Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ


Team Udayavani, May 5, 2024, 7:26 PM IST

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ವಿಜಯಪುರ : ಚುನಾವಣೆ ಪೂರ್ವದಲ್ಲೇ ಸೋಲು ಒಪ್ಪಿಕೊಂಡಿರುವ ಕಾಂಗ್ರೆಸ್ ಪಕ್ಷ ಅಭಿವೃದ್ಧಿ ವಿಷಯ ಪ್ರಸ್ತಾಪಿಸದೇ ಹಿಟ್ ಎಂಡ್ ರನ್ ಮಾಡುತ್ತದೆ. ಕ್ಷೇತ್ರಕ್ಕೆ ಮಾಡುವ ಕೆಲಸದ ಬಗ್ಗೆ ಮಾತನಾಡದೇ, ಬಿಜೆಪಿ ನಾಯಕರ ಮಧ್ಯೆ ಅಪಪ್ರಚಾರದ ಹೇಳಿಕೆಯಲ್ಲಿ ತೊಡಗಿರುವುದೇ ಸಾಕ್ಷಿ ಎಂದು ಮಾಜಿ ಶಾಸಕ ಅರುಣ ಶಹಾಪುರ ಹೇಳಿದರು.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರಿಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಿ ಜಿಗಜಿಣಗಿ ಎಂದು ಟೀಕಿಸುವ ಕಾಂಗ್ರೆಸ್ ಅಭ್ಯರ್ಥಿಗೆ ನಮಗೂ ತಿರುಗೇಟು ನೀಡಲು ಬರುತ್ತದೆ ಎಂಬುದು ಗೊತ್ತಿರಲಿ. ಎಂ.ಬಿ.ಪಾಟೀಲ ಅವರಿಗೆ ಚುನಾವಣೆ ಪೂರ್ವದಲ್ಲಿ ನಡೆದ ಭಾರತ ಜೋಡೋ ಕಾಂಗ್ರೆಸ್ ರ್‍ಯಾಲಿಗೆ ಬಳಸಿಕೊಂಡು, ಉಪ ಮುಖ್ಯಮಂತ್ರಿ ಸ್ಥಾನವನ್ನೂ ನೀಡದೇ, ಕನಿಷ್ಠ ಅವರು ಕೇಳಿದ ಖಾತೆಯನ್ನೂ ನೀಡದೇ ಅವಮಾನ ಮಾಡಿಲ್ಲವೇ ಎಂದು ಕುಟುಕಿದರು.

ಯತ್ನಾಳ ಎಂದರೆ ಅವರ ಸ್ಟೈಲೇ ಬೇರೆ, ಶೈಲಿಯೇ ಬೇರೆ, ಅವರು ತಮ್ಮ ವೈಖರಿಯಲ್ಲಿ ಪ್ರಚಾರ ಮಾಡಿದ್ದಾರೆ. ಜೆಡಿಎಸ್ ಮಾಜಿ ಶಾಸಕ ದೇವಾನಂದ ಚವ್ಹಾಣ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದ ಬಾಗಲಕೋಟೆ ಸಮಾವೇಶಕ್ಕೆ ಬಂದಿದ್ದರು. ಪ್ರತಿಯೊಬ್ಬರೂ ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ ಎಂದರು.

ಸ್ವಯಂ ತಮ್ಮದೇ ನಾಯಕ ರಾಹುಲ್ ಗಾಂಧಿ ನಗರಕ್ಕೆ ಬಹಿರಂಗ ಪ್ರಚಾರಕ್ಕೆ ಬಂದಾಗ ದಲಿತ ಅಭ್ಯರ್ಥಿಯಾದ ರಾಜು ಆಲಗೂರ ಅವರನ್ನು ವೇದಿಕೆ ಕರೆಯುವುದಿರಲಿ, ಬ್ಯಾನರ್ ನಲ್ಲಿ ಅವರ ಫೋಟೋ ಕೂಡ ಹಾಕಿರಲಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಯಾರೆಂದೂ ಪ್ರಸ್ತಾಪಿಸಿ ಮತ ಯಾಚನೆ ಮಾಡದಿರುವುದು ಕಾಂಗ್ರೆಸ್ ಚುನಾವಣೆ ಪೂರ್ವದಲ್ಲೇ ಸೋಲು ಒಪ್ಪಿಕೊಂಡಂತಾಗಿದೆ ಎಂದರು.

ಶಾಸಕರಾಗಿದ್ದಾಗಲೇ ರಾಜು ಆಲಗೂರ ಅವರಿಗೆ ಟಿಕೆಟ್ ನಿರಾಕರಿಸಿ ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲೂ ಟಿಕೆಟ್ ನೀಡಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭ್ಯರ್ಥಿಗಳೇ ಸಿಗದ ಕಾರಣ ರಾಜು ಆಲಗೂರ ಕೊರಳಿಗೆ ಕಟ್ಟಲಾಗಿದೆ ಎಂದು ಕುಟುಕಿದರು.

ಬಿಜೆಪಿ ವಿರುದ್ಧ ಆರೋಪ ಮಾಡಿದ್ದ ಗುತ್ತೇದಾರರೇ ಇವರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಹಣವೂ ಸಿಗದೇ ಕಾಂಗ್ರೆಸ್ ಪಕ್ಷದ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಹೀಗಾಗಿ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಅಭಿವೃದ್ಧಿ ಆಧಾರಿತ ಮತಯಾಚನೆ ಮಾಡದೇ ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

hardik pandya and natasa stankovic getting divorced?

Divorced? ಮುರಿದು ಬಿತ್ತಾ ಹಾರ್ದಿಕ್- ನತಾಶಾ ಸಂಬಂಧ? 70% ಆಸ್ತಿ ಕಳೆದುಕೊಳ್ತಾರಾ ಪಾಂಡ್ಯ?

10-gundlupete

Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ

8-dharmasthala

CM Siddaramaiah: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

IPL 2024; Who can get Orange Cap- Purple Cap? Here is the list

IPL 2024; ಯಾರಿಗೆ ಸಿಗಬಹುದು ಆರೆಂಜ್ ಕ್ಯಾಪ್- ಪರ್ಪಲ್ ಕ್ಯಾಪ್? ಇಲ್ಲಿದೆ ಪಟ್ಟಿ

7-gundlupete

Gundlupete: ಕಲುಷಿತ ನೀರು ಸೇವಿಸಿ ಮೂರು ಹಸುಗಳ ಸಾವು

thief

ಸಿನಿಮಾ ಶೈಲಿಯಲ್ಲಿ ಚಲಿಸುತ್ತಿದ್ದ ಟ್ರಕ್‌ನಿಂದ ಕಳ್ಳತನ… ವಿಡಿಯೋ ನೋಡಿ ಬೆಚ್ಚಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

11-mammootty

Mammootty: ಎರಡು ವಿಭಿನ್ನ ಕಾಲಘಟ್ಟದ ಸಿನೆಮಾದಲ್ಲಿ ನಟ ಮಮ್ಮೂಟಿ

hardik pandya and natasa stankovic getting divorced?

Divorced? ಮುರಿದು ಬಿತ್ತಾ ಹಾರ್ದಿಕ್- ನತಾಶಾ ಸಂಬಂಧ? 70% ಆಸ್ತಿ ಕಳೆದುಕೊಳ್ತಾರಾ ಪಾಂಡ್ಯ?

10-gundlupete

Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ

9-uv-fusion

Traffic Signal: ಬದುಕು ರೂಪಿಸಿದ ಟ್ರಾಫಿಕ್‌ ಸಿಗ್ನಲ್‌ಗ‌ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.