ಸೊಳ್ಳೆ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ
Team Udayavani, Jun 19, 2021, 11:12 AM IST
ನರಗುಂದ: ಸೊಳ್ಳೆಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರ ಸಹಕಾರ ಮಹತ್ವದ್ದಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಜಿ.ವಿ.ಕೊಣ್ಣೂರ ಹೇಳಿದರು.
ತಾಲೂಕಿನ ಜಗಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಬನಹಟ್ಟಿ ಗ್ರಾಮದಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ನಡೆದಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೀಟಜನ್ಯ ರೋಗಗಳಾದ ಮಲೇರಿಯಾ, ಡೆಂಘೀ, ಚಿಕೂನ್ಗುನ್ಯಾ, ಮೆದುಳು ಜ್ವರ, ಆನೆಕಾಲುರೋಗಗಳು ಸೋಂಕಿತ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆಗಳಾಗಿವೆ. ಸೊಳ್ಳೆಗಳನ್ನು ನಿಯಂತ್ರಣ ಮಾಡಿದಲ್ಲಿ ಈ ಐದು ರೋಗಗಳನ್ನು ನಿಯಂತ್ರಿಸಬಹುದು ಎಂದರು.
ಸಾರ್ವಜನಿಕರು ಸೊಳ್ಳೆ ಕಚ್ಚದಂತೆ ಮೈತುಂಬ ಬಟ್ಟೆ ಧರಿಸುವುದು, ಮಾರ್ಕೆಟ್ಗಳಲ್ಲಿ ಸಿಗುವ ಸೊಳ್ಳೆ ನಿರೋಧಕಗಳಾದ ಲಿಕ್ವಿಡ್, ಸೊಳ್ಳೆ ಬತ್ತಿ, ಸೊಳ್ಳೆ ಬ್ಯಾಟ್, ಸೊಳ್ಳೆ ಪರದೆಗಳನ್ನು ಉಪಯೋಗಿಸಬೇಕು. ಇಲಾಖೆಯಿಂದ ಕೆರೆ, ಕಟ್ಟೆ ಮುಂತಾದ ನಿಂತ ನೀರಿನ ತಾಣಗಳಿಗೆ ಲಾರ್ವಾಹಾರಿ ಮೀನುಗಳನ್ನು ಬಿಡಲಾಗುತ್ತದೆ ಎಂದು ಜಿ.ವಿ.ಕೊಣ್ಣೂರ ತಿಳಿಸಿದರು. ಗ್ರಾಪಂ ಪಿಡಿಒ ಎಂ.ಎಂ.ಪೂಜಾರ ಜನಜಾಗೃತಿ ಜಾಥಾ ವಾಹನಕ್ಕೆ ಚಾಲನೆ ನೀಡಿದರು. ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಧ್ವನಿವರ್ಧಕಗಳಿಂದಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಪಂ ಸಿಬ್ಬಂದಿ ಶಿವಾನಂದ ಕಲ್ಲಾಪೂರ, ಬಸವರಾಜ ಕಲ್ಲಾಪೂರ, ಮೌಲಾಸಾಬ ನದಾಫ, ಹುಸೇನಸಾಬ ಹವಾಲದಾರ, ವಿಜಯಲಕ್ಷ್ಮೀ ಹಿರೇಮಠ, ಅಕ್ಕಮ್ಮ ಗಾಯಕವಾಡ, ಆರೋಗ್ಯ ಇಲಾಖೆಯ ಎ.ಎಂ.ಕಾಡದೇವರಮಠ, ಎಸ್.ಆರ್.ಹಿಪ್ಲಿ, ಎಸ್.ಬಿ.ಕುರಹಟ್ಟಿ, ಶಾರದಾ ಪೂಜಾರ, ಬಿ.ಬಿ.ಕಮತರ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ