ಹೊಸ ಬದುಕಿನ ಆರಂಭ ಯುಗಾದಿ


Team Udayavani, Mar 22, 2023, 10:00 AM IST

tdy-19

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ವರುಷವ ಹೊಸತು ಹೊಸತು ತರುತಿದೆ. ಬದುಕಲ್ಲಿ ಹೊಸತನ ಇಲ್ಲದಿದ್ದರೆ ಅರ್ಥವಿಲ್ಲ. ಹಾಗೆಂದ ಮಾತ್ರಕ್ಕೆ ಹಳೆಯ ಬದುಕಿನ ಕೊಂಡಿ ಕಳಚಿ ಹೋಯಿತೆಂದು ಅರ್ಥವಲ್ಲ. ಹಳೆಯ ಬದುಕಿನ ನೆನಪುಗಳಿಗೆ ಹೊಸ ಕ್ಷಣಗಳನ್ನು ಸೇರಿಸಿ ಬದುಕಿನ ಪರಿಧಿಯನ್ನು ವಿಸ್ತರಿಸುವುದು ತಾನೇ ನಮ್ಮ ಗುರಿ. ಹಿಂದೂ ಕ್ಯಾಲೆಂಡರ್‌ ಪ್ರಕಾರ ಯುಗಾದಿಯು ಹೊಸವರ್ಷದ ಆರಂಭವಾಗಿದೆ.

ಯುಗಾದಿ ಎನ್ನುವ ಪದವು ಸಂಸ್ಕೃತದ ಯುಗ ಮತ್ತು ಆದಿ ಎನ್ನುವ ಪದಗಳಿಂದ ಹುಟ್ಟಿದ್ದು. ಯುಗ ಎಂದರೆ ಅವಧಿ ಹಾಗೂ ಆದಿ ಎಂದರೆ ಪ್ರಾರಂಭ. ಆದ್ದರಿಂದ ಯುಗಾದಿ ಎಂದರೆ ಹೊಸ ಸಮಯದ ಆರಂಭ ಎಂದಾಗಿದೆ. ಯುಗಾದಿಯ ಸಂದರ್ಭದಲ್ಲಿ ಭೂಮಿಯಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಪ್ರಕೃತಿಯೂ ಕೂಡ ಹೊಸತನದಿಂದ ತುಂಬಿ ನಲಿಯುತ್ತದೆ. ವಸಂತ ಋತುವಿನ ಪ್ರಾರಂಭ ಕಾಲವಾದ್ದರಿಂದ ಮರಗಳ ಎಲೆಗಳು ಉದುರಿ ಹೊಸ ಚಿಗುರು ಪ್ರಾರಂಭವಾಗುತ್ತದೆ.

ಯುಗಾದಿಯ ದಿನ ಎಲ್ಲರ ಮನೆ ಮನಗಳಲ್ಲಿ ಹೊಸ ಹುರುಪು ಉತ್ಸಾಹ ತುಂಬಿರುತ್ತದೆ. ಈ ದಿನದಂದು ತಾಜಾ ಮಾವಿನ ಎಲೆಗಳ ತೋರಣವನ್ನು ಮನೆಯ ಮುಂಭಾಗ ಕಟ್ಟುತ್ತಾರೆ ಮನೆ ಮಂದಿಯೆಲ್ಲಾ ಹೊಸಬಟ್ಟೆಯನ್ನು ತೊಟ್ಟು ಸಂಭ್ರಮಿಸುತ್ತಾರೆ. ಯುಗಾದಿ ಅನೇಕ ಶುಭ ಕಾರ್ಯಗಳಿಗೆ ನಾಂದಿ ಹಾಡುತ್ತದೆ. ಯುಗಾದಿಯ ದಿನ ಬೇವು ಬೆಲ್ಲವನ್ನು ತಿಂದು ಬದುಕಿನಲ್ಲಿ ಬರುವ ಸುಖ ಹಾಗೂ ಕಷ್ಟಗಳನ್ನು ಸಮಾನ ಮನಸ್ಸಿನಿಂದ ಸ್ವೀಕರಿಸುತ್ತೇವೆ ಎಂದು ಸಂಕಲ್ಪ ಮಾಡುತ್ತೇವೆ. ಯುಗಾದಿ ಹಬ್ಬವನ್ನು ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ, ಆದ್ದರಿಂದ ಜನರು ತಮ್ಮ ಹೊಸ ಮನೆ ನಿರ್ಮಾಣಗಳನ್ನು ಪ್ರಾರಂಭಿಸುತ್ತಾರೆ, ಹೊಸ ವ್ಯವಹಾರಗಳನ್ನು ಕೈಗೊಳ್ಳುತ್ತಾರೆ, ಪ್ರಮುಖ ಖರೀದಿಗಳನ್ನು ಮಾಡುತ್ತಾರೆ ಮತ್ತು ಈ ದಿನದಂದು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುತ್ತಾರೆ. ಬದುಕು ಕೇವಲ ಸಿಹಿ ಕ್ಷಣಗಳಿಂದ ಕೂಡಿರುವುದಿಲ್ಲ. ನೋವು, ನಿರಾಸೆ, ಅವಮಾನ ಮುಂತಾದ ಕಷ್ಟ -ಕಾರ್ಪಣ್ಯಗಳು ನಮ್ಮ ಬದುಕನ್ನು ಕಾಡುತ್ತಿರುತ್ತವೆ. ಇವುಗಳು ಇದ್ದಾಗಲೇ ಬದುಕಿಗೊಂದು ಅರ್ಥ.

ಸುಖದ ಮಹತ್ವ ತಿಳಿಯಬೇಕಾದರೆ ಕಷ್ಟ ಅನುಭವಿಸಲೇ ಬೇಕು. ಆದ್ದರಿಂದ ಯುಗಾದಿಯು ಬದುಕಿನ ಎಲ್ಲ ಮಜಲುಗಳನ್ನು ಆತ್ಮ ವಿಶ್ವಾಸದಿಂದ ಎದುರಿಸುವ ಸ್ಥೈರ್ಯ ನೀಡುತ್ತದೆ. ನಮ್ಮ ಸಂಸ್ಕೃತಿಯಲ್ಲಿ ಆಚರಿಸುವ ಪ್ರತೀಯೊಂದು ಹಬ್ಬಕ್ಕೂ ಅದರದೇ ಆದ ವಿಶೇಷತೆ ಇದೆ. ಆದರೆ ಯುಗಾದಿ ಹೊಸ ಬದುಕಿಗೂ, ಹೊಸ ನಿರ್ಣಯಗಳಿಗೂ, ಹೊಸ ಕನಸುಗಳಿಗೂ ಪ್ರೇರಣೆಯನ್ನು ನೀಡುತ್ತದೆ. ನಿನ್ನೆ ಇದ್ದಂತೆ ಇಂದೂ ಇದ್ದರೆ ಬದುಕಿಗೆ ಸೊಗಸಿಲ್ಲ. ಹೊಸತನದ ಕಂಪು ಎಲ್ಲರ ಬದುಕಲ್ಲೂ ಪಸರಿಸಲಿ. ಹೊಸ ಆಲೋಚನೆಗಳ, ಹೊಸ ಅವಕಾಶಗಳ ಪರ್ವ ಎಲ್ಲರ ಬದುಕಿಗೂ ಒದಗಿಬರಲಿ ಎಂಬುದೇ ನಮ್ಮೆಲ್ಲರ ಆಶಯ

– ಅಂಬಿಕಾ ಆರೂರು

ಟಾಪ್ ನ್ಯೂಸ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

ಮಹಾಲಿಂಗಪುರದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ, ಆಸ್ತಿ ಪಾಸ್ತಿ ನಷ್ಟ

1wwwqe

Writer ಬಂಜಗೆರೆ ಜಯಪ್ರಕಾಶ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-20

ಸಂತಸ ಹೊತ್ತು ತರುವ ಯುಗಾದಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sa-ds

ಆಚರಣೆ ರೀತಿ ಬೇರೆಯಾದರೂ ಸಾರುವ ತಣ್ತೀ ಮಾತ್ರ ಒಂದೇ…

tdy-15

ಹೊಸ ಸಂವತ್ಸರದ ಆದಿ ಮರಳಿ ಬಂದಿದೆ ಯುಗಾದಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್

ಅಮೇರಿಕ-ಭಾರತ ಬಾಂಧವ್ಯದಿಂದ ಯುವಕರಿಗೆ ಒಳಿತು: ಜುಡಿತ್‌ ರೇವಿನ್