ಸ್ಯಾಮ್‌ಸಂಗ್‌ ಕಂಪೆನಿಯ ಆವಿಷ್ಕಾರ: ಕಚೇರಿ ಉದ್ಯೋಗಿಗಳಿಗಾಗಿ ಹೊಸ ಮೌಸ್‌


Team Udayavani, Oct 19, 2022, 8:45 AM IST

ಸ್ಯಾಮ್‌ಸಂಗ್‌ ಕಂಪೆನಿಯ ಆವಿಷ್ಕಾರ: ಕಚೇರಿ ಉದ್ಯೋಗಿಗಳಿಗಾಗಿ ಹೊಸ ಮೌಸ್‌

ತಂತ್ರಜ್ಞಾನದ ಬಳಕೆಯಿಂದಾಗಿ ನಮ್ಮ ಜೀವನ ಹೆಚ್ಚು ಸರಳವಾಗುತ್ತಿದೆ. ಟೆಕ್‌ ಕಂಪೆನಿಗಳು ಗ್ರಾಹಕರ ಅನುಕೂಲಕ್ಕಾಗಿ ಹೊಸ ಹೊಸ ತಾಂತ್ರಿಕ ಸಾಧನಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಲೇ ಇರುತ್ತವೆ. ಇತ್ತೀಚೆಗೆ ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾದುದು ಸ್ಯಾಮ್‌ಸಂಗ್‌ ಕಂಪೆನಿಯ ನೂತನ ಆವಿಷ್ಕಾರವಾದ ವಿಭಿನ್ನ ಶೈಲಿ ಮತ್ತು ಮಾದರಿಯ ಮೌಸ್‌.

ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವ ಪ್ರತಿಯೋರ್ವರೂ ಮೌಸ್‌ ಬಳಕೆ ಮಾಡುವುದು ಸರ್ವೇಸಾಮಾನ್ಯ. ಲ್ಯಾಪ್‌ಟಾಪ್‌ಗ್ಳನ್ನು ಮೌಸ್‌ರಹಿತವಾಗಿ ಅಂದರೆ ಕೀ ಪ್ಯಾಡ್‌ನ‌ ಮೂಲಕ ಬಳಸಬಹುದಾಗಿದೆಯಾದರೂ ಡೆಸ್ಕ್
ಟಾಪ್‌ ಕಂಪ್ಯೂಟರ್‌ಗಳಲ್ಲಿ ಮೌಸ್‌ ಬಳಕೆ ಸಾಮಾನ್ಯ. ಕಂಪ್ಯೂಟರ್‌ನಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಸಮಯ ಹೋಗುವುದೇ ಗೊತ್ತಾಗುವುದಿಲ್ಲ. ಅದರಲ್ಲೂ ಕೊರೊನಾನಂತರದ ದಿನಗಳಲ್ಲಿ ಉದ್ಯೋಗಿಗಳ ಮೇಲೆ ವಿಪರೀತ ಕೆಲಸದ ಹೊರೆ ಬೀಳುತ್ತಿದೆ. ಇದರಿಂದಾಗಿ ಉದ್ಯೋಗಿಗಳು ಮಾನಸಿಕವಾಗಿ ಒತ್ತಡಕ್ಕೊಳಗಾಗುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಸಾವಿರಾರು ಸಂಖ್ಯೆಯಲ್ಲಿ ಉದ್ಯೋಗಿಗಳು ಪ್ರತಿಷ್ಠಿತ ಕಂಪೆನಿಗಳ ಉದ್ಯೋಗವನ್ನು ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ಹೊರತಂದಿರುವ ಈ ವಿಭಿನ್ನ ಮೌಸ್‌ ಉದ್ಯೋಗಿಗಳ ಮೇಲಿನ ಕೆಲಸದ ಒತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಬಲ್ಲುದು ಎಂದು ನಂಬಲಾಗಿದೆ.

ಸ್ವಯಂ ಪ್ರೇರಣೆ
ಇಂಥ ವಿಭಿನ್ನ ಮಾದರಿಯ ಮೌಸ್‌ ಅನ್ನು ತಯಾರಿಸಲು ಸ್ಯಾಮ್‌ಸಂಗ್‌ಗೆ ಪ್ರೇರಣೆ ಲಭಿಸಿದುದು ತನ್ನದೇ ಕಚೇರಿಯ ಉದ್ಯೋಗಿಗಳು. ಕಚೇರಿಯಲ್ಲಿನ ಹೆಚ್ಚಿನ ಉದ್ಯೋಗಿಗಳಿಗೆ ಸರಿಯಾದ ಸಮಯದಲ್ಲಿ ಮನೆಗೆ ವಾಪಸಾಗಲು ಸಾಧ್ಯವಾಗುತ್ತಿಲ್ಲ. ಇದರಿಂದ ಸಹಜವಾಗಿಯೇ ಅವರಿಗೆ ಒತ್ತಡ ಜಾಸ್ತಿಯಾಗುತ್ತದೆ. ಆದ್ದರಿಂದ ಈ ವಿನೂತನ ಆವಿಷ್ಕಾರ ನಿಜವಾಗಿಯೂ ಉದ್ಯೋಗಿಗಳಿಗೆ ಅನುಕೂಲಕರವಾಗಿದೆ. ಇಂಥ ಅದ್ಭುತ ಆವಿಷ್ಕಾರಗಳು ಉದ್ಯೋಗಿಗಳ ಜೀವನವನ್ನು ಸುಲಭ ಮತ್ತು ಒತ್ತಡಮುಕ್ತ ಗೊಳಿಸುವುದರಲ್ಲಿ ಎರಡು ಮಾತಿಲ್ಲ ಎಂಬುದು ಸ್ಯಾಮ್‌ಸಂಗ್‌ನ ಪ್ರತಿಪಾದನೆ.

ವಿಶೇಷ ಏನು?
ಈಗಿನ ಅತೀವೇಗದ ಯಾಂತ್ರಿಕ ಜೀವನದಲ್ಲಿ ಇಂಥ ಒಂದು ಮೌಸ್‌ನ ಆವಶ್ಯಕತೆ ತುಂಬಾ ಇದೆ ಎಂದು ನಮಗೂ ಅನಿಸುವುದರಲ್ಲಿ ಸಂದೇಹವಿಲ್ಲ. ನಾವು ಎಷ್ಟು ಕೆಲಸ ಮಾಡುತ್ತಿದ್ದೇವೆ ಎಂಬ ಕಲ್ಪನೆಯೂ ನಮಗೆ ಇರುವುದಿಲ್ಲ. ಅತಿಯಾದ ಕೆಲಸ ಮಾಡುವುದನ್ನು ತಡೆಯಲು ವಿನ್ಯಾಸಗೊಳಿಸಿದ ವಿಶಿಷ್ಟ ಸಾಧನ ಇದಾಗಿದೆ.

ಈ ಹೊಸ ಮೌಸ್‌ ನಿಮಗೆ ಕೆಲವು ಮಿತಿಗಳಲ್ಲಿ ಕಚೇರಿಯಲ್ಲಿ ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ಸಮಯ ಮೀರಿ ಕೆಲಸ ಮಾಡಲು ಬಿಡುವುದಿಲ್ಲ. ವರದಿಯ ಪ್ರಕಾರ, ನೀವು ಕಚೇರಿಯಲ್ಲಿ ಅಥವಾ ನೀವು ಅದನ್ನು ಬಳಸಲು ಬಯಸುವ ಸ್ಥಳದಲ್ಲಿ ಆಯ್ದ ಗಂಟೆಗಳನ್ನು ಮೀರಿ ಕೆಲಸ ಮಾಡಲು ಪ್ರಾರಂಭಿಸಿದ ಅನಂತರ ಈ ಮೌಸ್‌ ನಿಮ್ಮ ಮೇಜಿನಿಂದ ಇಲಿಯಂತೆ ಓಡಿಹೋಗಲು ಪ್ರಾರಂಭಿಸುತ್ತದೆ. ಹಾಗಾಗಿ ನೀವು ದಿನದ ಮಟ್ಟಿಗೆ ನಿಮ್ಮ ಕೆಲಸವನ್ನು ನಿಲ್ಲಿಸಲೇಬೇಕಾಗುತ್ತದೆ.

ಶೀಘ್ರ ಮಾರುಕಟ್ಟೆಗೆ
ಸ್ಯಾಮ್‌ಸಂಗ್‌ ಕಂಪೆನಿ ಹೊಸ ಮೌಸ್‌ನ ಬಗ್ಗೆ ಕೊರಿಯನ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಪೋಸ್ಟ್‌ ಮಾಡಿದೆ. ಕೆಲಸದ ನಿಗದಿತ ಅವಧಿ ಮುಗಿದ ಮೇಲೂ ನೀವು ಕೆಲಸ ಮುಂದುವರಿಸಿದಾಗ ಮೌಸ್‌ ಓಡಲಾರಂಭಿಸುತ್ತದೆ. ಹಾಗೆಂದು ನಿಮ್ಮ ನಿಗದಿತ ಕೆಲಸದ ಅವಧಿಯಲ್ಲಿ ಮುಟ್ಟಿದರೆ ಇದು ಓಡುವುದಿಲ್ಲ. ಅದು ಬೇರೆ ಮೌಸ್‌ಗಳಂತೆಯೇ ಕಾರ್ಯ ನಿರ್ವಹಿಸುತ್ತದೆ. ನಿರ್ದಿಷ್ಟ ಅವಧಿ ಪೂರ್ಣಗೊಂಡ ಬಳಿಕ ಇದು ಇಲಿಯಂತೆ ವರ್ತಿಸಲು ಪ್ರಾರಂಭಿಸುತ್ತದೆ. ಈ ಮೌಸ್‌ ಇನ್ನೂ ಮಾರುಕಟ್ಟೆಗೆ ಬಿಡುಗಡೆಯಾಗಿಲ್ಲ. ಶೀಘ್ರದಲ್ಲಿಯೇ ಈ ಮೌಸ್‌ ಅನ್ನು ಪರಿಚಯಿಸಲಾಗುವುದು ಎಂದು ಸ್ಯಾಮ್‌ಸಂಗ್‌ ಕಂಪೆನಿ ತಿಳಿಸಿದೆ.

 

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.