ಅಪ್ಪನಾಗುವ ಖುಷಿಯಲ್ಲಿ ‘ಅದ್ಧೂರಿ’ ನಿರ್ದೇಶಕ ಎಪಿ ಅರ್ಜುನ್
Team Udayavani, May 1, 2021, 11:04 AM IST
ಬೆಂಗಳೂರು : ಕೋವಿಡ್ ತಾಂಡವವಾಡುತ್ತಿರುವ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅದ್ಧೂರಿ ನಿರ್ದೇಶಕ ಎಪಿ ಅರ್ಜುನ್ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದಾರೆ. ನಿರ್ದೇಶಕ ಎಪಿ ಅರ್ಜುನ್ ತಂದೆಯಾಗುವ ನಿರೀಕ್ಷೆಯಲ್ಲಿದ್ದು, ಪತ್ನಿ ಅನ್ನಪೂರ್ಣ ಅವರ ಸೀಮಂತ ಸಮಾರಂಭ ನಡೆಸಿದ್ದಾರೆ. ಕೇವಲ ಕುಟುಂಬದವರು ಮಾತ್ರ ಭಾಗಿಯಾಗಿದ್ದು, ಕಾರ್ಯಕ್ರಮ ನಡೆಸಿದ್ದಾರೆ.
ಸದ್ಯ ಕೋವಿಡ್ ಕಾರಣದಿಂದ ಲಾಕ್ ಡೌನ್ ಇದ್ದು, ಸೀಮಂತ ಶಾಸ್ತ್ರವನ್ನು ಸರಳವಾಗಿಯೇ ನಡೆಸಿದ್ದಾರೆ. ಈ ಸಂತಸದ ಕ್ಷಣಗಳನ್ನು ಅರ್ಜುನ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಮಾರಂಭದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ‘ಮುದ್ದು ಮಡದಿಯ ಸೀಮಂತ. ಎಲ್ಲರ ಪ್ರೀತಿ, ಆಶೀರ್ವಾದ ಇರಲಿ’ ಎಂದು ಕೇಳಿಕೊಂಡಿದ್ದಾರೆ.
ಕಳೆದ ಲಾಕ್ ಡೌನ್ ವೇಳೆ ಎ.ಪಿ ಅರ್ಜುನ್ ಅನ್ನ ಪೂರ್ಣ ಜೊತೆ ಹಸೆಮಣೆ ಏರಿದ್ದರು. ಮೇ 10 ರಂದು ನಡೆದ ಸರಳ ಮದುವೆ ಸಮಾರಂಭದಲ್ಲಿ ಅನ್ನಪೂರ್ಣ ಅವರಿಗೆ ಕಂಕಣ ಕಟ್ಟುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ರು.
ಎ.ಪಿ ಅರ್ಜುನ್ ಗೆ ಅದ್ದೂರಿ ಸಿನಿಮಾ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟಿದೆ. ಇದಾದ ಮೇಲೆ ರಾಟೆ, ಚಾಲೆಂಜಿಂಗ್ ಸ್ಟಾರ್ ಜೊತೆ ಐರಾವತ ಚಿತ್ರಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ
Cannes 2024: ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿ ಪಡೆದ ಮೈಸೂರಿನ ಚಿದಾನಂದ ಎಸ್ ನಾಯಕ್
Sandalwood; 2ಘಟನೆ ಒಂದೇಪರಿಣಾಮ: ಇವರು ಗೆದ್ದು ಸೋತವರಾ? ಸೋತು ಗೆದ್ದವರಾ? ನೀವೇ ನಿರ್ಧರಿಸಿ
Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್’
Kannada Cinema; ತೆರೆಗೆ ಬಂತು ಪ್ರವೀಣ್ ಸಿ.ಪಿ ಅವರ ‘ಎವಿಡೆನ್ಸ್’
MUST WATCH
ಹೊಸ ಸೇರ್ಪಡೆ
Udupi; ಗುಡುಗು ಸಿಡಿಲಿಗೆ ಬೆಚ್ಚಿಬಿದ್ದ ಜನತೆ, ತಡರಾತ್ರಿ ಧಾರಕಾರ ಮಳೆಗೆ ಹಲವೆಡೆ ಕೃತಕ ನೆರೆ
Martin: ಬಂತು ಸ್ಟಾರ್ ಸಿನಿಮಾ; ಧ್ರುವ ಸರ್ಜಾ ಚಿತ್ರ ಬಿಡುಗಡೆ ದಿನಾಂಕ ಘೋಷಿಸಿದ ತಂಡ
Cops Suspended: ಪೋರ್ಶೆ ಕಾರು ಅಪಘಾತ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸರಿಬ್ಬರ ಅಮಾನತು
Udupi: ನಡುರಸ್ತೆಯಲ್ಲಿ ಗ್ಯಾಂಗ್ ವಾರ್; ಹೊಡೆದಾಟದ ವಿಡಿಯೋ ವೈರಲ್
Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಮಹಿಳೆ ಸಾವು