Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Team Udayavani, Apr 25, 2024, 10:40 AM IST
ಭದ್ರಾವತಿ: ದೇಶದ ಪ್ರಧಾನಮಂತ್ರಿ ಅಗಬೇಕೆಂಬ ಆಸೆ ಎಲ್ಲರಿಗೂ ಇರುತ್ತದೆ. ಆದರೆ ಆ ಸ್ಥಾನಕ್ಕೆ ಗೌರವ ತರುವ ರೀತಿ ಕೆಲಸ ಮಾಡುವವರನ್ನು ಮಾತ್ರ ಜನತೆ ಆರಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದರು.
ಅವರು ಭದ್ರಾವತಿ ಕನಕ ಮಂಟಪದಲ್ಲಿ ಬಿಜೆಪಿಯಿಂದ ತಾಲೂಕು ತಮಿಳು ಭಾಷಿಗರ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ನರೇಂದ್ರ ಮೋದಿಯನ್ನು ಜನತೆ ದೇಶದ ಪ್ರಧಾನ ಮಂತ್ರಿಯನ್ನಾಗಿ ಅರಿಸಿದ ಮೇಲೆ ಅವರು ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿ ವಿಶ್ವನಾಯಕರಾಗಿ ಬೆಳೆದಿದ್ದಾರೆ. ಅವರು ದೇಶಕ್ಕಾಗಿ ನಿಸ್ವಾರ್ಥವಾಗಿ ಮಾಡಿರುವ ಕೆಲಸಕ್ಕಾಗಿ ಅವರಿಗೆ ಕೂಲಿ ರೂಪದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತಹಾಕಿ ಮೋದಿಯವರನ್ನು ಮತ್ತೂಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡೋಣ. ಯಡಿಯೂರಪ್ಪ, ರಾಘವೇಂದ್ರ, ಮೋದಿ ಅವರು ತಮಿಳು ಭಾಷಿಗರ ಅಭಿವೃದ್ಧಿಗೆ ಕೆಲಸ ಮಾಡುತ್ತ ಬಂದಿದ್ದಾರೆಂಬುದನ್ನು ನಾವು ತಮಿಳು ಭಾಷಿಗರು ನೆನೆದು ಅವರ ಗೆಲುವಿಗಾಗಿ ಬಿಜೆಪಿಗೆ ಮತ ಹಾಕಿ ಎಂದರು.
ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಮೋದಿ ಅವರ ಮೂಲಕ ಭದ್ರಾವತಿ ವಿಐಎಸ್ಎಲ್ ಉಳಿಸುತ್ತೇನೆ. ಅದಕ್ಕೆ ಗತವೈಭವ ನೀಡೋಣ. ಎಂಪಿಎಂಗೆ ಕೊನೆ ಮೊಳೆ ಹೊಡೆದದ್ದು ಇದೆ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ. ಭದ್ರಾವತಿ ಜನರ ಜೀವನ ಕಟ್ಟಲು ನಾವು ನಿಮ್ಮ ಜತೆ ಸದಾಕಾಲ ಇರುತ್ತೇವೆ. ಕಾಂಗ್ರೆಸ್ನ ಸುಳ್ಳು ಗ್ಯಾರಂಟಿಗೆ ಬಲಿಯಾಗದೆ ದೇಶದ ಭವಿಷ್ಯಕ್ಕಾಗಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಬೆಂಬಲಿಸಿ ಎಂದು ಮನವಿ ಮಾಡಿದರು. ತಾಲೂಕು ಅಧ್ಯಕ್ಷ ಧರ್ಮಪ್ರಸಾದ್ ಸ್ವಾಗತಿಸಿದರು. ಆಶಾಪುಟ್ಟಸ್ವಾಮಿ ಪ್ರಾರ್ಥಿಸಿದರು. ಸಿ. ಮಂಜುನಾಥ್ ಕದಿರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್, ಮುಖಂಡರಾದ ಕೂಡ್ಲಿಗೆರೆ ಹಾಲೇಶ್, ಕದಿರೇಶ್, ದತ್ತಾತ್ರಿ, ಪಕ್ಷದ ಜಿಲ್ಲಾಧ್ಯಕ್ಷ ಮೇಘರಾಜ್, ಜೆಡಿಎಸ್ ಅಧ್ಯಕ್ಷ ಕರುಣಾಮೂರ್ತಿ, ಶಾರದಾಪ್ಪಾಜಿ ಇದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬೈಪಾಸ್ ರಸ್ತೆಯಿಂದ ಅಣ್ಣಮಲೈ ಅವರನ್ನು ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮಕ್ಕೆ ಕರೆತರಲಾಯಿತು. ತಾಲೂಕಿನ ಸಹಸ್ರಾರು ತಮಿಳು ಭಾಷಿಗರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
MUST WATCH
ಹೊಸ ಸೇರ್ಪಡೆ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ