ಹೊಸ ಬದುಕಿನ ಆರಂಭ ಯುಗಾದಿ


Team Udayavani, Mar 22, 2023, 10:00 AM IST

tdy-19

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ವರುಷವ ಹೊಸತು ಹೊಸತು ತರುತಿದೆ. ಬದುಕಲ್ಲಿ ಹೊಸತನ ಇಲ್ಲದಿದ್ದರೆ ಅರ್ಥವಿಲ್ಲ. ಹಾಗೆಂದ ಮಾತ್ರಕ್ಕೆ ಹಳೆಯ ಬದುಕಿನ ಕೊಂಡಿ ಕಳಚಿ ಹೋಯಿತೆಂದು ಅರ್ಥವಲ್ಲ. ಹಳೆಯ ಬದುಕಿನ ನೆನಪುಗಳಿಗೆ ಹೊಸ ಕ್ಷಣಗಳನ್ನು ಸೇರಿಸಿ ಬದುಕಿನ ಪರಿಧಿಯನ್ನು ವಿಸ್ತರಿಸುವುದು ತಾನೇ ನಮ್ಮ ಗುರಿ. ಹಿಂದೂ ಕ್ಯಾಲೆಂಡರ್‌ ಪ್ರಕಾರ ಯುಗಾದಿಯು ಹೊಸವರ್ಷದ ಆರಂಭವಾಗಿದೆ.

ಯುಗಾದಿ ಎನ್ನುವ ಪದವು ಸಂಸ್ಕೃತದ ಯುಗ ಮತ್ತು ಆದಿ ಎನ್ನುವ ಪದಗಳಿಂದ ಹುಟ್ಟಿದ್ದು. ಯುಗ ಎಂದರೆ ಅವಧಿ ಹಾಗೂ ಆದಿ ಎಂದರೆ ಪ್ರಾರಂಭ. ಆದ್ದರಿಂದ ಯುಗಾದಿ ಎಂದರೆ ಹೊಸ ಸಮಯದ ಆರಂಭ ಎಂದಾಗಿದೆ. ಯುಗಾದಿಯ ಸಂದರ್ಭದಲ್ಲಿ ಭೂಮಿಯಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಪ್ರಕೃತಿಯೂ ಕೂಡ ಹೊಸತನದಿಂದ ತುಂಬಿ ನಲಿಯುತ್ತದೆ. ವಸಂತ ಋತುವಿನ ಪ್ರಾರಂಭ ಕಾಲವಾದ್ದರಿಂದ ಮರಗಳ ಎಲೆಗಳು ಉದುರಿ ಹೊಸ ಚಿಗುರು ಪ್ರಾರಂಭವಾಗುತ್ತದೆ.

ಯುಗಾದಿಯ ದಿನ ಎಲ್ಲರ ಮನೆ ಮನಗಳಲ್ಲಿ ಹೊಸ ಹುರುಪು ಉತ್ಸಾಹ ತುಂಬಿರುತ್ತದೆ. ಈ ದಿನದಂದು ತಾಜಾ ಮಾವಿನ ಎಲೆಗಳ ತೋರಣವನ್ನು ಮನೆಯ ಮುಂಭಾಗ ಕಟ್ಟುತ್ತಾರೆ ಮನೆ ಮಂದಿಯೆಲ್ಲಾ ಹೊಸಬಟ್ಟೆಯನ್ನು ತೊಟ್ಟು ಸಂಭ್ರಮಿಸುತ್ತಾರೆ. ಯುಗಾದಿ ಅನೇಕ ಶುಭ ಕಾರ್ಯಗಳಿಗೆ ನಾಂದಿ ಹಾಡುತ್ತದೆ. ಯುಗಾದಿಯ ದಿನ ಬೇವು ಬೆಲ್ಲವನ್ನು ತಿಂದು ಬದುಕಿನಲ್ಲಿ ಬರುವ ಸುಖ ಹಾಗೂ ಕಷ್ಟಗಳನ್ನು ಸಮಾನ ಮನಸ್ಸಿನಿಂದ ಸ್ವೀಕರಿಸುತ್ತೇವೆ ಎಂದು ಸಂಕಲ್ಪ ಮಾಡುತ್ತೇವೆ. ಯುಗಾದಿ ಹಬ್ಬವನ್ನು ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಜನರು ತಮ್ಮ ಹೊಸ ಮನೆ ನಿರ್ಮಾಣಗಳನ್ನು ಪ್ರಾರಂಭಿಸುತ್ತಾರೆ, ಹೊಸ ವ್ಯವಹಾರಗಳನ್ನು ಕೈಗೊಳ್ಳುತ್ತಾರೆ, ಪ್ರಮುಖ ಖರೀದಿಗಳನ್ನು ಮಾಡುತ್ತಾರೆ ಮತ್ತು ಈ ದಿನದಂದು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುತ್ತಾರೆ. ಬದುಕು ಕೇವಲ ಸಿಹಿ ಕ್ಷಣಗಳಿಂದ ಕೂಡಿರುವುದಿಲ್ಲ. ನೋವು, ನಿರಾಸೆ, ಅವಮಾನ ಮುಂತಾದ ಕಷ್ಟ -ಕಾರ್ಪಣ್ಯಗಳು ನಮ್ಮ ಬದುಕನ್ನು ಕಾಡುತ್ತಿರುತ್ತವೆ. ಇವುಗಳು ಇದ್ದಾಗಲೇ ಬದುಕಿಗೊಂದು ಅರ್ಥ.

ಸುಖದ ಮಹತ್ವ ತಿಳಿಯಬೇಕಾದರೆ ಕಷ್ಟ ಅನುಭವಿಸಲೇ ಬೇಕು. ಆದ್ದರಿಂದ ಯುಗಾದಿಯು ಬದುಕಿನ ಎಲ್ಲ ಮಜಲುಗಳನ್ನು ಆತ್ಮ ವಿಶ್ವಾಸದಿಂದ ಎದುರಿಸುವ ಸ್ಥೈರ್ಯ ನೀಡುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಆಚರಿಸುವ ಪ್ರತೀಯೊಂದು ಹಬ್ಬಕ್ಕೂ ಅದರದೇ ಆದ ವಿಶೇಷತೆ ಇದೆ. ಆದರೆ ಯುಗಾದಿ ಹೊಸ ಬದುಕಿಗೂ, ಹೊಸ ನಿರ್ಣಯಗಳಿಗೂ, ಹೊಸ ಕನಸುಗಳಿಗೂ ಪ್ರೇರಣೆಯನ್ನು ನೀಡುತ್ತದೆ. ನಿನ್ನೆ ಇದ್ದಂತೆ ಇಂದೂ ಇದ್ದರೆ ಬದುಕಿಗೆ ಸೊಗಸಿಲ್ಲ. ಹೊಸತನದ ಕಂಪು ಎಲ್ಲರ ಬದುಕಲ್ಲೂ ಪಸರಿಸಲಿ. ಹೊಸ ಆಲೋಚನೆಗಳ, ಹೊಸ ಅವಕಾಶಗಳ ಪರ್ವ ಎಲ್ಲರ ಬದುಕಿಗೂ ಒದಗಿಬರಲಿ ಎಂಬುದೇ ನಮ್ಮೆಲ್ಲರ ಆಶಯ

– ಅಂಬಿಕಾ ಆರೂರು

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

ಸೌರ ಯುಗಾದಿ; ಜೀವನೋತ್ಸಾಹ, ನವಚೈತನ್ಯ ತುಂಬುವ ಹಬ್ಬ ವಿಷು

Yugadi- 2024; ಕ್ರೋಧಿ ಸಂವತ್ಸರ ಜಾಗತಿಕ ಪ್ರಭಾವ-ರಾಜ್ಯದಲ್ಲಿ ಚುನಾವಣೆ ನಂತರದ ಭವಿಷ್ಯವೇನು?

Yugadi- 2024; ಕ್ರೋಧಿ ಸಂವತ್ಸರ ಜಾಗತಿಕ ಪ್ರಭಾವ-ರಾಜ್ಯದಲ್ಲಿ ಚುನಾವಣೆ ನಂತರದ ಭವಿಷ್ಯವೇನು?

1-qwewqew

ಮರಳಿ ಬಂದಿದೆ ಯುಗಾದಿ: ಹೊಸ ಸಂವತ್ಸರದ ಹುರುಪು, ನವ ಬೆಳಕಿನ ಆಶಯ

Ugadi: ಯುಗಾದಿ ಮರಳಿ ಬರುತಿದೆ…

Ugadi: ಯುಗಾದಿ ಮರಳಿ ಬರುತಿದೆ…

Ugadi astrology 20204: ನಿಮ್ಮ ರಾಶಿ ಭವಿಷ್ಯ‌-ಯಾವ ರಾಶಿಗೆ ಕೇಡು, ಯಾವ ರಾಶಿಗೆ ಒಳಿತು!

Ugadi astrology 20204: ನಿಮ್ಮ ರಾಶಿ ಭವಿಷ್ಯ‌-ಯಾವ ರಾಶಿಗೆ ಕೇಡು, ಯಾವ ರಾಶಿಗೆ ಒಳಿತು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.