ಮಾತಿಗೆ ತಪ್ಪ … ಬಿಜೆಪಿಯ ಈ ಯಡಿಯೂರಪ್ಪ !

ತ್ಯಾಗ ಮಾಡಿದ 17ರ ಪೈಕಿ 13 ಮಂದಿಗೆ ಸ್ಥಾನಮಾನ; ಭರವಸೆ ಈಡೇರಿಸಿದ ಮುಖ್ಯಮಂತ್ರಿ

Team Udayavani, Jun 19, 2020, 5:50 AM IST

ಮಾತಿಗೆ ತಪ್ಪ … ಬಿಜೆಪಿಯ ಈ ಯಡಿಯೂರಪ್ಪ !

ಬೆಂಗಳೂರು: ರಾಜ್ಯದಲ್ಲಿ ಎರಡನೇ ಬಾರಿಗೆ ಬಿಜೆಪಿ ಸರಕಾರ ರಚನೆಗಾಗಿ “ತ್ಯಾಗ’ ಮಾಡಿ ಬಂದವರ ಪೈಕಿ ಮತ್ತೆ ಇಬ್ಬರು ವಿಧಾನ ಪರಿಷತ್‌ ಪ್ರವೇಶಿಸಲು ಅನುಕೂಲವಾಗುವಂತೆ ಟಿಕೆಟ್‌ ಕೊಡಿಸುವಲ್ಲಿ ಸಿಎಂ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಿದ್ದಾರೆ.

ಇದು ಬಿಜೆಪಿಯ ವಿಶ್ವಾಸಾರ್ಹತೆಯನ್ನೂ ಹೆಚ್ಚಿಸಲಿದೆ. ಈ ಬೆಳವಣಿಗೆ ಪಕ್ಷವನ್ನು ಇನ್ನಷ್ಟು ಬಲ ಪಡಿಸಲು ಅನುಕೂಲವಾಗುವ ವಿಶ್ವಾಸವು ನಾಯಕರು, ಕಾರ್ಯಕರ್ತರಲ್ಲಿ ಮೂಡಿದೆ.

ಕಾಂಗ್ರೆಸ್‌ನ 13, ಜೆಡಿಎಸ್‌ನ ಮೂವರು ಮತ್ತು ಪಕ್ಷೇತರ ಶಾಸಕರೊಬ್ಬರ ರಾಜೀನಾಮೆಯಿಂದ ಕಳೆದ ಜುಲೈಯಲ್ಲಿ ಮೈತ್ರಿ ಸರಕಾರ ಪತನಗೊಂಡಿತ್ತು. ಈ ಪೈಕಿ ಎಂ.ಟಿ.ಬಿ. ನಾಗರಾಜ್‌, ಆರ್‌. ಶಂಕರ್‌ ಸಚಿವ ಸ್ಥಾನ ತೊರೆದು ರಾಜೀನಾಮೆ ಕೊಟ್ಟಿದ್ದರು. ಬಳಿಕ ಅನರ್ಹ ಶಾಸಕರಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ದೊರೆಯಿತು. ಆಗ 17 ಮಂದಿ ಪೈಕಿ 16 ಮಂದಿ ಬಿಜೆಪಿ ಸೇರಿದ್ದರು.

ಕಳೆದ ಡಿಸೆಂಬರ್‌ನ ಉಪಚುನಾವಣೆಯಲ್ಲಿ 13 ಮಂದಿಯಷ್ಟೇ ಸ್ಪರ್ಧಿಸಿದ್ದರು. ಈ ಪೈಕಿ 11 ಮಂದಿ ಜಯಶೀಲರಾಗಿದ್ದರು. ಇವರಲ್ಲಿ 10 ಮಂದಿಯನ್ನು ಬಿಎಸ್‌ವೈ ಸಚಿವ ರನ್ನಾಗಿಸಿದ್ದಾರೆ.

ರಮೇಶ್‌ ಜಾರಕಿಹೊಳಿ ಅವರಿಗೆ ಜಲಸಂಪ ನ್ಮೂಲ ಖಾತೆ ನೀಡಿದರು. ಇತ್ತೀಚೆಗೆ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿಯನ್ನಾಗಿಸಿ ಭರವಸೆ ಈಡೇರಿಸಿದ್ದರು. ಬಳಿಕ ಪ್ರಭಾವಿ ಎನಿಸಿದ ಅರಣ್ಯ, ವೈದ್ಯಕೀಯ ಶಿಕ್ಷಣ, ನಗರಾಭಿವೃದ್ಧಿ, ಸಹಕಾರ, ಕೃಷಿ, ಆಹಾರ ಮತ್ತು ನಾಗರಿಕ ಸರಬ ರಾಜು ಖಾತೆಗಳನ್ನೂ ವಲಸಿಗ ಶಾಸಕರಿಗೆ ನೀಡುವ ಮೂಲಕ ಹಿತ ಕಾಪಾಡುವ ಭರವಸೆ ಮೂಡಿಸಿದ್ದರು.

ಶಂಕರ್‌, ನಾಗರಾಜ್‌ಗೆ ಸ್ಥಾನ
ಆರ್‌. ಶಂಕರ್‌, ಎಂ.ಟಿ.ಬಿ. ನಾಗರಾಜ್‌ ಮುಂದೆ ಮತ್ತೆ ಸಚಿವರಾಗುವುದು ಬಹುತೇಕ ನಿಚ್ಚಳವಾಗಿದೆ. ಆ ಮೂಲಕ ಪಕ್ಷೇತರ ಸೇರಿದಂತೆ ಕಾಂಗ್ರೆಸ್‌, ಜೆಡಿಎಸ್‌ ತೊರೆದಿದ್ದ 17ರಲ್ಲಿ 13 ಮಂದಿಗೆ ಕೊಟ್ಟ ಮಾತನ್ನು ಯಡಿಯೂರಪ್ಪ ಉಳಿಸಿಕೊಂಡಂತಾಗಿದೆ.

ಕುಮಟಳ್ಳಿಗೆ ನಿಗಮ
ಮಹೇಶ್‌ ಕುಮಟಳ್ಳಿ ಅವರನ್ನು ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನೇಮಕ ಮಾಡಲಾಯಿತು. ಆ ಮೂಲಕ ಪಕ್ಷ ಸೇರಿದ್ದ 11 ಮಂದಿಯ ಭರವಸೆಯನ್ನೂ ಯಡಿಯೂರಪ್ಪ ಈಡೇರಿಸಿದಂತಾಗಿತ್ತು.

ಮಾಜಿಗಳಿಗೂ ಉದಾರ ಸ್ಪಂದನೆ
ರಾಜರಾಜೇಶ್ವರಿನಗರ ಮತ್ತು ಮಸ್ಕಿ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ಇನ್ನಷ್ಟೇ ಘೋಷಣೆಯಾಗಬೇಕಿದ್ದು, ಗೆದ್ದರೆ ಮಾಜಿ ಶಾಸಕ ಮುನಿರತ್ನ ಮತ್ತು ಪ್ರತಾಪಗೌಡ ಪಾಟೀಲ್‌ ಸಚಿವರಾಗುವ ಸಾಧ್ಯತೆ ಹೆಚ್ಚಾಗಿದೆ.

ಇಬ್ಬರಿಗೆ ಪರಿಷತ್‌ ಸ್ಥಾನ
ಈಗ ಪರಿಷತ್‌ನಲ್ಲಿ ಬಿಜೆಪಿ ಗೆಲ್ಲಬಹುದಾದ 4 ಸ್ಥಾನಗಳ ಪೈಕಿ ಎರಡನ್ನು ವಲಸಿಗರಿಗೆ ಕೊಡಿಸುವ ಯಡಿಯೂರಪ್ಪ ಪ್ರಯತ್ನ ಫ‌ಲ ನೀಡಿದೆ. ಉಪ ಚುನಾವಣೆಗೆ ಸ್ಪರ್ಧಿಸದ ಆರ್‌. ಶಂಕರ್‌ ಮತ್ತು ಪರಾಭವಗೊಂಡಿದ್ದ ಎಂ.ಟಿ.ಬಿ. ನಾಗರಾಜ್‌ ಅವರಿಗೆ ಟಿಕೆಟ್‌ ದೊರಕಿದೆ.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.