ಮಳೆಯಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ, ಹಾನಿಗೆ 50 ಸಾವಿರ ಪರಿಹಾರ; ಆರ್ ಅಶೊಕ್
Team Udayavani, Jul 7, 2022, 4:20 PM IST
ಮಡಿಕೇರಿ: ರಾಜ್ಯದಾದ್ಯಂತ ಏಡೆಬಿಡದೇ ಸುರಿಯುತ್ತಿರುವ ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮನೆಗೆ ಹಾನಿಯಾಗಿದ್ದರೆ 50 ಸಾವಿರ ರೂ. ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದ್ದಾರೆ.
ಸರಣಿ ಭೂಕಂಪನದ ಕೇಂದ್ರ ಬಿಂದು ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಮಳೆಹಾನಿ ಸಂತ್ರಸ್ತರೊಂದಿಗೆ ಚರ್ಚಿಸಿದ ಸಚಿವರು ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಧಾರಾಕಾರ ಮಳೆಯಿಂದ ಮನೆ ಸಂಪೂರ್ಣವಾಗಿ ಬಿದ್ದು ನಷ್ಟವಾಗಿದ್ದರೆ 5 ಲಕ್ಷ ರೂ. ಮತ್ತು ಮನೆಗೆ ಹಾನಿಯಾಗಿದ್ದರೆ 50 ಸಾವಿರ ರೂ. ಪರಿಹಾರ ವಿತರಿಸಲು ಬೆಂಗಳೂರಿಗೆ ತಲುಪಿದ ತಕ್ಷಣ ಅಧಿಕೃತ ಆದೇಶ ಹೊರಡಿಸಲಾಗುವುದು. ಮಳೆಹಾನಿ ಪರಿಹಾರ ನೀಡಲು ಹಣದ ಕೊರತೆ ಇಲ್ಲ ಎಂದು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ತಜ್ಞರ ಸಲಹೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ಸೂಕ್ತ. ನಿಯಮ ಬಾಹಿರ ರೆಸಾರ್ಟ್ ಮತ್ತು ಹೋಂಸ್ಟೇಗಳ ನಿರ್ಮಾಣದ ಕುರಿತು ನಿಗಾ ವಹಿಸುವ ಅಗತ್ಯವಿದೆ. ಯಾವುದೇ ಕಟ್ಟಡಗಳು ನಿರ್ಮಾಣಗೊಂಡರೂ ಅದು ಪರಿಸರಕ್ಕೆ ಪೂರಕವಾಗಿರಬೇಕು ಎಂದರು.
ಕಳೆದ ಬಾರಿ ಭೂಕುಸಿತವಾದಾಗ ಮುಂದಿನ ಕ್ರಮಗಳ ಬಗ್ಗೆ ತಜ್ಞರು ಸುರಕ್ಷತೆಯ ಕುರಿತು ಸಲಹೆಗಳನ್ನು ನೀಡಿದ್ದಾರೆ. ತಜ್ಞರ ವರದಿ ಆಧರಿಸಿಯೇ ಕೊಡಗಿನಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು, ಪ್ರಕೃತಿಗೆ ವಿರುದ್ಧವಾಗಿ ಯಾರೂ ಕೂಡ ಹೋಗಬಾರದು, ಹೋದರೆ ಅನಾಹುತ ತಪ್ಪಿದ್ದಲ್ಲ ಎಂದು ಹೇಳಿದರು.
ಬರೆ ಕುಸಿದು ಮನೆಗೆ ಹಾನಿಯಾಗಿರುವ ಅಕ್ಕಮ್ಮ ಅವರನ್ನು ಭೇಟಿಯಾದ ಸಚಿವರು ಸಾಂತ್ವನ ಹೇಳಿದರು. ಇದೇ ಸಂದರ್ಭ ಮಳೆಹಾನಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!