ವಿದ್ಯಾವಂತರಿಗೇ ಅಧಿಕಾರ ಕೊಡಿ; ನಾವು ಯಾಕೆ ಮತ ಹಾಕಬೇಕು ?


Team Udayavani, Mar 25, 2019, 1:25 PM IST

vote

“ನಾವು ಯಾಕೆ ಮತ ಹಾಕಬೇಕು’ ಇದು ಯುವ ಹಾಗೂ ಉಳಿದ ಎಲ್ಲ ಅರ್ಹ ಮತದಾರರನ್ನು ಎ. 18ರ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸುವ ಉದಯವಾಣಿಯ ವಿಶೇಷ ಅಭಿಯಾನ. ಇದರಲ್ಲಿ ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು/ ತರುಣ ಮತದಾರರು ಮತದಾನದ ಮಹತ್ವದ ಕುರಿತು ಬರೆಯುತಿದ್ದಾರೆ.ಬನ್ನಿ ಪ್ರಜಾತಂತ್ರವನ್ನು ಬೆಂಬಲಿಸೋಣ, ಮತದಾನ ಮಾಡೋಣ.

ಆಯ್ಕೆಯ ಸ್ವಾತಂತ್ರ್ಯ
ಮತ ಹಾಕುವುದು ಪ್ರತಿಯೊಬ್ಬ ಪ್ರಜೆಯ ಒಂದು ಆದ್ಯ ಕರ್ತವ್ಯ. ಇದರಿಂದ ಆತನು ತನ್ನ ಸ್ವಾತಂತ್ರ್ಯವನ್ನು ಗುರುತಿಸಿಕೊಳ್ಳಬಹುದು.ಮತದಾನವು ಪ್ರಜೆಗಳಿಗೆ ತಮ್ಮ ಆಯ್ಕೆಯ ಸ್ವಾತಂತ್ರ್ಯವನ್ನು ಖಾತ್ರಿಪಡಿಸುತ್ತದೆ. ಮತ ಹಾಕುವುದರಿಂದ ತಮಗೆ ಬೇಕಾದ ಸರಕಾರವನ್ನು ಅಧಿಕಾರಕ್ಕೆ ತರಲು ಅವಕಾಶ ವನ್ನು ಒದಗಿಸುತ್ತದೆ. ಮತದಾನವು ಒಂದು ಹೊಸ ಸರ್ಕಾರದ ಬದಲಾವಣೆಗೆಅವಕಾಶವನ್ನು ನೀಡುತ್ತದೆ.
ಶೈಲಿಕಾ ಅಮಿನ್‌, ವೈಕುಂಠ ಬಾಳಿಗಾ ಕಾಲೇಜು, ಉಡುಪಿ

ವಿದ್ಯಾವಂತರಿಗೇ ಅಧಿಕಾರ ಕೊಡಿ
ಮತದಾನ ಮೂಲಕ ನಾವು ನಮ್ಮ ಹಕ್ಕು ಹಾಗೂ ಬಾಧ್ಯತೆಗಳ ಬಗ್ಗೆ ಧ್ವನಿ ಎತ್ತಿ ಮಾತನಾಡುವ ಅವಕಾಶವನ್ನು ಪಡೆದುಕೊಂಡಿದ್ದೇವೆ. ಮತ ನೀಡದೆ ಯಾವುದೇ ಸರಕಾರದ ಕಾರ್ಯವೈಖರಿಯ ಬಗ್ಗೆ ಮಾತನಾಡುವುದು ಖಂಡಿತ ತಪ್ಪಾಗುತ್ತದೆ. ಅವಿದ್ಯಾವಂತ ರಾಜಕಾರಣಿಗಳಿಗೆ ಅಧಿಕಾರ ನೀಡಬಾರದು. ಅದರಿಂದ ಸಾರ್ವಜನಿಕ ವ್ಯವಸ್ಥೆ ನಶಿಸುತ್ತದೆ.
ಹರ್ಷಿಣಿ ಪೂಜಾರಿ, ವೈಕುಂಠ ಬಾಳಿಗಾ ಕಾಲೇಜು, ಉಡುಪಿ

ಸೂಕ್ತ ಅಭ್ಯರ್ಥಿ ಆಯ್ಕೆ ಕರ್ತವ್ಯ
ಮತದಾನ ಮಾಡುವುದು ನಮ್ಮೆಲ್ಲರ ಹಕ್ಕು ಹಾಗೂ ಕರ್ತವ್ಯ. ನಮ್ಮ ಎಲ್ಲ ಅಗತ್ಯಗಳನ್ನು ಈಡೇರಿಸಿಕೊಳ್ಳಲು ನಾವು ಸೂಕ್ತವಾದ ಅಭ್ಯರ್ಥಿಯನ್ನು ಮತದಾನ ಮಾಡುವುದರ ಮೂಲಕ ಆರಿಸಬೇಕು. ದೇಶದ ಅಭಿವೃದ್ಧಿ ಮತದಾರರ ಕೈಯಲ್ಲಿದೆ. ಮತ ಅಮೂಲ್ಯವಾದ ಕಾರಣ ನಾವು
ಮತದಾನ ಮಾಡದಿದ್ದರೆ ನಮ್ಮ ದೇಶಕ್ಕೆ ನಷ್ಟವಾಗುತ್ತದೆ. ಹಾಗಾಗಿ ಈ ಬಾರಿ  ಎಲ್ಲರೂ ತಪ್ಪದೇ ಮತದಾನ ಮಾಡಿ ಸೂಕ್ತವಾದ ಅಭ್ಯರ್ಥಿಯನ್ನು ಆಯ್ಕೆ ಮಾಡೋಣ.
ರಮ್ಯಾ ಬಿ.,ಎಂ.ಜಿ.ಎಂ. ಕಾಲೇಜು,ಉಡುಪಿ

ಮತ ಚಲಾವಣೆ, ರಾಷ್ಟ್ರ ಬದಲಾವಣೆ
ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಭಾರತ ಹೊರಹೊಮ್ಮಬೇಕು. ಇದಕ್ಕಾಗಿ ಪ್ರತಿಯೋರ್ವರು ಮತ ಚಲಾಯಿಸಬೇಕು. ದೇಶದ ಸಮಗ್ರ ಅಭಿವೃದ್ಧಿಗೆ ನಮ್ಮ ಮತ ನಿರ್ಣಾಯಕ. ಆದುದರಿಂದ ಈ ಪವಿತ್ರ ಕಾರ್ಯದಲ್ಲಿ ಪ್ರತಿಯೊಬ್ಬ ಪ್ರಜೆಯೂ ಪಾಲ್ಗೊಳ್ಳಬೇಕು. ರಾಷ್ಟ್ರದ ಬದಲಾವಣೆಗೆ ಮತದಾನವೇ ಮೂಲ ಅಸ್ತ್ರ. ಯುವ ಜನಾಂಗ ಇತರರಿಗೆ ಮತದಾನಕ್ಕೆ ಪ್ರೇರಣೆ ನೀಡಬೇಕು.
ಎಸ್‌. ರಂಜಿತ್‌ ಶೆಟ್ಟಿ ಬೆಳ್ವೆ, ಸ.ಪ್ರ.ದ. ಕಾಲೇಜು, ಶಂಕರನಾರಾಯಣ

ಮತದಾನದಿಂದ ಪ್ರಶ್ನಿಸುವ ಹಕ್ಕು
ಜವಾಬ್ದಾರಿಯುತ ಪ್ರಜೆಯಾಗಿ ಉತ್ತಮ ನಾಯಕರ ಆಯ್ಕೆಗಾಗಿ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯ. ಮತದಾನ ಮಾಡುವುದರಿಂದ ದೇಶದ ಅಭಿವೃದ್ಧಿಗೂ ನಾವು ಕಾರಣವಾದಂತಾಗುತ್ತದೆ. ಯುವ ಜನರು ಮತದಾನ ಮಾಡದಿದ್ದರೆ ಭವಿಷ್ಯದಲ್ಲಿ ನಾವು ಪ್ರಶ್ನೆ ಮಾಡುವ ಹಕ್ಕನ್ನು ಕಳೆದುಕೊಳ್ಳುತ್ತೇವೆ. ಭ್ರಷ್ಟಾಚಾರ ಮುಕ್ತ ದೇಶವನ್ನಾಗಿಸಲು ಮತದಾನ ಮಾಡಬೇಕು. ಮತ ಹಾಕಿ ದೇಶದ ಅಭಿವೃದ್ಧಿಗೆ ಕಾರಣರಾಗೋಣ.
-ಶ್ರೇಯಾ ಪಾಲನ್‌,ವಿದ್ಯಾನಿಕೇತನ ಪ್ರ.ದರ್ಜೆ ಕಾಲೇಜು ಕಾಪು

ಕುಟುಂಬದಷ್ಟೇ ದೇಶವೂ ಮುಖ್ಯ
ನಮ್ಮನ್ನು ಯಾರು ಆಳಬೇಕು ಎಂದು ಚುನಾಯಿಸುವ ಹಕ್ಕು ನಮಗಿದೆ. ಒಂದು ಮತದಿಂದ ಏನೂ ಬದಲಾಗದು ಎಂದು ಎಲ್ಲರೂ ಕುಳಿತರೆ ದೇಶದ ಸ್ಥಿತಿ ಅವನತಿಯತ್ತ ಸಾಗಲಿದೆ. ಇಂದು ದೇಶದಲ್ಲಿ ಪಕ್ಷದ ಗೆಲುವನ್ನು ಶೇ 20 ರಷ್ಟು ಜನ ನಿರ್ಧರಿಸುತ್ತಿದ್ದಾರೆ. ಹೀಗಾಗಬಾರದು. ಕುಟುಂಬದಷ್ಟೇ ದೇಶವೂ ಮುಖ್ಯ. ನಮಗಾಗಿ ಮತ ಚಲಾಯಿಸಬೇಕು. ಪ್ರಜಾಪ್ರಭುತ್ವವನ್ನು ಸುಭದ್ರವಾಗಿಡಲು ಮತ ಚಲಾಯಿಸಲೇ ಬೇಕು.
ಪೂಜಾಶ್ರೀ,ಡಾ| ಶಂಕರ ಅಡ್ಯಂತಾಯ ಕಾಲೇಜು, ನಿಟ್ಟೆ

ಮತದಾನ ರಾಷ್ಟ್ರದ ಅಡಿಪಾಯ
ಮತದಾನವು ನಾಳೆಯ ನಾಯಕರನ್ನು ಆಯ್ಕೆ ಮಾಡುತ್ತದೆ. ಮತದಾನ ನಾಗರಿಕತ್ವದ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಅನೇಕ ಜನರು ಯೋಚಿಸುವುದು ಒಂದು ಮತವು ಬದಲಾವಣೆ ಮಾಡುವುದಿಲ್ಲವೆಂದು ಅದರೆ ರಾಷ್ಟ್ರ ಅಡಿಪಾಯಕ್ಕೆ ಇದೇ ಮುಖ್ಯ.ಇದು  ಪ್ರತಿಯೊಬ್ಬರ ಜನ್ಮಸಿದ್ಧ ಹಕ್ಕು.
ಮೆಲ್‌ರಿನ್‌ ಗ್ರೇಸಿಲ್ಲಾ ಪಿರೇರಾ, ಡಾ| ಶಂಕರ ಅಡ್ಯಂತಾಯ ಕಾಲೇಜು, ನಿಟ್ಟೆ

ಅಭಿವೃದ್ಧಿಯತ್ತ ಸಾಗಲು ನಮ್ಮ ಮತ
ಸ್ವತಂತ್ರ ಭಾರತದ ಸ್ವತಂತ್ರ ಪ್ರಜೆಗಳು ನಾವು. ನಮ್ಮ ದೇಶ ಸಂಪೂರ್ಣವಾಗಿ
ಇನ್ನೂ ಅಭಿವೃದ್ಧಿಗೊಂಡಿಲ್ಲ, ಸಮಸ್ಯೆಗಳನ್ನು ಬಗೆಹರಿಸಲು ಮತ್ತು ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು, ಸೂಕ್ತವಾದ ವ್ಯಕ್ತಿಯನ್ನು ಆರಿಸಬೇಕು. ಅದಕ್ಕಾಗಿ ಮತದಾನದ ಹಕ್ಕನ್ನು ಪಡೆದವರು ದಯವಿಟ್ಟು ತಮ್ಮ ಅಮೂಲ್ಯವಾದ ಮತವನ್ನು ಸೂಕ್ತ ವ್ಯಕ್ತಿಗೆ ನೀಡಿ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವಲ್ಲಿ ಪಾತ್ರ ವಹಿಸೋಣ.
ವರುಣ್‌ ಕುಮಾರ್‌, ಮಿಲಾಗ್ರಿಸ್‌ ಕಾಲೇಜು, ಕಲ್ಯಾಣಪುರ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

VOTE1

ನಮ್ಮ ಮತ ಉತ್ತಮ ನಾಯಕನಿಗೆ; ಪಕ್ಷಕ್ಕಲ್ಲ

vote

ಮತದಾನಕ್ಕೆ ಹಿಂದೇಟು ಹಾಕದಿರಿ

vote-1

ಮತ ಚಲಾಯಿಸಿ, ದೇಶ ಬದಲಿಸಿ;ನಾವು ಯಾಕೆ ಮತ ಹಾಕಬೇಕು?

vote

ನಮ್ಮ ಆಡಳಿತವನ್ನು ನಾವೇ ರೂಪಿಸೋಣ

vote

ಸದೃಢ ಭಾರತ, ರಾಷ್ಟ್ರ ರಕ್ಷಣೆಗಾಗಿ ಮತದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.