ಉಡುಪಿ ಜಿಲ್ಲೆಯಲ್ಲಿ 213 ಹೊಸ ಪ್ರಕರಣಗಳು ದೃಢ!
Team Udayavani, Jul 31, 2020, 7:17 PM IST
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಿಚ್ಚಾಗುತಿದ್ದು ಇಂದು 213 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 4355ಕ್ಕೆ ಏರಿಕೆಯಾಗಿದೆ.
ಇಂದು 54 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 2428 ಮಂದಿ ಬಿಡುಗಡೆಗೊಂಡಿದ್ದಾರೆ. ಒಟ್ಟು 1898 ಸಕ್ರೀಯ ಪ್ರಕರಣಗಳು ಇದ್ದು ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಸೋಂಕಿಗೆ 29 ಮಂದಿ ಸಾವನ್ನಪ್ಪಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನಂಪ್ರತಿ ಏರಿಕೆ ಪ್ರಮಾಣದಲ್ಲಿ ಕಂಡುಬರುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಗುಲ್ವಾಡಿ : ಮೂವರಿಗೆ ಪಾಸಿಟಿವ್
ಬಸ್ರೂರು: ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ಕುಂದಾಪುರ ತಾಲೂಕಿನಲ್ಲಿ 56 ಮಂದಿಗೆ ಕೋವಿಡ್ ಸೋಂಕು
ಕುಂದಾಪುರ: ಬೈಂದೂರು ತಾಲೂಕಿನಲ್ಲಿ 8 ಮಂದಿ ಹಾಗೂ ಕುಂದಾಪುರ ತಾಲೂಕಿನ 48 ಮಂದಿಗೆ ಸೇರಿದಂತೆ ಒಟ್ಟು 56 ಮಂದಿಗೆ ಶುಕ್ರವಾರ ಕೋವಿಡ್ ಪಾಸಿಟಿವ್ ಬಂದಿದೆ.
ಕುಂದಾಪುರ ತಾಲೂಕಿನ ಕುಂಭಾಸಿಯ 13, ಕೋಣಿಯ 7, ಬಳ್ಕೂರಿನ 6, ಆಲೂರು, ಬೀಜಾಡಿಯ ತಲಾ ಐವರು, ಪುರಸಭೆ ವ್ಯಾಪ್ತಿಯ ನಾಲ್ವರು, ಮೊಳಹಳ್ಳಿ, ತ್ರಾಸಿಯ ತಲಾ ಮೂವರು, ಆನಗಳ್ಳಿಯ ತಲಾ ಒಬ್ಬರಿಗೆ, ಬೈಂದೂರು ತಾಲೂಕಿನ ಹಡವು ಗ್ರಾಮದ ನಾಲ್ವರು, ಶಿರೂರು, ಕೆರ್ಗಾಲು, ನಾಡ ಹಾಗೂ ಕಂಬದಕೋಣೆಯ ತಲಾ ಒಬ್ಬರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢವಾಗಿದೆ.
ಗಂಗೊಳ್ಳಿ ಕಾವಲು ಪಡೆ ಠಾಣೆ ಸೀಲ್ಡೌನ್
ಗಂಗೊಳ್ಳಿಯಲ್ಲಿರುವ ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆಯ ಇಬ್ಬರು ಸಿಬಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಇದರಿಂದ ಠಾಣೆಯನ್ನು ಆ.3 ವರೆಗೆ ಸೀಲ್ಡೌನ್ ಮಾಡಲಾಗಿದೆ. ಎಸ್ಐ ಸಹಿತ ಎಲ್ಲ ಸಿಬಂದಿಯನ್ನು ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು