ಚಾಮರಾಜನಗರ: 1600ಕ್ಕೂ ಹೆಚ್ಚು ಮಾದರಿಗಳು ಫಲಿತಾಂಶಕ್ಕೆ ಕಾಯುತ್ತಿವೆ: ಇಲ್ಲಿದೆ ಕಾರಣ?

ಸತತ 3ನೇ ದಿನವೂ ದೊರಕದ ಫಲಿತಾಂಶ ; ಜಿಲ್ಲೆಯ ಜನತೆಯಲ್ಲಿ ಹೆಚ್ಚಿದ ಆತಂಕ

Team Udayavani, Jun 30, 2020, 9:26 PM IST

ಚಾಮರಾಜನಗರ: 1600ಕ್ಕೂ ಹೆಚ್ಚು ಮಾದರಿಗಳು ಫಲಿತಾಂಶಕ್ಕೆ ಕಾಯುತ್ತಿವೆ: ಇಲ್ಲಿದೆ ಕಾರಣ?

ಸೀಲ್‌ಡೌನ್ ಆಗಿದ್ದರೂ ಕೇಳುವವರಿಲ್ಲದೇ ಅನಾಥವಾಗಿರುವ ಚಾಮರಾಜನಗರದ ಭ್ರಮರಾಂಬ ಬಡಾವಣೆಯ 6ನೇ ಕ್ರಾಸ್.

ಚಾಮರಾಜನಗರ: ಜಿಲ್ಲೆಯ ಕೋವಿಡ್ ಪರೀಕ್ಷಾ ಪ್ರಯೋಗಾಲಯ ಸೀಲ್‌ಡೌನ್ ಆಗಿರುವುದರಿಂದ ಸತತ ಮೂರನೇ ದಿನವೂ ಕೋವಿಡ್ 19 ಪ್ರಕರಣಗಳ ಫಲಿತಾಂಶ ದೊರಕಲಿಲ್ಲ.

ಸಂಗ್ರಹಿತ ಮಾದರಿಗಳ ಫಲಿತಾಂಶ ಬರುವಿಕೆ ಈ ರೀತಿ ವಿಳಂಬವಾದರೆ ಗಂಟಲು ದ್ರವ ಪರೀಕ್ಷೆಗೆ ಕೊಟ್ಟಿರುವವರಲ್ಲಿ ಒಂದುವೇಳೆ ಸೋಂಕಿತರಿದ್ದು ಅವರು ಎಲ್ಲೆಡೆ ಓಡಾಡಿದರೆ ಸೋಂಕು ಹರಡುವುದಿಲ್ಲವೇ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ.

ನಗರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿರುವ ಕೋವಿಡ್ ಪರೀಕ್ಷಾ ಪ್ರಯೋಗಾಲಯದ ತಂತ್ರಜ್ಞೆಯೋರ್ವರಿಗೆ ಸೋಂಕು ತಗುಲಿರುವ ಕಾರಣ ಸೀಲ್‌ಡೌನ್ ಆಗಿದೆ. ಹೀಗಾಗಿ ಕಳೆದ ಶನಿವಾರದಿಂದ (ಜೂ.27) ಪ್ರಯೋಗಾಲಯದಲ್ಲಿ ಕೋವಿಡ್‌ನ ಗಂಟಲು ಮಾದರಿ ಪರೀಕ್ಷೆಗಳು ನಡೆಯುತ್ತಿಲ್ಲ.

ನಗರದ ಪೇಟೆ ಶಾಲೆಯ ಆವರಣದಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಂಕಿತರ ಗಂಟಲು ದ್ರವ ಸಂಗ್ರಹಣೆ ನಡೆಯುತ್ತಿದೆ. ಆದರೆ ಈ ಮಾದರಿಗಳ ಪರೀಕ್ಷೆ ಸ್ಥಗಿತವಾಗಿದೆ. ಶನಿವಾರ ಭಾನುವಾರದ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಪ್ರತಿ ದಿನ ಸರಾಸರಿ ಸುಮಾರು 500 ಮಾದರಿಗಳ ಸಂಗ್ರಹವಾಗುತ್ತದೆ. ಈಗಾಗಲೇ 1684 ಮಾದರಿಗಳನ್ನು ಬೆಂಗಳೂರಿಗೆ ಪರೀಕ್ಷೆಗೆ ಕಳುಹಿಸಲಾಗಿದೆ. ಇನ್ನೂ 1 ಸಾವಿರ ಮಾದರಿಗಳು ನಗರದಲ್ಲೇ ಉಳಿದಿವೆ.

ಶಂಕಿತರು ಎಲ್ಲೆಡೆ ಓಡಾಡಿದರೆ?
ಹೀಗೆ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕೊಟ್ಟಿರುವ ಶಂಕಿತರು  ಅವರವರ ಮನೆಯಲ್ಲೇ ಉಳಿದು ಸ್ವಯಂ ನಿರ್ಬಂಧ ವಿಧಿಸಿಕೊಂಡರೆ ಸರಿ. ಆದರೆ ಅವರು ಊರೆಲ್ಲಾ ಓಡಾಡಿದರೆ, ಅವರಿಗೆ ಈಗಾಗಲೇ ಪಾಸಿಟಿವ್ ಇದ್ದರೆ? ಎಂಬ ಆತಂಕ ಜನರಲ್ಲಿ ಮೂಡಿದೆ. ಫಲಿತಾಂಶ ಬರುವುದು ವಿಳಂಬವಾದಷ್ಟೂ ಸೋಂಕಿತರು ಎಲ್ಲೆಂದರಲ್ಲಿ ಓಡಾಡುವ ಸಾಧ್ಯತೆಯೂ ಹೆಚ್ಚಾಗುತ್ತದೆ.

ಪರೀಕ್ಷೆ ಮಾಡಿಸಿಕೊಂಡಿರುವವರಲ್ಲಿ ಸುಶಿಕ್ಷಿತರು, ಕೋವಿಡ್ ಬಗ್ಗೆ ಅರಿವಿರುವವರಿದ್ದರೆ ಸ್ವಯಂ ಕ್ವಾರಂಟೈನ್ ಆಗಿರುತ್ತಾರೆ. ಆದರೆ ಅಂಥವರ ಸಂಖ್ಯೆ ಕಡಿಮೆ. ಹೀಗೆ ಪರೀಕ್ಷೆ ಮಾಡಿಸಿಕೊಂಡು ಕಳೆದ ಮೂರು ನಾಲ್ಕು ದಿನಗಳಿಂದ ಮನೆಯಲ್ಲೇ ಉಳಿದಿರುವ ಇಬ್ಬರು ಉದಯವಾಣಿಯೊಂದಿಗೆ ಮಾತನಾಡಿ, ನಾವು ಪರೀಕ್ಷೆ ಫಲಿತಾಂಶ ಬರುತ್ತದೆಂದು ಭಾನುವಾರದಿಂದ ಕಾಯುತ್ತಿದ್ದೇವೆ.

ಮಂಗಳವಾರವೂ ಪರೀಕ್ಷೆಯ ವರದಿ ಬಂದಿಲ್ಲ. ಬೇರೆಯವರಿಗೆ ಸೋಂಕು ಹರಡೀತು ಎಂಬ ಮುಂದಾಲೋಚನೆಯಿಂದ ಮನೆಯಲ್ಲೇ ಉಳಿದಿದ್ದೇವೆ. ಮನೆಯಲ್ಲೂ ಸಹ ಇತರರಿಂದ ಅಂತರ ಕಾಪಾಡಿಕೊಂಡು ಪ್ರತ್ಯೇಕ ಕೋಣೆಯಲ್ಲಿದ್ದೇವೆ. ಫಲಿತಾಂಶ ಬಂದು ನೆಗೆಟಿವ್ ಆದರೆ ನಿರಾಳವಾಗಬಹುದು. ಪಾಸಿಟಿವ್ ಬಂದರೆ ಆಸ್ಪತ್ರೆಗಾದರೂ ದಾಖಲಾಗಬಹುದು. ಆದರೆ ಫಲಿತಾಂಶವೇ ಬಾರದೇ ಇಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಎಂದು ಅಳಲು ತೋಡಿಕೊಂಡರು.

ಕಂಟೈನ್‌ಮೆಂಟ್ ವಲಯದಲ್ಲಿ ಕೇಳುವವರಿಲ್ಲ:
ಇನ್ನೊಂದೆಡೆ, ನಗರದಲ್ಲಿ ಕಂಟೈನ್‌ಮೆಂಟ್ ವಲಯಗಳೆಂದು ಸೀಲ್‌ಡೌನ್ ಮಾಡಿರುವ ಪ್ರದೇಶಗಳಲ್ಲಿ ಉಸ್ತುವಾರಿ ನೋಡಿಕೊಳ್ಳುವವರಿಲ್ಲದೇ ಅನಾಥವಾಗಿವೆ. ನಗರದ ಭ್ರಮರಾಂಬ ಬಡಾವಣೆ 6ನೇ ಕ್ರಾಸ್‌ನಲ್ಲಿ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಸೀಲ್‌ಡೌನ್ ಮಾಡಿ ಎರಡು ಬ್ಯಾರಿಕೇಡ್ ಹಾಕಲಾಗಿದೆ.  ಒಂದೆರಡು ದಿನ ಅಲ್ಲಿ ಉಸ್ತುವಾರಿ ಸಿಬ್ಬಂದಿ, ಪೊಲೀಸ್, ಹೋಂ ಗಾರ್ಡ್ ಇದ್ದರು.

ಆದರೆ ಮಂಗಳವಾರ ಮಧ್ಯಾಹ್ನದವರೆಗೆ ಹೋಂ ಗಾರ್ಡ್ ಮಾತ್ರ ಇದ್ದರು. ಸೀಲ್‌ಡೌನ್ ಪ್ರದೇಶದ ಉಸ್ತುವಾರಿ ನೋಡಿಕೊಳ್ಳುವ ಅಧಿಕಾರಿ ಇರಲಿಲ್ಲ. ಸೀಲ್‌ಡೌನ್ ಪ್ರದೇಶದ ಜನರ ಅವಶ್ಯಕತೆಗಳನ್ನು ಕೇಳುವವರೇ ಇಲ್ಲದಂತಾಗಿದೆ ಎಂದು ಆ ಪ್ರದೇಶದ ನಾಗರಿಕರು ಆರೋಪಿಸಿದ್ದಾರೆ. ಇದರಿಂದಾಗಿ ಸೀಲ್‌ಡೌನ್ ಪ್ರದೇಶದ ಜನರು ಬೇರೆಡೆಗೆ ಹೋಗಲು ಅವಕಾಶವಾಗಿದೆ. ಸೀಲ್‌ಡೌನ್ ಉದ್ದೇಶವೇ ವಿಫಲವಾಗಿದೆ ಎಂದು ಅಕ್ಕಪಕ್ಕದ ನಿವಾಸಿಗಳು ದೂರಿದ್ದಾರೆ.

– ಕೆ.ಎಸ್. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.