ಹೊಸ ಸಂವತ್ಸರದ ಆದಿ ಮರಳಿ ಬಂದಿದೆ ಯುಗಾದಿ


Team Udayavani, Mar 22, 2023, 9:00 AM IST

tdy-15

ಎಲ್ಲರ ಬದುಕಿನಲ್ಲೂ ಕಷ್ಟ, ಸುಖ ಎಂಬುದು ಬಂದೇ ಬರುತ್ತದೆ. ಅವುಗಳನ್ನು ಸಮಾನವಾಗಿ ಸ್ವೀಕರಿಸುವ ಮನಸ್ಥಿತಿ ನಮ್ಮದಾಗಿರಬೇಕಷ್ಟೆ ಎಂಬುದನ್ನೇ ಹಬ್ಬಗಳು ಸಾರುತ್ತವೆ. ಭಾರತೀಯ ಸಂಸ್ಕೃತಿಯಲ್ಲಿ ಆಚರಿಸಲ್ಪಡುವ ಪ್ರತಿಯೊಂದು ಹಬ್ಬಗಳ ಹಿಂದೆಯೂ ಒಂದೊಂದು ವಿಶೇಷತೆಗಳಿರುತ್ತವೆ. ಅದರಲ್ಲೂ ಯುಗಾದಿ ಹೇಳುವ ಬದುಕಿನ ಪಾಠವನ್ನು ಎಲ್ಲರೂ ನೆನಪಿಸಿಕೊಳ್ಳಲೇಬೇಕು. ಪ್ರಕೃತಿ ಮತ್ತು ಮಾನವನ ಸಂಬಂಧ ಎಷ್ಟು ಗಾಢವಾಗಿದೆ ಎನ್ನುವುದನ್ನು ಇದು ಹೇಳುವುದರ ಜತೆಜತೆಗೆ ಜೀವನದಲ್ಲಿ ಎದುರಾಗುವ ಸಂಕಷ್ಟಗಳನ್ನು ನಗುತ್ತಾ ಸ್ವೀಕರಿಸಿದರೆ ಕಾಲ ಕಳೆದಂತೆ ಎಲ್ಲ ಸಮಸ್ಯೆಗಳೂ ದೂರವಾಗಿ ಬದುಕಿಗೆ ಹೊಸ ಬೆಳಕು ತೋರುತ್ತದೆ ಎನ್ನುವ ಸಂದೇಶವನ್ನೂ ಸಾರುತ್ತದೆ.

—————–

ವರುಷ ವರುಷಗಳೇ ಉರುಳಿತ್ತಿವೆ

ಹೊಸತನವ ಹೊತ್ತು

ಹೊಸ ವರುಷ ಮತ್ತೆ ಮತ್ತೆ ಮರಳುತ್ತಿವೆ

ಎಲ್ಲರ ಬದುಕಿಗೂ ಬೆಳಕಾಗಿ ಬರಲಿ

ಹೊಸ ವರುಷ, ಹೊಸ ಸಂವತ್ಸರ

ವಿಶ್ವದ ಕಾಂತಿಯಾಗಿ ಶಾಂತಿ ತರಲಿ

ಶೋಭಕೃತ್‌ ಶುಭ ಸಂವತ್ಸರ

ಒಂದು ಚಾಂದ್ರಮಾನ ವರ್ಷವನ್ನು ಸಂವತ್ಸರ ಎಂದು ಕರೆಯಲಾಗುತ್ತದೆ. ಹೀಗೆ ಆರುವತ್ತು ಸಂವತ್ಸರಗಳಿವೆ. ಇವುಗಳಿಗೆ ಅತ್ಯಂತ ಸುಂದರವಾದ ಹೆಸರುಗಳನ್ನು ನಮ್ಮ ಹಿರಿಯರು ಇಟ್ಟಿದ್ದಾರೆ. ಶೋಭಕೃತ್‌ ವಿಶ್ವದ ಕಾಂತಿಯಾಗಿ ವಿಶ್ವ ಶಾಂತಿ ತರಲಿ ಎನ್ನುವ ಭರವಸೆಯಲ್ಲಿ ಯುಗಾದಿಯ ವೈಭವದ ಸ್ವಾಗತಕ್ಕೆ  ಸಿದ್ಧತೆಗಳನ್ನು ನಡೆಸುವ ಮುನ್ನ ಇದರ ಬಗ್ಗೆ ಒಂದಷ್ಟು ತಿಳಿದುಕೊಳ್ಳಬೇಕಿದೆ.

ಯುಗಾದಿ ಪದದ ಅರ್ಥ ಯುಗದ ಆರಂಭದ ದಿನ. ಸತ್ಯ, ತ್ರೇತಾ, ದ್ವಾಪರ ಯುಗಗಳ ಅನಂತರ ಕಲಿಯುಗ ಆರಂಭವಾದ ದಿನ. ಕ್ರಿ.ಪು. 5123ರಲ್ಲಿ ಕಲಿಯುಗದ ಜನನವಾಗಿದ್ದು, ಈ ದಿನದ ಆಚರಣೆಯೇ ಯುಗಾದಿ ಹಬ್ಬ. ಇನ್ನು ಕೆಲವು ಅಭಿಪ್ರಾಯದಂತೆ ಬ್ರಹ್ಮ ಈ ದಿನ ವಿಶ್ವ ಸೃಷ್ಟಿಸಿದ್ದು, ಶ್ರೀ ರಾಮಚಂದ್ರನು ಮರಳಿ ಅಯೋಧ್ಯೆಗೆ ಬಂದು ಸಿಂಹಾಸನ ಸ್ವೀಕರಿಸಿ ಪಟ್ಟಾಭಿಷೇಕ ಆಗಿದ್ದು… ಹೀಗೆ ಅನೇಕ ಪ್ರಾಮುಖ್ಯತೆಯನ್ನು ಈ ಹಬ್ಬಕ್ಕೆ ನೀಡಲಾಗಿದೆ. ಇದು ದೇಶದಾದ್ಯಾಂತ ಬೇರೆ ಬೇರೆ ಹೆಸರಿನಿಂದ ಆಚರಿಸಲ್ಪಡುತ್ತದೆ. ದಕ್ಷಿಣ ಭಾರತದಲ್ಲಿ ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಇದಕ್ಕೆ ಗುಡಿಪಡ್ವಾ ಎಂದು ಕರೆಯಲಾಗುತ್ತದೆ.

ಹಬ್ಬಗಳು ಏಕೆ?:

ಹಬ್ಬ ಎಂದರೆ ದೇವರನ್ನು ಕರೆದು ಆತಿಥ್ಯ ಮಾಡಿ ಅವನ ಕೃಪೆಗೆ ಪಾತ್ರರಾಗುವುದು ಎನ್ನುವುದು ಭಾರತೀಯ ಸಂಸ್ಕೃತಿ. ಭಾರತೀಯರಿಗೆ ನಿತ್ಯೋತ್ಸವ ನಿತ್ಯ ಮಂಗಳ ಎನ್ನುತ್ತಾರೆ. ಯಾಕೆಂದರೆ ನಮಗೆ ಪ್ರತಿನಿತ್ಯವೂ ಹಬ್ಬ. ಇದರ ಗೂಢಾರ್ಥ ದೈವ ಕೃಪೆ ಬೇಡುವುದು ನಾಮ ಸ್ಮರಣೆ ಮಾಡುವುದು. ಇದು ಮೋಕ್ಷ ಮಾರ್ಗಕ್ಕೆ ಹೆದ್ದಾರಿಯೂ ಹೌದು.

ಬರುವ ನೂತನ ಸಂವತ್ಸರವನ್ನು ಸ್ವಾಗತಿಸುವುದೇ ಯುಗಾದಿಯ ಸಂಕೇತ. ಮಾರ್ಚ್‌ ಅಥವಾ ಎಪ್ರಿಲ್‌ ತಿಂಗಳಿನಲ್ಲಿ ವಸಂತ ಋತುವಿನ ಆರಂಭದೊಡನೆ ಈ ಹಬ್ಬ ಬರುತ್ತದೆ. ಹೊಸ ಪಂಚಾಂಗ, ಹೊಸ ವರ್ಷದ ಆರಂಭ. ಅಂತೆಯೇ  ಪ್ರಕೃತಿಯಲ್ಲಿ ಕೂಡ ಲವಲವಿಕೆ, ಗಿಡ ಮರಗಳು ಚಿಗುರುತ್ತವೆ. ಪಾಶ್ಚಿಮಾತ್ಯ ದೇಶಗಳಲ್ಲಿ ಚಳಿ ಮಾಯವಾಗಿ ಹಿತಕರ ವಾತಾವರಣ ಅಡಿಯಿಟ್ಟು ಆಹ್ಲಾದವನ್ನುಂಟು ಮಾಡುತ್ತದೆ. ಒಟ್ಟಿನಲ್ಲಿ ಈ ಹಬ್ಬ ಹೊಸ ಪಂಚಾಂಗ, ಹೊಸ ಪ್ರಕೃತಿ, ಹೊಸ ಆನಂದದ ಮಿಶ್ರಣ. ಇದನ್ನು ಸವಿಯುವುದೇ ಹಬ್ಬದ ವಿಶೇಷ.

ಯುಗಾದಿ ಆಚರಣೆ ಹೇಗೆ? :

ಯುಗಾದಿ ಬರುವಿಕೆಯು ವಸಂತ ಋತುವಿನ ಆಗಮನವನ್ನು ಸೂಚಿಸುತ್ತದೆ. ಪ್ರಕೃತಿ ಕೂಡ ನೂತನ ಸಂವತ್ಸರವನ್ನು ಸಂಭ್ರಮದಿಂದ ಸ್ವಾಗತಿಸುತ್ತದೆ. ಮುಂಬರುವ ಹೊಸ ಸಂವತ್ಸರ ಎಲ್ಲರಿಗೂ ಶುಭ ತರಲಿ ಎನ್ನುವ ಉದ್ದೇಶದಿಂದ ಹಬ್ಬವನ್ನು ಆಚರಿಸಲಾಗುತ್ತದೆ. ಕಾಲಾಯ ತಸೆ¾„ ನಮಃ  ಹಳೆಯ ಕಾಲ ಅಥವಾ ಸಂವತ್ಸರದ ಹನ್ನೆರಡು ತಿಂಗಳು ಕಳೆದು ಹೊಸ ಕಾಲ ಆರಂಭ. ಅದಕ್ಕೆ ಹಳೆಯ ಕಾಲವನ್ನು ಸಂತೋಷದಿಂದ ಬೀಳ್ಕೊಟ್ಟು ಹೊಸ ಕಾಲಕ್ಕೆ ನಮಿಸಿ ಸ್ವಾಗತಕೋರಬೇಕು.

ಸಂವತ್ಸರದ ಪ್ರಥಮ ಮಾಸ ಚೈತ್ರ, ಪ್ರಥಮ ದಿನ ಪಾಡ್ಯ. ಪವಿತ್ರವಾದ ಈ ದಿನವನ್ನು ಸಂಭ್ರಮದಿಂದ ಆಧ್ಯಾತ್ಮಿಕ ನಿಟ್ಟಿನಲ್ಲಿ ಸ್ವಾಗತಿಸಬೇಕು. ಹಬ್ಬ ಎಂದರೆ ಆನಂದ. ಸರಳ ಮತ್ತು ಭೋಗ ಜೀವನವೂ ಬದುಕಿನಲ್ಲಿ ಇರಬೇಕು.  ಎರಡಕ್ಕೂ ಸಮಾನ ಪ್ರಾಮುಖ್ಯ ನೀಡಿದರೆ ಅದೇ ಆತ್ಮತೃಪ್ತಿಯನ್ನೊದಗಿಸುತ್ತದೆ ಎನ್ನುವುದನ್ನು ಸಾರುತ್ತದೆ.

ಹಬ್ಬದ ತಯಾರಿ ಎಲ್ಲರ ಮನೆಗಳಲ್ಲಿ ಬಹಳ ದಿನಗಳ ಮುಂಚೆಯೇ ಆರಂಭವಾಗುತ್ತದೆ. ಮನೆಗೆ ಸುಣ್ಣ ಬಣ್ಣ ಬಳಿದು, ಅಲಂಕರಿಸುವುದು ವಿಶೇಷ. ಹಾಗೆಯೇ ನಮ್ಮ ಹೊರ ವಾತಾವರಣದಲ್ಲಿ ಕೂಡ ಸಂಭ್ರಮ ಕಾಣುತ್ತೇವೆ. ಯುಗಾದಿ ಸೇಲ್‌ ಸೀರೆ, ಬಟ್ಟೆ , ಚಿನ್ನ , ಬೆಳ್ಳಿ ಅಂಗಡಿಗಳಲ್ಲಿ ಜನಜಂಗುಳಿ, ಪುಸ್ತಕದ ಅಂಗಡಿಗಳ ಪಂಚಾಂಗಗಳ ಪ್ರದರ್ಶನ, ದಿನಸಿ ಅಂಗಡಿಗಳು, ಹೂವಿನ ಅಂಗಡಿಗಳು ಭಾಗವಹಿಸುತ್ತಾ ಇದ್ದರೆ ಊರಿಗೆ ಊರೇ ಕಂಗೊಳಿಸುತ್ತದೆ. ಹೊಸ ವಾತಾವರಣ ಶುದ್ಧಿಯಾದಾಗ ಅಂತರಂಗವೂ ಶುದ್ಧಿಯಾಗುತ್ತದೆ. ಹೊಸ ಬಟ್ಟೆಗಳನ್ನು ತೊಡುವುದು ಹಳೆಯ ಬಟ್ಟೆಗಳನ್ನು ತೊರೆಯುವ ಸಂಕೇತ ನಮ್ಮಲ್ಲಿರುವ ನಿರ್ಗುಣ ತೊಲಗಿಸಿ ಸಗುಣ ಮನದಲ್ಲಿ ತುಂಬಿ ಧಾರ್ಮಿಕ ಜೀವನ ನಡೆಸಿರಿ ಎನ್ನುವುದೇ ಆಗಿರುತ್ತದೆ .

ಮಾವಿನ ತೋರಣ ಬಾಗಿಲನ್ನು ಅಲಂಕರಿಸಿದರೆ, ರಂಗೋಲಿ ಮನೆಯ ಮುಂದೆ ಕಂಗೊಳಿಸುತ್ತದೆ. ದೇವರ ಗುಡಿ ದೀಪಗಳಿಂದ ಬೆಳಗಿ ಪಂಚಾಂಗ ಶ್ರವಣಕ್ಕೆ ತಯಾರಿ ನಡೆಯುತ್ತದೆ. ಮನೆಯಲ್ಲಿ ಹೋಳಿಗೆ, ಪಾಯಸ ಮೊದಲಾದ ಖಾದ್ಯ ಪದಾರ್ಥಗಳನ್ನು ತಯಾರಿಸಿ ದೇವರಿಗೆ ಅರ್ಪಿಸಿ ಸವಿಯುವುದರ ಅರ್ಥ ವರ್ಷ ಪೂರ್ತಿ ಆನಂದದ ಹೊಳೆ ಹರಿಯಲಿ ಎಂಬುದೇ ಆಗಿದೆ.

ಮತ್ತೂಂದು ಮುಖ್ಯ ಸಂಗತಿ ಸ್ಥಿತ ಪ್ರಜ್ಞ ಕೃಷ್ಣ ಬೋಧಿಸಿದ ನೀತಿಯನ್ನು ಪಾಲಿಸುವುದು. ಏನೇ ಕಷ್ಟಗಳು ಬರಲಿ, ಏನೇ ಸುಖ ಬರಲಿ ಸಮವಾಗಿ ಸ್ವೀಕರಿಸು ಮಾನವ. ಭಗವದ್ಗೀತೆಯಲ್ಲಿ ಮಾನವ ಜನಾಂಗಕ್ಕೆ ಕೃಷ್ಣ ನ ಸಂದೇಶ. ಕಷ್ಟದಲ್ಲಿ ಕುಗ್ಗದೆ, ಸುಖದಲ್ಲಿ ಹಿಗ್ಗದೇ ಸಮತೋಲನ ಜೀವನ ನಡೆಸಬೇಕು ಎನ್ನುವುದು ಇದರ ಅರ್ಥ.

ಇದೇ ಕಾರಣ ಯುಗಾದಿಯ ದಿನದಂದು ಬೇವು, ಬೆಲ್ಲ ಮಿಶ್ರಣದ ನೈವೇದ್ಯ ಭಂಜಿಸುವುದು. ಬೇವು ಕಹಿ, ಬೆಲ್ಲ ಸಿಹಿ ಇದು ಒಂದು ನಾಣ್ಯದ ಎರಡು ಮುಖಗಳು. ಎಲ್ಲರ ಬಾಳಿನಲ್ಲಿ  ಇದನ್ನು ಭಕ್ಷಿಸುವಾಗ ಈ ಕೆಳಕಂಡ ಮಂತ್ರ ಪಠನೆ ಮುಖ್ಯವಾದ ಅಂಗ.

ಶತಾಯು ವಜ್ರ ದೇಹಾಯಾ ಸರ್ವ ಸಂಪತ್‌ ಕರಾಯಚ ಸರ್ವಾರಿಷ್ಟ ವಿನಾಶಾಯ ನಿಂಬ ಕಂಬಳ ಭಕ್ಷಣಂ ||

ಓ ಭಗವಂತ ನೂರು ವರುಷ ಆಯಸ್ಸು, ಆರೋಗ್ಯವಾದ ದೇಹ, ಸುಖ ಸಂಪತ್ತು, ಕಷ್ಟಗಳ ನಿವಾರಣೆ ನಮಗೆ ಕರುಣಿಸು. ಈ ದಿನ ದೇವಸ್ಥಾನಗಳಿಗೆ ಹೋಗುವುದು ವಾಡಿಕೆ. ದೇವರಿಗೆ ಅರ್ಚನೆ ಸಲ್ಲಿಸಿ ಹೊಸ ವರುಷಕ್ಕೆ ನಾಂದಿಯಾಗಲಿ ಎನ್ನುವ ನಂಬಿಕೆ.

– ಜಯ ಮೂರ್ತಿ, ಇಟಲಿ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-20

ಸಂತಸ ಹೊತ್ತು ತರುವ ಯುಗಾದಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

Ugadi special; ಕುಸುಮಾಕರನನ್ನು ಸ್ವಾಗತಿಸಿ

yugadi-article

ಹೊಸದೊಂದು ವರುಷವಿದು ಮತ್ತೆ ಯುಗಾದಿ

1-sa-ds

ಆಚರಣೆ ರೀತಿ ಬೇರೆಯಾದರೂ ಸಾರುವ ತಣ್ತೀ ಮಾತ್ರ ಒಂದೇ…

tdy-19

ಹೊಸ ಬದುಕಿನ ಆರಂಭ ಯುಗಾದಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.