ಬಳ್ಳಾ ರಿ ಇಬ್ಭಾಗದ ಕೂಗಿಗೆ ಬಲ!

ವಿಭಜನೆ ವಿರೋ ಧಿಸಿ 4739, ಬೆಂಬಲಿಸಿ 10,513 ಅರ್ಜಿ ಸಲ್ಲಿಕೆ

Team Udayavani, Feb 6, 2021, 4:05 PM IST

6-22

ಬಳ್ಳಾರಿ: ಜಿಲ್ಲೆಯನ್ನು ಅಖಂಡವಾಗಿ ಉಳಿಸುವಂತೆ ಹೋರಾಟ ನಡೆಸಿದವರಿಗಿಂತಲೂ ವಿಜಯನಗರ ಜಿಲ್ಲೆ ರಚನೆ ಬೆಂಬಲಿಸಿರುವ ಅರ್ಜಿಗಳೇ ಅಧಿಕ ಸಂಖ್ಯೆಯಲ್ಲಿ ಸಲ್ಲಿಕೆಯಾಗಿದ್ದು, ಜಿಲ್ಲೆ ಇಬ್ಭಾಗಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ತಡೆ ಇಲ್ಲದಂತಾಗಿದೆ. ಶೀಘ್ರವೇ ನೂತನ ವಿಜಯನಗರ ಜಿಲ್ಲೆ ರಚನೆಯ ಅಂತಿಮ ನಿರ್ಣಯ ಹೊರ ಬೀಳುವ ಸಾಧ್ಯತೆಯಿದೆ.

ಗಣಿ ನಾಡು ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ 4739, ವಿಜಯನಗರ ಜಿಲ್ಲೆ ರಚನೆ ಬೆಂಬಲಿಸಿ 10,513 ಅರ್ಜಿಗಳು
ಸಲ್ಲಿಕೆಯಾಗಿವೆ. ಪ್ರತಿ ಅರ್ಜಿಯನ್ನು ಒಂದೊಂದಾಗಿ ಪರಿಶೀಲನೆ ನಡೆಸಿರುವ ಜಿಲ್ಲಾ ಧಿಕಾರಿಗಳು, ಷರಾ ಬರೆದು ಮುಂದಿನ ಕ್ರಮಕ್ಕಾಗಿ ಕಲಬುರಗಿ ಪ್ರಾದೇಶಿಕ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದರಲ್ಲಿ ಪರ-ವಿರೋಧದ ಅರ್ಜಿಗಳ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಲಾಗಿದೆ.
ಕಲಬುರಗಿ ಪ್ರಾದೇಶಿಕ ಆಯುಕ್ತರು, ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬಳ್ಳಾರಿ ಡಿಸಿ ಸಲ್ಲಿಸಿರುವ ಪ್ರಸ್ತಾವನೆಯ ಅಡಕಗಳೊಂದಿಗೆ ಮುಂದಿನ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಕೋರಿದ್ದು ಜಿಲ್ಲೆ ಇಬ್ಭಾಗವಾಗುವುದು ಬಹುತೇಕ ಖಚಿತವಾದಂತಾಗಿದೆ.

ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡಿರುವ ರಾಜ್ಯ ಸರ್ಕಾರ, ಹೊಸಪೇಟೆ ಕೇಂದ್ರವನ್ನಾಗಿಸಿಕೊಂಡು ವಿಜಯನಗರ ಜಿಲ್ಲೆ ರಚನೆಗೆ ಕಳೆದ ಡಿ.14ರಂದು ಪ್ರಾಥಮಿಕ ಅ ಧಿಸೂಚನೆ ಹೊರಡಿಸಿತ್ತು. ಜತೆಗೆ ಅಂದಿನಿಂದ ಒಂದು ತಿಂಗಳವರೆಗೆ (ಡಿ.13) ಪರ-ವಿರೋಧಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ, ಸಲಹೆ ಸೂಚನೆ ಆಹ್ವಾನಿಸಲಾಗಿತ್ತು. ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿಯಲ್ಲಿ ಅಖಂಡ ಬಳ್ಳಾರಿ ಜಿಲ್ಲಾ
ಹೋರಾಟ ಸಮಿತಿಯಿಂದ ಡಿ.14ರಿಂದ ಒಂದು ತಿಂಗಳ ಕಾಲ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗಿತ್ತು.

ಬಳಿಕ ಜಿಲ್ಲೆ ವಿಭಜನೆ ವಿರೋ ಧಿಸಿ ರಾಜ್ಯಸಭೆ ಸದಸ್ಯ ಡಾ| ಸೈಯದ್‌ ನಾಸೀರ್‌ ಹುಸೇನ್‌, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಹೋರಾಟ ಸಮಿತಿಯ ಸಿರಿಗೇರಿ ಪನ್ನಾರಾಜ್‌, ಟಿ.ಜಿ. ವಿಠuಲ್‌, ಕುಡತಿನಿ ಶ್ರೀನಿವಾಸ್‌, ದರೂರು ಪುರುಷೋತ್ತಮಗೌಡ, ಸಿದ್ಮಲ್‌ ಮಂಜುನಾಥ್‌, ಜಗದೀಶ ಸೇರಿ ಹಲವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸಾವಿರಾರು ಆಕ್ಷೇಪಣೆ ಸಲ್ಲಿಸಿದ್ದರು.

ಸುಮಾರು 35 ಸಾವಿರಕ್ಕೂ ಹೆಚ್ಚು ಆಕ್ಷೇಪಣೆಗಳನ್ನು ಸಲ್ಲಿಸಲಾಗಿದೆ ಎಂದು ಹೋರಾಟಗಾರರು ಹೇಳಿಕೊಂಡಿದ್ದರು. ಜತೆಗೆ ಪ್ರತ್ಯೇಕ ವಿಜಯನಗರ ಜಿಲ್ಲೆ ಪರವಾಗಿಯೂ ಸಹ ಹಲವಾರು ಅರ್ಜಿ ಸಲ್ಲಿಕೆಯಾಗಿದ್ದವು. ಆದರೆ, ಪರ-ವಿರೋಧದ ಅರ್ಜಿಗಳ ಪರಿಶೀಲನೆ ಬಳಿಕ ಜಿಲ್ಲೆ
ವಿಭಜನೆ ವಿರೋಧಕ್ಕಿಂತ ಬೆಂಬಲಿಸುವವರ ಸಂಖ್ಯೆಯೇ ಅ ಧಿಕವಾಗಿರುವುದು ಪಶ್ಚಿಮ ತಾಲೂಕು ಜನರಲ್ಲಿ ಸಂತಸ ಮೂಡಿಸಿದರೆ,
ಬಳ್ಳಾರಿ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.

ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಹೋರಾಟ ಸಮಿತಿಯಿಂದ ಸಾವಿರಾರು ಆಕ್ಷೇಪಣಾ ಅರ್ಜಿ ಸಲ್ಲಿಸಲಾಗಿದೆ. ಒಂದೇ ವಿಷಯವನ್ನು ಆಧರಿಸಿ ಹಲವರು ಬರೆದಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಒಂದೇ ಎಂದು ಪರಿಗಣಿಸಿದ್ದಾರೆ. ಹೀಗಾಗಿ ಜಿಲ್ಲೆ ವಿರೋಧಿ ಸುವವರ ಅರ್ಜಿಗಳ ಸಂಖ್ಯೆ ಕಡಿಮೆಯಾಗಿರಬಹುದು.

ಆದರೆ, ಜಿಲ್ಲೆ ವಿಭಜನೆಯನ್ನು ಬೆಂಬಲಿಸಿ ಪಶ್ಚಿಮ ತಾಲೂಕುಗಳವರು ಸಹ ಅರ್ಜಿ ಸಲ್ಲಿಸಿರಬಹುದು. ಅವರು ತಮ್ಮ ಸ್ವ-ಇಚ್ಛೆಯಂತೆ, ತಮ್ಮ ಸಮಸ್ಯೆಗಳನ್ನು ಬರೆದು ಸಲ್ಲಿಸಿರಬಹುದು. ಹಾಗಾಗಿ ಬೆಂಬಲಿಸಿರುವ ಅರ್ಜಿಗಳ ಸಂಖ್ಯೆ ಹೆಚ್ಚಳವಾಗಿಬಹುದು. ಆದರೂ, ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿ ಉಳಿಸುವ ನಿಟ್ಟಿನಲ್ಲಿ ಹೋರಾಟ ಮುಂದುವರೆಸುವುದಾಗಿ ಹೋರಾಟ ಸಮಿತಿ ಮುಖಂಡ ಸಿರಿಗೇರಿ ಪನ್ನಾರಾಜ್‌ ಸ್ಪಷ್ಟಪಡಿಸಿದ್ದಾರೆ.

ಓದಿ : ಆರ್‌ಆರ್‌ಟಿ ಶಾಖೆ ಗುಮಾಸ್ತ ಎಸಿಬಿ ಬಲೆಗೆ

ಟಾಪ್ ನ್ಯೂಸ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.