Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!


Team Udayavani, May 8, 2024, 10:24 PM IST

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

ಪಣಜಿ: ತಾವು ಕಷ್ಟ ಪಟ್ಟಂತೆ ತಮ್ಮ ಮಕ್ಕಳು ಕಷ್ಟಪಡಬಾರದೆಂದು ಹೆತ್ತವರು ಅವಿರತ ದುಡಿದು ಹಣ, ಆಸ್ತಿ ಸಂಪಾದಿಸುತ್ತಾರೆ. ಆದರೆ, ವ್ಯಕ್ತಿಯೊಬ್ಬರು ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಕೂಡಿಟ್ಟ 3 ಕೋಟಿ ರೂ. ಹಣ ಅಮಾನ್ಯವಾಗಿದೆ!

ಗೋವಾದ ಮಾಪ್ಸಾದಲ್ಲಿ ಇಂಥ ಅಪರೂಪದ ಘಟನೆ ನಡೆದಿದೆ. ಬ್ಯಾಂಕ್‌ ಲಾಕರ್‌ನಲ್ಲಿ ಪಾಲಕರು ಕೂಡಿಟ್ಟಿದ್ದ 500 ಹಾಗೂ 1000 ರೂ. ಮುಖಬೆಲೆಯ ಸುಮಾರು 3 ಕೋಟಿ ರೂ. ಮಕ್ಕಳಿಗೆ ಸಿಗದೆ ವ್ಯರ್ಥವಾಗಿದೆ. ನೋಟು ಅಮಾನ್ಯಿàಕರಣದಿಂದ ಈ ಹಣಕ್ಕೆ ಈಗ ಬೆಲೆಯೇ ಇಲ್ಲವಾಗಿದ್ದು, ಹೆತ್ತವರು ಕೂಡಿಟ್ಟ ಹಣದಲ್ಲಿ ಒಂದು ಪೈಸೆ ಕೂಡ ಮಕ್ಕಳಿಗೆ ಸಿಗದಂತಾಗಿದೆ. ಲಾಕರ್‌ಗಳಲ್ಲಿ ಹಣ ನೋಡಿ ಬ್ಯಾಂಕ್‌ ಅಧಿ ಕಾರಿಗಳೂ ಗೊಂದಲಕ್ಕೀಡಾಗಿದ್ದಾರೆ.

ಮೂರು ಲಾಕರ್‌ನಲ್ಲಿ ಹಣ:
ಗೋವಾದ ಬಾರದೇಸ್‌ ತಾಲೂಕಿನ ವ್ಯಕ್ತಿಯೊಬ್ಬರು 12 ವರ್ಷಗಳ ಹಿಂದೆ ಮೃತಪಟ್ಟಿದ್ದರು. ಇವರ ಪತ್ನಿ ಮೊದಲೇ ತೀರಿ ಹೋಗಿದ್ದರು. ಮಕ್ಕಳು ವಿದೇಶದಲ್ಲಿದ್ದರು. ಈ ದಂಪತಿ ಮಾಪ್ಸಾದ ಬ್ಯಾಂಕ್‌ನಲ್ಲಿ ಮೂರು ಲಾಕರ್‌ಗಳನ್ನು ತೆರೆದು ಅದರಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಅಪಾರ ಪ್ರಮಾಣದ ಹಣ ಇರಿಸಿದ್ದರು. ಎರಡು ಲಾಕರ್‌ಗಳನ್ನು ತನ್ನ ಹೆಸರಿನಲ್ಲಿದ್ದರೆ, ಇನ್ನೊಂದನ್ನು ಪತ್ನಿ ಹೆಸರಿನಲ್ಲಿತ್ತು. ಪತ್ನಿ ನಿಧನದ ನಂತರ ಆ ಲಾಕರ್‌ನ್ನು ಕೂಡ ಇವರೇ ನಿರ್ವಹಿಸುತ್ತಿದ್ದರು.

12 ವರ್ಷದ ಬಳಿಕ ಲಾಕರ್‌ ಓಪನ್‌:
ತಂದೆ ತೀರಿ ಹನ್ನೆರಡು ವರ್ಷಗಳ ಬಳಿಕ ಮಕ್ಕಳು ವಿದೇಶದಿಂದ ಆಗಮಿಸಿ ಗೋವಾದಲ್ಲಿನ ಆಸ್ತಿ ಮಾರಲು ನಿರ್ಧರಿಸಿದ್ದರು. ತಂದೆ-ತಾಯಿ ವಾಸವಿದ್ದ ಮನೆಯ ಪರಿಶೀಲನೆ ವೇಳೆ ಮಕ್ಕಳಿಗೆ ಬ್ಯಾಂಕ್‌ ದಾಖಲೆ, ಲಾಕರ್‌ ಕೀಗಳು ಸಿಕ್ಕಿವೆ. ನಂತರ ಮಕ್ಕಳು ಸಂಬಂಧಪಟ್ಟ ಬ್ಯಾಂಕ್‌ ಅ ಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬ್ಯಾಂಕ್‌ ಅ ಧಿಕಾರಿಗಳು ಲಾಕರ್‌ ಹೊಂದಿರುವವರ ಮೂಲ ವಾರಸುದಾರರಿಗೆ ಅದನ್ನು ತೆರೆಯಲು ಅವಕಾಶ ನೀಡಿದ್ದಾರೆ.

ಬೆಚ್ಚಿಬಿದ್ದ ಬ್ಯಾಂಕ್‌ ಸಿಬ್ಬಂದಿ:
ಮೇ 6ರಂದು ಲಾಕರ್‌ ತೆರೆಯಲಾಗಿದೆ. ಅದರಲ್ಲಿ 500 ಮತ್ತು 1000 ರೂ. ಮುಖಬೆಲೆಯ ಸುಮಾರು 3 ಕೋಟಿ ರೂ. ಪತ್ತೆಯಾಗಿದೆ. ಇದನ್ನು ಕಂಡು ಮಕ್ಕಳು ಹಾಗೂ ಅಧಿಕಾರಿಗಳು ದಂಗಾಗಿದ್ದಾರೆ. ಏಕೆಂದರೆ ನೋಟು ಅಮಾನ್ಯಿàಕರಣದಿಂದಾಗಿ ಇವೆಲ್ಲ ಈಗ ಕೇವಲ ಕಾಗದದ ಚೂರುಗಳಾಗಿವೆ ಹೊರತು ಯಾವ ಬೆಲೆಯೂ ಇಲ್ಲವಾಗಿದೆ.

ಕೈಗೆ ಬಂದ ತುತ್ತು ಬಾಯಿಗಿಲ್ಲ:
2019ರ ನ.8ರಂದು ಕೇಂದ್ರ ಸರ್ಕಾರ 500 ರೂ.ಮತ್ತು 1000 ರೂ.ನೋಟುಗಳನ್ನು ಅಮಾನ್ಯಗೊಳಿಸಿರುವುದಾಗಿ ಘೋಷಿಸಿತ್ತು. ಆದರೆ ಲಾಕರ್‌ನಲ್ಲಿ ಇಷ್ಟೆಲ್ಲ ಹಣವಿದೆ ಎಂಬ ವಿಷಯವೇ ಗೊತ್ತಿಲ್ಲದ ಮಕ್ಕಳು ತಮ್ಮ ಪೋಷಕರು ಕೂಡಿಟ್ಟ ಹಣ ನೋಡಿ ಮಮ್ಮಲ ಮರುಗಿದ್ದಾರೆ. ಬೆಲೆಬಾಳುವ ಒಡವೆಗಳಲ್ಲೇ ತೃಪ್ತಿಪಟ್ಟುಕೊಂಡಿದ್ದಾರೆ.

ತಮ್ಮ ತಂದೆ-ತಾಯಿ ತಮಗಾಗಿ ಇಷ್ಟು ದೊಡ್ಡ ಮೊತ್ತದ ಹಣ ಬಿಟ್ಟು ಹೋಗಿದ್ದಾರೆ ಎಂಬುದೇ ಗೊತ್ತಿರಲಿಲ್ಲ. ಲಾಕರ್‌ನಲ್ಲಿ ನೋಟುಗಳ ಬಂಡಲ್‌ ನೋಡಿದಾಗ ಮೊದಲು ನಂಬಲಾಗಲಿಲ್ಲ. ಮೊದಲೇ ತಿಳಿದಿದ್ದರೆ 2019ರಲ್ಲಿ ಸರ್ಕಾರ ನೋಟು ಅಮಾನ್ಯಿàಕರಣ ಜಾರಿಗೊಳಿಸಿದಾಗಲೇ ಕಾನೂನುಬದ್ಧವಾಗಿ ಈ ಮೊತ್ತವನ್ನು ಹಿಂಪಡೆಯಲು ಸಾಧ್ಯವಾಗುತ್ತಿತ್ತು ಎಂದು ಮಕ್ಕಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

ಭಗವಾನ್‌ ಶಿವನಿಗೆ ನಮ್ಮ ರಕ್ಷಣೆ ಬೇಕಿಲ್ಲ…ದೇವಾಲಯ ಒಡೆಯಲು ಹೈಕೋರ್ಟ್‌ ಅನುಮತಿ

1-asdsad

Special Marriage Act ಅಡಿಯಲ್ಲಿ ಹಿಂದೂ-ಮುಸ್ಲಿಂ ವಿವಾಹ ಮಾನ್ಯವಲ್ಲ: ಹೈಕೋರ್ಟ್

4

ಹೊರಬಿತ್ತು ಅಂಬಾನಿ ಪುತ್ರನ ವೆಡ್ಡಿಂಗ್ ಕಾರ್ಡ್‌: ಎಲ್ಲಿ,ಯಾವಾಗ,ವಿಶೇಷಗಳೇನು? ಇಲ್ಲಿದೆ ವಿವರ

1-weqwwewq

Jammu ಭೀಕರ ಬಸ್ ಅವಘಡ : 21 ಮಂದಿ ಮೃತ್ಯು, ಹಲವರಿಗೆ ಗಾಯ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Prajwal Revanna

Prajwal Revanna ವಿಮಾನದಿಂದ ಇಳಿಯುತ್ತಿದ್ದಂತೆಯೇ ಎಸ್ ಐಟಿ ಅಧಿಕಾರಿಗಳ ವಶಕ್ಕೆ

1-qewqweeeqw

Ballari ಒನ್ ಕೇಂದ್ರದಲ್ಲಿ ಕಳವು ಮಾಡಿದ್ದ ಆರೋಪಿ ಬಂಧನ; ಮತ್ತೊಬ್ಬ ಪರಾರಿ

1-sub

Subrahmanya ಪರಿಸರದಲ್ಲಿ ಧಾರಾಕಾರ ಮಳೆ: ಕೆಲವೆಡೆ ಹಾನಿ

1-qewqeweqw

Mangaluru ನಮಾಜ್‌ ಪ್ರಕರಣ: ಬಿ ರಿಪೋರ್ಟ್‌ ಸಲ್ಲಿಕೆ; ಶರಣ್‌ ಪಂಪ್‌ವೆಲ್‌ ವಿರುದ್ಧ ಪ್ರಕರಣ

reliance

TIME ನಿಯತಕಾಲಿಕ: ಜಾಗತಿಕ ಪ್ರಭಾವಿ 100 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.