಮಾರ್ಟ್ ಫೋನ್ ನನ್ನು ಕಪ್ಪು, ಬಿಳಿ ಮತ್ತು ನೇರಳೆ ಬಣ್ಣದ ಆಯ್ಕೆಗಳಲ್ಲಿ ಸಂಸ್ಥೆ ನೀಡುತ್ತಿದೆ .
ಸ್ಯಾಮ್ಸಂಗ್ ಗ್ಯಾಲಕ್ಸಿ A52S 5G ಇತರೆ ಸ್ಮಾರ್ಟ್ ಫೋನ್ ಗಳಿಗಿಂತ ಹೇಗೆ ಭಿನ್ನ..?
ಈ ಬಗ್ಗೆ ಪ್ರತಿಕ್ರಿಯಿಸಿದ ಸ್ಯಾಮ್ ಸಂಗ್ ಇಂಡಿಯಾದ ಹಿರಿಯ ನಿರ್ದೇಶಕ ಹಾಗೂ ಮೊಬೈಲ್ ಮಾರ್ಕೆಟಿಂಗ್ ಮುಖ್ಯಸ್ಥ ಆದಿತ್ಯ ಬಬ್ಬರ್, ಸ್ಯಾಮ್ ಸಂಗ್ ಗ್ಯಾಲಕ್ಸಿ A52S 5G 6GB RAM+128GB ಸ್ಟೋರೇಜ್ ಮಾಡೆಲ್ ಗೆ 35,999 ರೂ. ಮತ್ತು 8GB RAM+128GB ಸ್ಟೋರೇಜ್ ಮಾಡೆಲ್ ಗೆ 37,499 ರೂ. ಎಂದು ಮಾಹಿತಿ ನೀಡಿದ್ದಾರೆ.
ಸ್ಯಾಮ್ ಸಂಗ್ ಗ್ಯಾಲಕ್ಸಿ A52S 5G 6.5-ಇಂಚಿನ ಫುಲ್ ಎಚ್ ಡಿ+ ಸೂಪರ್ ಆಮ್ಲೋಡ್ ಇನ್ಫಿನಿಟಿ-ಓ ಡಿಸ್ಪ್ಲೇ 1080 x 2400 ಪಿಕ್ಸೆಲ್ ರೆಸಲ್ಯೂಶನ್ ಹಾಗೂ 120Hz ರಿಫ್ರೆಶ್ ರೇಟ್ ನನ್ನು ಹೊಂದಿದೆ. ಹುಡ್ ಅಡಿಯಲ್ಲಿ, ಸ್ಮಾರ್ಟ್ ಫೋನ್ ನಲ್ಲಿ ಸ್ನಾಪ್ ಡ್ರಾಗನ್ 778 ಜಿ ಚಿಪ್ ಸೆಟ್ ಇದೆ, ಜೊತೆಗೆ ಅಡ್ರಿನೊ 642 ಎಲ್ ಜಿಪಿಯು ಜೊತೆಗೆ 8 ಜಿಬಿ RAM ಹಾಗೂ 256 ಜಿಬಿ ಸಂಗ್ರಹವಿದೆ. ಸ್ಮಾರ್ಟ್ ಫೋನ್ ಮೈಕ್ರೊ ಎಸ್ ಡಿ ಕಾರ್ಡ್ ಬೆಂಬಲದೊಂದಿಗೆ ಬರುತ್ತದೆ, ಇದು 1TB ವರೆಗೆ ಹೆಚ್ಚುವರಿ ಸಂಗ್ರಹಣೆಯನ್ನು ವಿಸ್ತರಿಸಲು ಅನುವು ಮಾಡಿಕೊಡುತ್ತದೆ ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಯಾಮ್ ಸಂಗ್ ನ ಹೊಸ ಸ್ಮಾರ್ಟ್ ಫೋನ್ 4,500mAh ಬ್ಯಾಟರಿಯನ್ನು ಹೊಂದಿದ್ದು, ಫೋನ್ ಆಂಡ್ರಾಯ್ಡ್ 11 ಓಎಸ್ ನಲ್ಲಿ ಒನ್ ಯುಐ 3.1 ಮೇಲೆ ಕಾರ್ಯನಿರ್ವಹಿಸುತ್ತದೆ.
ಇದನ್ನೂ ಓದಿ : ಕಿಚ್ಚನ ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದ ‘ವಿಕ್ರಾಂತ್ ರೋಣ’ ಡೆಡ್ ಮ್ಯಾನ್ಸ್ ಟೀಸರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ