ಧಾರವಾಡ: ಅಖಿಲ ಭಾರತೀಯ ಆರೆಸ್ಸೆಸ್ ಬೈಠಕ್ ಗೆ ಚಾಲನೆ
Team Udayavani, Oct 28, 2021, 11:30 AM IST
ಧಾರವಾಡ: ಇಂದಿನಿಂದ ಮೂರು ದಿನಗಳ ಕಾಲ (ಅ.28, 29 ಮತ್ತು 30ರಂದು) ಹೊರವಲಯದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಗೆ ಇಂದು ಚಾಲನೆ ಲಭಿಸಿದೆ.
ಆರ್ ಎಸ್ಎಸ್ ನ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಬೈಠಕ್ ಗೆ ಚಾಲನೆ ನೀಡಿದರು.
ಬೈಠಕ್ ಹಿನ್ನೆಲೆಯಲ್ಲಿ ಸುಂದರ ವೇದಿಕೆ ಸಜ್ಜುಗೊಳಿಸಿದ್ದು, ಕಿತ್ತೂರು ರಾಣಿ ಚೆನ್ನಮ್ಮ, ಬಸವಣ್ಣ, ಕನಕ-ಪುರಂದರ, ಸೇರಿದಂತೆ ಕರ್ನಾಟಕದ ಮಹಾನ್ ಚೇತನಗಳ ಭಾವಚಿತ್ರದ ಫಲಕ ಅಳವಡಿಸಲಾಗಿದೆ.
ಇದನ್ನೂ ಓದಿ:ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ
ರಾಷ್ಟೊತ್ಥಾನ ವಿದ್ಯಾಕೇಂದ್ರ ಮತ್ತು ಸುತ್ತಲಿನ ಪ್ರದೇಶದ ಪ್ರಮುಖ ರಸ್ತೆಗಳು, ವೃತ್ತ ಗಳಲ್ಲಿ ಭಗಾಧ್ವಜಗಳು ಹಾರಾಟ ಆರಂಭಿಸಿದ್ದು, ಕೇಸರಿ ಬಣ್ಣದ ಬಾವುಟ ಗಳಿಂದ ಅಲ್ಲಲ್ಲಿ ಅಲಂಕರಿಸಲಾಗಿದೆ.
ಅಖಿಲ ಭಾರತೀಯ, ಕ್ಷತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಈ ಬೈಠಕ್ ನಲ್ಲಿ ಭಾಗವಹಿಸಿದ್ದು, ದೇಶಾದ್ಯಂತ ಸುಮಾರು 350 ಪ್ರತಿನಿಧಿಗಳು ಈ ಬೈಠಕ್ ನಲ್ಲಿ ಉಪಸ್ಥಿತರಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪ್ರತಿತಂತ್ರ, ಬಿಜೆಪಿ ಸರ್ಕಾರದಲ್ಲಿನ ಜನಪ್ರಿಯ ಯೋಜನೆಗಳ ಜಾರಿ, ಸ್ವಾತಂತ್ರ್ಯ ಅಮೃತ ಮಹೋತ್ಸವ ಕುರಿತು ಇನ್ನಷ್ಟು ಕಾರ್ಯಕ್ರಮ ಗಳ ರಚನೆ ಸೇರಿದಂತೆ, ಕರ್ನಾಟಕದಲ್ಲಿ ಬಿಜೆಪಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕುರಿತು ಇಲ್ಲಿ ಕಾರ್ಯತಂತ್ರ ರಚನೆಯಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!