ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

11 ವರ್ಷವಾದರೂ ಪೂರ್ಣಗೊಳ್ಳದ ಜಿಲ್ಲಾ ರಂಗಮಂದಿರ ಕಾಮಗಾರಿ „ ಪ್ರದರ್ಶನಕ್ಕಾಗಿ ಕಲಾ ತಂಡಗಳ ಪರದಾಟ

Team Udayavani, Oct 18, 2021, 5:06 PM IST

ಡಾ.ರಾಜ್‌ ತವರಲಿ ರಂಗಮಂದಿರಕ್ಕೆ ಗ್ರಹಣ

ಚಾಮರಾಜನಗರ: ರಂಗಭೂಮಿಯಿಂದ ಬಂದು ಸಿನಿಮಾ ರಂಗದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದ ವರನಟ ಡಾ.ರಾಜ್‌ಕುಮಾರ್‌ ತವರು ಜಿಲ್ಲೆ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ 2010ರಲ್ಲಿ ಆರಂಭಗೊಂಡ ಜಿಲ್ಲಾ ರಂಗಮಂದಿರ ಕಾಮಗಾರಿ 11 ವರ್ಷವಾದರೂ ಪೂರ್ಣಗೊಂಡಿಲ್ಲ.! ಅಂತಿಮ ಹಂತದ ಕಾಮಗಾರಿ ನಡೆಯಬೇಕಿದ್ದು, ಕಾಮಗಾರಿ ಸ್ಥಗಿತ ಗೊಂಡಿರುವ ಕಾರಣ ಕಟ್ಟಡ ಪಾಳು ಬಿದ್ದಿದೆ. ಇನ್ನೊಂದೆಡೆ ರಂಗಮಂದಿರ ಇಲ್ಲದ ಕಾರಣ ಸ್ಥಳೀಯ ಕಲಾತಂಡಗಳು ಪ್ರದರ್ಶನಕ್ಕಾಗಿ ಪಡಿಪಾಟಲು ಪಡಬೇಕಿದೆ.

 ಅನುಮೋದನೆ: ರಾಜ್ಯ ಸರ್ಕಾರ 2009-10ನೇ ಸಾಲಿನಲ್ಲಿ ರಂಗಮಂದಿರ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಜಿಲ್ಲಾಡಳಿತ ಭವನದ ಆವರಣದಲ್ಲೇ ಇರುವ 20 ಗುಂಟೆ ಜಾಗದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ನಡೆದಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಸ್ತುವಾರಿಯಲ್ಲಿ ಲೋಕೋಪಯೋಗಿ ಇಲಾಖೆ ಈ ಕಟ್ಟಡ ನಿರ್ಮಿಸಿದೆ.

ಮೊದಲ ಹಂತದ ಕಾಮಗಾರಿಯಲ್ಲಿ ಸುಂದರವಾದ ಕಟ್ಟಡ ಮೇಲೆದ್ದಿತು. ಅದಕ್ಕೆ ಬಿಳಿ ಬಣ್ಣವನ್ನೂ ಬಳಿಯಲಾಗಿದೆ. ಆಗ ಕಟ್ಟಡ ನಿರ್ಮಾಣಗೊಂಡ ಬಳಿಕ, ಒಳಾಂಗಣದಲ್ಲಿ ಸ್ಥಳಾವಕಾಶ ಕಡಿಮೆಯಿದೆ. ರಂಗಮಂದಿರ ಸೂಕ್ತ ರೀತಿಯಲ್ಲಿ ನಿರ್ಮಾಣವಾಗಿಲ್ಲ ಎಂದು ಅಂದಿನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌. ಎಸ್‌.ಮಹದೇವಪ್ರಸಾದ್‌ ಅಸಮಾಧಾನ ವ್ಯಕ್ತಪಡಿಸಿ, ಮಾರ್ಪಾಡಿತ ಕಾಮಗಾರಿ ನಡೆಸಲು ಸೂಚಿಸಿದ್ದರು.

ಮತ್ತೆ, ಜಿಲ್ಲಾಧಿಕಾರಿ ಯೋಜನಾ ವರದಿ ತಯಾರಿಸಿ ಕಳುಹಿಸಿದ ಮೇಲೆ, ಜಿಲ್ಲಾ ರಂಗಮಂದಿರದ ಅಕಾಸ್ಟಿಕ್‌, ಫಾಲ್‌ ಸೀಲಿಂಗ್‌, ಸೌಂಡ್‌ ಸಿಸ್ಟಂ ಮತ್ತು ಆಸನದ ವ್ಯವಸ್ಥೆ ಮತ್ತಿತರ ಕಾಮಗಾರಿ ನಡೆಸಲು ಸರ್ಕಾರ 2017ರಲ್ಲಿ 2.30 ಕೋಟಿ ರೂ. ಬಿಡುಗಡೆ ಮಾಡಿತ್ತು. ಆದರೆ, ಆಡಳಿತಾತ್ಮಕ ಅನುಮೋದನೆ ದೊರೆತಿರಲಿಲ್ಲ. ಹಲವು ಅಡಚಣೆ, ವಿಳಂಬದಿಂದಾಗಿ 2020ರ ಡಿಸೆಂಬರ್‌ನಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿತು.

ಈ ಕಾಮಗಾರಿಗಳ ಏಜೆನ್ಸಿಯನ್ನು ಲೋಕೋಪಯೋಗಿ ಇಲಾಖೆಗೆ ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ಟೆಂಡರ್‌ ಕರೆದು ಕೆಲಸ ಆರಂಭಿಸಬೇಕಿದೆ. ಈಗ ನಿರ್ಮಾಣವಾಗಿರುವ ರಂಗಮಂದಿರದ ಅಂತಿಮ ಹಂತದ ಕಾಮಗಾರಿ ಪೂರ್ಣಗೊಂಡು, ಉದ್ಘಾಟನೆಯಾದರೆ, ಜಿಲ್ಲೆಯ ರಂಗಭೂಮಿ ಕಲಾವಿದರಿಗೆ ತಮ್ಮ ನಾಟಕ ಪ್ರದರ್ಶಿಸಲು ಉತ್ತಮ ರಂಗಮಂದಿರ ದೊರೆತಂತಾಗುತ್ತದೆ. ತನ್ಮೂಲಕ ರಂಗ ಕಲೆಗೂ ಪ್ರೋತ್ಸಾಹ ಸಿಗುತ್ತದೆ.

ಇದನ್ನೂ ಓದಿ;- ನಾಲ್ಕು ಎಸೆತದಲ್ಲಿ ನಾಲ್ಕು ವಿಕೆಟ್: ಹೊಸ ದಾಖಲೆ ಬರೆದ ಐರ್ಲೆಂಡ್ ಬೌಲರ್

ಪೈಪೋಟಿ!: ವಿಪರ್ಯಾಸವೆಂದರೆ, ವರನಟ ಡಾ. ರಾಜ್‌ಕುಮಾರ್‌ ಅವರು ಜನಿಸಿದ ಜಿಲ್ಲೆಯ, ಜಿಲ್ಲಾ ಕೇಂದ್ರದಲ್ಲಿ ಅವರ ಹೆಸರಿನ ರಸ್ತೆಯಾಗಲೀ, ಸ್ಮಾರಕವಾಗಲೀ ಇಲ್ಲ. ಈ ರಂಗಮಂದಿರಕ್ಕೆ ಡಾ.ರಾಜ್‌ಕುಮಾರ್‌ ಅವರ ಹೆಸರಿಟ್ಟರೆ, ಅದು ಅರ್ಥಪೂರ್ಣವೂ, ಆ ಮಹಾನ್‌ ಕಲಾವಿದನಿಗೆ ಹುಟ್ಟೂರಿನಲ್ಲಿ ದೊರೆತ ಗೌರವವೂ ಆಗುತ್ತದೆ. ವಿಷಾದದ ಸಂಗತಿಯೆಂದರೆ, ಯಾವುದೇ ಸಂಘಟನೆ ರಂಗಮಂದಿರಕ್ಕೆ ಡಾ.ರಾಜ್‌ ಕುಮಾರ್‌ ಹೆಸರಿಡಬೇಕು ಎಂದು ಒತ್ತಾಯಿಸುತ್ತಿಲ್ಲ.!

ಉದ್ಘಾಟನೆಗೊಳ್ಳುವ ಮುನ್ನವೇ ಪಾಳು ಬಿದ್ದ ಕಟ್ಟಡ

2017ರಿಂದ ಕಾಮಗಾರಿ ನಿಂತ ಕಾರಣ, ಈಗ ರಂಗಮಂದಿರ ಪಾಳು ಬಿದ್ದಿದೆ. ಒಳಗೆಲ್ಲ ದೂಳಿನ ರಾಶಿ ತುಂಬಿದೆ. ಜೇಡರ ಬಲೆಗಳು ಆವರಿಸಿವೆ. ತುಂಬಾ ಪ್ರಾಚೀನ ಕಟ್ಟಡ ಪಾಳು ಬಿದ್ದಾಗ, ಗೋಡೆ, ಕಂಬದ ಮೇಲೆ ಹಕ್ಕಿಯ ಹಿಕ್ಕೆಗಳನ್ನು ವಿಸರ್ಜನೆ ಮಾಡಿದಂತೆ, ಈ ಕಟ್ಟಡದಲ್ಲೂ ಹಿಕ್ಕೆಗಳ ಕಲೆಗಳು ಆವರಿಸಿವೆ. ಈಗಲೇ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್‌ ಸ್ವಿಚ್‌ಗಳೆಲ್ಲಾ ಕಿತ್ತು ಹೋಗಿವೆ. ಗೋಡೆ ಮೇಲೆ ಮಸಿಯಲ್ಲಿ ಚಿತ್ರಗಳನ್ನು ಬರೆಯಲಾಗಿದೆ.

ಕೋಟ್ಯಂತರ ವೆಚ್ಚದಲ್ಲಿ ನಿರ್ಮಾಣವಾಗಿ, ರಂಗ ಪ್ರದರ್ಶನದ ತಾಣವಾಗಬೇಕಿದ್ದ, ರಂಗಮಂದಿರವೊಂದು ಉದ್ಘಾಟನೆಗೊಳ್ಳುವ ಮೊದಲೇ ಪಾಳುಬಿದ್ದಿದೆ. ಇನ್ನೊಂದೆಡೆ, ಜಿಲ್ಲೆಯ ರಂಗಭೂಮಿ ಕಲಾವಿದರಿಗೆ ರಂಗಮಂದಿರವಿಲ್ಲದೇ ಸಭಾ ಕಾರ್ಯಕ್ರಮ ನಡೆಸುವ ಜಾಗವಾದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲೇ ನಾಟಕ ಪ್ರದರ್ಶಿಸಬೇಕಾದ ಅನಿವಾರ್ಯತೆ ಇದೆ.

ಪ್ರದರ್ಶನದ ದಿನ ಯಾವುದಾದರೂ ಸರ್ಕಾರಿ ಕಾರ್ಯಕ್ರಮ ಅಥವಾ ಇನ್ನಿತರ ಸಭಾ ಕಾರ್ಯಕ್ರಮ ಬಿದ್ದರೆ, ಅಂದು ರಂಗ ಕಲಾವಿದರಿಗೆ ಪಟೇಲ್‌ ಸಭಾಂಗಣ ದೊರಕುವುದೂ ಇಲ್ಲ. ಪಟೇಲ್‌ ಸಭಾಂಗಣದ ವೇದಿಕೆ ಬಹಳ ಚಿಕ್ಕದಾಗಿದ್ದು, ನಾಟಕ ಪ್ರದರ್ಶನಕ್ಕೆ ಸೂಕ್ತವಾಗಿಲ್ಲ.

“ರಂಗಮಂದಿರದ ಮುಂದುವರಿದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿರಲಿಲ್ಲ. ಈ ವರ್ಷದ ಜನವರಿಯಲ್ಲಿ ಅನುಮೋದನೆ ದೊರಕಿತು. ಲೋಕೋಪಯೋಗಿ ಇಲಾಖೆ ಕಾಮಗಾರಿ ಏಜೆನ್ಸಿಯಾಗಿದೆ. ಟೆಂಡರ್‌ ಪ್ರಕ್ರಿಯೆ ನಡೆಯಬೇಕಿದೆ. ಸದ್ಯದಲ್ಲೇ ಕಾಮಗಾರಿ ಪುನಾರಂಭಗೊಳ್ಳಲಿದೆ.” – ಗಿರೀಶ್‌, ಸಹಾಯಕ ನಿರ್ದೇಶಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

  • ಕೆ.ಎಸ್‌.ಬನಶಂಕರ ಆರಾಧ್ಯ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.