Agumbe ಅಪಘಾತ: ಗಾಯಾಳು ಯುವತಿ ಸಾವು
Team Udayavani, Jun 20, 2023, 6:25 AM IST
ಬ್ರಹ್ಮಾವರ: ಆಗುಂಬೆಯಲ್ಲಿ ನಡೆದ ಬಸ್-ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾರಕೂರು ಹೊಸಾಳದ ನಿರ್ಮಿತಾ (19) ರವಿವಾರ ರಾತ್ರಿ ಮೃತಪಟ್ಟಿದ್ದಾರೆ.
ಪ್ರಸ್ತುತ ಕನ್ನಾರಿನಲ್ಲಿ ನೆಲೆಸಿರುವ ಬಾಲಕೃಷ್ಣ ಮತ್ತು ಗಾಯತ್ರಿ ದಂಪತಿಯ ಏಕೈಕ ಪುತ್ರಿ ನಿರ್ಮಿತಾ, ಬ್ರಹ್ಮಾವರ ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಣ ಮುಗಿಸಿ ಪದವಿಗಾಗಿ ಉಡುಪಿಯ ತೆಂಕನಿಡಿಯೂರು ಕಾಲೇಜಿಗೆ ಸೇರ್ಪಡೆಯಾಗಿದ್ದರು. ಪ್ರತಿಭಾನ್ವಿತೆಯಾದ ನಿರ್ಮಿತಾ ಪಠ್ಯೇತರ ಚಟುವಟಿಕೆಯಲ್ಲೂ ಸಕ್ರೀಯರಾಗಿದ್ದರು.
ಹೆಲ್ಮೆಟ್ ಇದ್ದರೂ…
ರವಿವಾರ ರಜಾ ದಿನವಾದ್ದರಿಂದ ಒಂದೇ ಕುಟುಂಬದ 6 ಮಂದಿ ಮೂರು ಬೈಕ್ನಲ್ಲಿ ಆಗುಂಬೆಗೆ ತೆರಳಿದ್ದರು. ಸೂರ್ಯಾಸ್ತಮಾನ ವೀಕ್ಷಣ ಸ್ಥಳಕ್ಕೆ ಭೇಟಿ ನೀಡಿ ವಾಪಸಾಗುತ್ತಿದ್ದಾಗ ಬೈಕ್ಗೆ ಬಸ್ ಢಿಕ್ಕಿ ಹೊಡೆದಿತ್ತು. ನಿರ್ಮಿತಾ ಕುಳಿತಿದ್ದ ಬೈಕ್ ಸವಾರಿ ಮಾಡುತ್ತಿದ್ದ ಸಂಬಂಧಿ ಶಶಾಂಕ್ ತಲೆಗೆ ಹೆಲ್ಮೆಟ್ ಧರಿಸಿದ್ದರೂ, ಬಲವಾದ ಪೆಟ್ಟು ತಗಲಿ ವಿಪರೀತ ರಕ್ತಸ್ರಾವವಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ