Bhiwani; ಶೂಟ್ ಮಾಡಲು ಬಂದ ದುಷ್ಕರ್ಮಿಗಳಿಗೆ ಪೊರಕೆಯಿಂದ ಓಡಿಸಿದ ಮಹಿಳೆ; VIDEO
Team Udayavani, Nov 28, 2023, 2:10 PM IST
ಹೊಸದಿಲ್ಲಿ: ಲಾರೆನ್ಸ್ ಗ್ಯಾಂಗ್ ದರೋಡೆಕೋರ ರವಿ ಬಾಕ್ಸರ್ ಹತ್ಯೆ ಪ್ರಕರಣದ ಆರೋಪಿ ಹರಿಕಿಶನ್ ಅಲಿಯಾಸ್ ಹರಿಯಾ ಎಂಬಾತನ ಮೇಲೆ ಎರಡು ಬೈಕ್ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸೋಮವಾರ ಬೆಳಗ್ಗೆ ನಡೆಸಿದ ಗುಂಡಿನ ದಾಳಿಗೆ ಭಿವಾನಿಯ ದಬರ್ ಕಾಲೋನಿ ತತ್ತರಿಸಿ ಹೋಗಿದೆ.
ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದ ಹರಿಯಾ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿದ್ದು, ಅವರನ್ನು ರೋಹ್ಟಕ್ ನಲ್ಲಿರುವ ಪಿಜಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.
ಆದರೆ ಘಟನೆಯ ಬಗೆಗಿನ ವಿಡಿಯೋವೊಂದು ಇದೀಗ ಭಾರಿ ವೈರಲ್ ಆಗುತ್ತಿದೆ. ಹರಿಯಾ ನೆರೆಮನೆಯ ಮಹಿಳೆಯೊಬ್ಬರು ಕೈಯಲ್ಲಿ ಪೊರಕೆ ಹಿಡಿದು ಶೂಟ್ ಮಾಡಲು ಬಂದ ದುಷ್ಕರ್ಮಿಗಳನ್ನು ಎದುರಿಸಿದ ವಿಡಿಯೋ ಈಗ ಸಾಮಾಜಿಕ ಜಾಲಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಮಹಿಳೆಯ ಧೈರ್ಯದ ಕಾರ್ಯಕ್ಕೆ ಸಾಮಾಜಿಕ ಜಾಲತಾಣದ ಜನತೆ ಶಹಭಾಸ್ ಗಿರಿ ಕೊಟ್ಟಿದ್ದಾರೆ.
ಇದನ್ನೂ ಓದಿ:UP: ಬುರ್ಖಾ ಧರಿಸಿಕೊಂಡು ಫ್ಯಾಷನ್ ಶೋನಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು; ಸಂಘಟನೆ ಗರಂ
ಹರಿಯಾ ಮನೆಯ ಹೊರಗೆ ನಿಂತಿದ್ದಾಗ ಎರಡು ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬೈಕ್ ನಿಲ್ಲಿಸಿ ಗುಂಡು ಹಾರಿಸಿದ್ದಾರೆ. ಕೂಡಲೇ ಹರಿಯಾ ಮನೆಯ ಗೇಟ್ ಒಳಗೆ ಓಡಿದ್ದಾರೆ. ಗುಂಡಿನ ಶಬ್ದ ಕೇಳಿದ ಓಡಿ ಬಂದ ಮಹಿಳೆ ತನ್ನ ಕೈಯಲ್ಲಿ ಕೋಲು ಕಟ್ಟಿದ್ದ ಪೊರಕೆಯನ್ನು ದುಷ್ಕರ್ಮಿಗಳತ್ತ ಬೀಸಿದ್ದಾರೆ. ದುಷ್ಕರ್ಮಿಗಳು ಗುಂಡಿನ ದಾಳಿ ನಿಲ್ಲಿಸಿದ್ದು ಮಾತ್ರವಲ್ಲದೆ, ಬೈಕ್ ಏರಿ ಪರಾರಿಯಾಗಿದ್ದಾರೆ.
Four to five miscreants riding on two bikes opened fire on a person standing outside his house in #Bhiwani district of #Haryana. pic.twitter.com/4AJuOBe8Vc
— Hate Detector 🔍 (@HateDetectors) November 27, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Mother Teresa; ವೆಬ್ ಸೀರೀಸ್ನಲ್ಲಿ ಮದರ್ ತೆರೇಸಾ ಜೀವನ ಚರಿತ್ರೆ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ