
ಅಡಿಕೆ ಕೊಳೆ ರೋಗಕ್ಕೆ ಸರಕಾರದಿಂದ ಉಚಿತ ಔಷಧಿಗೆ ಚಿಂತನೆ : ಸಚಿವ ಎಸ್.ಅಂಗಾರ
Team Udayavani, Oct 1, 2022, 7:23 PM IST

ಸುಳ್ಯ: ಇತ್ತೀಚೆಗೆ ತೋಟಗಾರಿಕಾ ಸಚಿವ ಮುನಿರತ್ನ, ಗೃಹ ಸಚಿವ ಆರಗ ಹಾಗೂ ನಾನು ಬೆಂಗಳೂರಿನಲ್ಲಿ ಸಭೆ ನಡೆಸಿ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ ಔಷಧಿಯನ್ನು ಕೃಷಿಕರಿಗೆ ಉಚಿತವಾಗಿ ನೀಡುವ ಬಗ್ಗೆ ತೀರ್ಮಾನವನ್ನು ರಾಜ್ಯ ಸರಕಾರ ಮಾಡಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ತಿಳಿಸಿದರು.
ಅವರು ಶನಿವಾರ ಸುಳ್ಯದ ನಿರೀಕ್ಷಣ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಔಷಧಿ ಸಿಂಪಡಿಸಲು ಸರಕಾರ ಸಬ್ಸಿಡಿ ದರದಲ್ಲಿ ದೋಟಿಯನ್ನು ನೀಡುವ ಬಗ್ಗೆ ತೀರ್ಮಾನಿಸಿದೆ, 18 ದಿನಗಳೊಳಗಡೆ ಸುಳ್ಯಕ್ಕೆ ಆರಗ ಜ್ಞಾನೇಂದ್ರ, ತೋಟಗಾರಿಕಾ ಸಚಿವರು ಬಂದು ಇಲ್ಲಿ ಅಡಿಕೆ ಹಳದಿ ರೋಗದ ರೈತರ ಅಭಿಪ್ರಾಯ ಪಡೆದು ಮುಂದೆ ಏನು ಮಾಡಬೇಕು ಎಂಬ ಬಗ್ಗೆ ತೀರ್ಮಾನಿಸಲಿದ್ದೇವೆ ಎಂದು ಅವರು ತಿಳಿಸಿದರು.
ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಬ್ಬರ್ ಮಂಡಳಿ ನಿರ್ದೇಶಕ ಮುಳಿಯ ಕೇಶವ ಭಟ್, ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಬಿಜೆಪಿ ಮಂಡಲಾಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ಚನಿಯ ಕಲ್ತಡ್ಕ, ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ, ಸುಭೋದ್ ಶೆಟ್ಟಿ ಮೇನಾಲ, ಸುನಿಲ್ ಕೇರ್ಪಳ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಅಡಕೆ ಆಮದು ಮಾಡಿಕೊಳ್ಳುವ ಕೇಂದ್ರದ ನಿರ್ಧಾರ ದೇಶಿ ಅಡಕೆ ಬೆಳೆಗಾರರ ಭವಿಷ್ಯಕ್ಕೆ ಮಾರಕ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ-ಎನ್ಸಿಆರ್ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್ಸಿಆರ್ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್