ಕೇಂದ್ರ ಸರ್ಕಾರದ ನೂತನ ಐಟಿ ನಿಯಮ: ದೆಹಲಿ ಹೈಕೋರ್ಟ್ ಮೊರೆ ಹೋದ ವಾಟ್ಸಾಪ್ ?
Team Udayavani, May 26, 2021, 10:32 AM IST
ನವದೆಹಲಿ: ಕೇಂದ್ರ ಸರ್ಕಾರದ ನೂತನ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ ಬುಕ್ ಒಡೆತನದ ವಾಟ್ಸ್ ಆ್ಯಪ್ ದೆಹಲಿ ಹೈಕೋರ್ಟ್ ನಲ್ಲಿ ದೂರು ದಾಖಲಿಸಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ ಈ ಮಾಹಿತಿ ಖಚಿತವಾಗಿಲ್ಲ.
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ನೂತನ ಐಟಿ ನಿಯಮಗಳನ್ನು ಜಾರಿ ಮಾಡಲು ಸಾಮಾಜಿಕ ಜಾಲತಾಣಗಳಿಗೆ ನೀಡಿರುವ ಗಡುವು ಬುಧವಾರ (26-5-2021) ಮುಗಿಯಲಿದ್ದು, ಇದಕ್ಕೆ ತಡೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಾಟ್ಸಾಪ್ ಕಾನೂನು ಹೋರಾಟಕ್ಕಿಳಿದಿದೆ.
“ಮಾಹಿತಿಯ ಪ್ರಾಥಮಿಕ ಮೂಲವನ್ನು ಗುರುತಿಸಲು” ಕೆಲವೊಂದು ನಿಬಂಧನೆಗಳನ್ನು ಮಾಡಬೇಕಾಗಿದೆ, ಈ ಅಂಶವನ್ನು ಪ್ರಶ್ನಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ
ಇದನ್ನೂ ಓದಿ: ವಾಟ್ಸಾಪ್, ಫೇಸ್ ಬುಕ್, ಟ್ವಿಟ್ಟರ್ ಬ್ಲಾಕ್ ? ಸಂಸ್ಥೆಗಳು ಹೇಳುವುದೇನು ?
ಭಾರತದಲ್ಲಿ ಸುಮಾರು 400 ಮಿಲಿಯನ್ ಬಳಕೆದಾರರನ್ನು ಹೊಂದಿರುವ ವಾಟ್ಸಾಪ್ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ ಎಂದು ರಾಯಿಟರ್ಸ್ ಕೂಡ ವರದಿ ಮಾಡಿದ್ದು, ಆದರೆ ದೃಢೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ಹೊಸ ನಿಯಮಗಳ ಜಾರಿಗೆ ಕಳೆದ ಫೆಬ್ರವರಿಯಲ್ಲೇ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಮೇ 25ರ ಗಡುವು ನೀಡಿತ್ತು. ಆದರೆ, ವಾಟ್ಸ್ಆ್ಯಪ್, ಫೇಸ್ ಬುಕ್, ಟ್ವಿಟರ್ ಸೇರಿದಂತೆ ಬಹುತೇಕ ತಾಣಗಳು ಈ ನಿಯಮಗಳನ್ನು ಅನುಷ್ಠಾನ ಮಾಡಿಲ್ಲ. ಟ್ವಿಟರ್ ಮಾದರಿಯ ಭಾರತದ ಆವೃತ್ತಿ “ಕೂ’ ಮಾತ್ರವೇ ಹೊಸ ಮಾರ್ಗಸೂಚಿಗಳನ್ನು ಪಾಲಿಸಿದೆ.
ಇದೇ ವೇಳೆ, ಅಮೆಜಾನ್ ಪ್ರೈಮ್, ನೆಟ್ಫ್ಲಿಕ್ಸ್ ನಂಥ ಒಟಿಟಿ ಪ್ಲಾಟ್ಫಾರಂಗಳಿಗೂ “ದೂರು ಪರಿಹಾರ ಅಧಿಕಾರಿ” ಗಳನ್ನು ನೇಮಕ ಮಾಡುವಂತೆ ಸರ್ಕಾರ ಸೂಚಿಸಿದೆ. ವಿವಿಧ ಸಚಿವಾಲಯಗಳ ಪ್ರತಿ ನಿಧಿಗಳನ್ನು ಒಳಗೊಂಡ ಸಮಿತಿ ರಚಿಸಿ, ಒಟಿಟಿ ಕಂಟೆಂಟ್ಗಳ ಮೇಲೆ ನಿಯಂತ್ರಣ ಹೇರಬೇಕು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
History TV18ನಲ್ಲಿ ವಿಶ್ವದ ಮೊದಲ ಬ್ರೈಲ್ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ
HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ
Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ
Lexus NX350h ಭಾರತದ ಮಾರುಕಟ್ಟೆಗೆ ನೂತನ ಐಶಾರಾಮಿ ಕಾರು ಬಿಡುಗಡೆ, ಬೆಲೆ ಎಷ್ಟು ಗೊತ್ತಾ?
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್