ವಾಟ್ಸಾಪ್ OTP Scam 2020: ಮೈಮರೆತರೇ ನಿಮ್ಮ ಪ್ರತಿಯೊಂದು ಮಾಹಿತಿ ಹ್ಯಾಕರ್ ಗಳ ಪಾಲು !
Team Udayavani, Nov 26, 2020, 5:02 PM IST
ನವದೆಹಲಿ: ಭಾರತ ಸೇರಿದಂತೆ ವಿಶ್ವದಾದ್ಯಂತ ಇಂದು ವಾಟ್ಸಾಪ್ ಸಕ್ರಿಯ ಬಳಕೆದಾರರ ಸಂಖ್ಯೆ ಹೆಚ್ಚುತ್ತಿದೆ. ಪರಿಣಾಮವೆಂಬಂತೆ ಹ್ಯಾಕರ್ ಗಳ ದೃಷ್ಟಿ ಕೂಡ ಅದರತ್ತ ತಿರುಗಿದ್ದು, ಖಾಸಗಿ ಮಾಹಿತಿಗಳಿಗೆ ಕನ್ನ ಹಾಕಲು ವ್ಯವಸ್ಥಿತ ಸಂಚು ಹೂಡುತ್ತಿದ್ದಾರೆ.
ಕೆಲದಿನಗಳಿಂದ ವಾಟ್ಸಾಪ್ OTP ಸ್ಕ್ಯಾಮ್ ಎನ್ನುವುದು ಸದ್ದು ಮಾಡುತ್ತಿದ್ದು, ಹ್ಯಾಕರ್ ಗಳು ಓಟಿಪಿಯನ್ನೇ ಬಂಡವಾಳ ಮಾಡಿಕೊಂಡು ಜನರ ಅಕೌಂಟ್ ಗಳಿಗೆ ಲಗ್ಗೆಯಿಡುತ್ತಿದ್ದಾರೆ. ಆ ಮೂಲಕ ಹಲವು ಮಹತ್ವದ ಮಾಹಿತಿಗಳನ್ನು ಪಡೆದು ದುರುಪಯೋಪಯೋಗ ಪಡಿಸಿಕೊಳ್ಳುತ್ತಿರುವ ವ್ಯವಸ್ಥಿತ ಜಾಲ ಪತ್ತೆಯಾಗುತ್ತಿದೆ.
ಏನಿದು OTP ಸ್ಕ್ಯಾಮ್ :
ಹ್ಯಾಕರ್ ಗಳು ಮೊದಲಿಗೆ ನಿಮ್ಮ ಮೊಬೈಲ್ ಸಂಖ್ಯೆಗೆ ಸಂದೇಶವೊಂದನ್ನು ರವಾನಿಸಿ ಸ್ನೇಹಿತರನ್ನಾಗಿ ಮಾಡಿಕೊಳ್ಳುತ್ತಾರೆ. ಕೆಲಕಾಲಗಳ ಬಳಿಕ ಮತ್ತೊಂದು ಸಂದೇಶ ಕಳುಹಿಸಿ ‘ಅಚಾನಕ್ಕಾಗಿ ವಾಟ್ಸಾಪ್ ವೇರಿಫಿಕೇಶನ್ ಸಂದರ್ಭದಲ್ಲಿ ನಿಮ್ಮ ನಂಬರ್ ನಮೂದಿಸಿದ್ದರಿಂದ OTP ನಿಮಗೆ ಬಂದಿದೆ. ಅದನ್ನು ಈ ಕೂಡಲೇ ಕಳುಹಿಸಬಹುದೇ ?” ಎಂದು ಭಿನ್ನವಿಸಿಕೊಳ್ಳುತ್ತಾರೆ.
ಈ ವೇಳೆ ಮೈಮರೆತು ನೀವು OTP ಕೋಡ್ ಕಳುಹಿಸಿದ್ದೇ ಆದಲ್ಲಿ ನಿಮ್ಮ ವಾಟ್ಸಾಪ್ ನಲ್ಲಿರುವ ಸಂಪೂರ್ಣ ಮಾಹಿತಿ ಹ್ಯಾಕರ್ ಗಳ ಪಾಲಾಗುತ್ತದೆ. ಮಾತ್ರವಲ್ಲದೆ ನಿಮ್ಮ ಅಕೌಂಟ್ ಕೂಡ ಲಾಕ್ ಆಗುವುದು. ವಾಟ್ಸಾಪ್ ಭದ್ರತಾ ನಿಯಮದ ಪ್ರಕಾರ ‘ಒಂದೇ ನಂಬರ್ ನಿಂದ ಎರಡು ಕಡೆ ವಾಟ್ಸಾಪ್ ಅಪ್ಲಿಕೇಶನ್ ಬಳಸಲು ಸಾಧ್ಯವಾಗುದಿಲ್ಲ’. (ವೆಬ್ ಹೊರತುಪಡಿಸಿ) ಹೀಗಾಗಿ OTP ಕಳುಹಿಸಿದ ತಕ್ಷಣ ನಿಮ್ಮ ಅಕೌಂಟ್ ಕೂಡ ತೆರೆಯಲು ಸಾಧ್ಯವಾಗುವುದಿಲ್ಲ.
ಇದನ್ನೂ ಓದಿ:ಕೋವಿಡ್ ಹೆಸರಲ್ಲಿ ಹಿಂಸೆ ಸಲ್ಲದು; ಪೊಲೀಸರು ಮತ್ತು ಅಧಿಕಾರಿಗಳಿಗೆ ‘ಯೋಗಿ ಖಡಕ್ ಸೂಚನೆ’
ಇಂತಹ ಸಂದರ್ಭದಲ್ಲಿ ಏನು ಮಾಡಬೇಕು?
ನಿಮಗೆ ಇಂತಹ ಯಾವುದಾದರೂ ಸಂದೇಶಗಳು ಬಂದಲ್ಲಿ, ಅದಕ್ಕೆ ಪ್ರತಿಕ್ರಿಯೆ ನೀಡದಿರುವುದು ಸೂಕ್ತ. ಒಟಿಪಿ ಎನ್ನುವಂಥದ್ದು ಅತ್ಯಂತ ಗೌಪ್ಯವಾದ ಮಾಹಿತಿ. ಹೀಗಾಗಿ ನಿಮ್ಮ ಆತ್ಮೀಯ ಗೆಳೆಯರ ಹೆಸರಿನಲ್ಲೇ, ಈ ತೆರನಾದ ಸಂದೇಶ ಬಂದರೂ ಕೂಡಾ ಒಟಿಪಿ ಸಂಖ್ಯೆಯನ್ನು ನೀಡದಿರುವುದು ಈ ಸ್ಕ್ಯಾಮ್ ತಡೆಗಟ್ಟಲು ಸಹಾಯಕವಾಗುತ್ತದೆ. ಆ ಮೂಲಕ ಅತ್ಯಮೂಲ್ಯ ಮಾಹಿತಿಯ ಸೋರಿಕೆಯಾಗದಂತೆ ತಡೆಯಬಹುದು.
ವಾಟ್ಸಾಪ್ ಸುರಕ್ಷಿತವಾಗಿರಿಸಿಕೊಳ್ಳುವುದು ಹೇಗೆ?
ಹ್ಯಾಕರ್ ಗಳಿಂದ ನಿಮ್ಮ ವಾಟ್ಸಾಪ್ ಖಾತೆಯನ್ನು ಸುರಕ್ಷಿತವಾಗಿಡಲು ನೀವು ‘To step verification’ ಎಂಬ ಫೀಚರ್ ಬಳಸಬಹುದು. ಸೆಟ್ಟಿಂಗ್ಸ್ ನಲ್ಲಿ ಈ ಆಯ್ಕೆಯಿದ್ದು ಪಿನ್ ನಂಬರ್ ಹಾಗೂ ಇಮೇಲ್ ವಿಳಾಸವನ್ನು ನಮೂದಿಸಬೇಕು. ಆ ಮೂಲಕ ಹ್ಯಾಕರ್ ಗಳು OTP ಪಡೆದರೂ ಲಾಗಿನ್ ಆಗಲು ಅವಕಾಶವಿರದಂತೆ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್ ಗೆ RLJP ಮುಖಂಡ ಪರಾಸ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬ್ಯಾಡಗಿ: ಮೆಣಸಿನಕಾಯಿ ವಹಿವಾಟು ಸುಗಮ; ಪೊಲೀಸ್ ಭದ್ರತೆ
Indi; ಕುಡಿಯುವ ನೀರಿಗಾಗಿ ಒತ್ತಾಯ; ಮೊಬೈಲ್ ಟವರ್ ಹತ್ತಿದ ಯುವಕ