ಕೋವಿಡ್ ನಿವಾರಣೆಗೆ ಪ್ರಾರ್ಥನೆ

ವಿವಿಧ ಧರ್ಮಗಳ ಮುಖಂಡರು ಭಾಗಿ

Team Udayavani, May 15, 2020, 12:13 PM IST

15-May-06

ಬಳ್ಳಾರಿ: ಕ್ಯಾಥೋಲಿಕ್‌ ಡಯಾಸೀಸ್‌ ಆಫ್‌ ಧರ್ಮಾಧ್ಯಕ್ಷರ ನಿವಾಸದಲ್ಲಿ ಕೋವಿಡ್ ನಿಯಂತ್ರಿಸಲು ಜಾಗತಿಕ ಪ್ರಾರ್ಥನೆ ಮತ್ತು ಉಪವಾಸ ಆಚರಿಸಲಾಯಿತು.

ಬಳ್ಳಾರಿ: ಜಗತ್ತಿಗೆ ನಡುಕ ಹುಟ್ಟಿಸಿರುವ ಕೋವಿಡ್ ಮಹಾಮಾರಿ ನಿಯಂತ್ರಿಸಲು ವಿಶ್ವಗುರು ಪೋಪ್‌ ಫ್ರಾನ್ಸಿಸ್‌ ಮತ್ತು ಮಾನವ ಐಕ್ಯಮತ್ಯದ ಉನ್ನತ ಸಮಿತಿ ಕರೆಯ ಮೇರೆಗೆ ಬಳ್ಳಾರಿ ಕ್ಯಾಥೋಲಿಕ್‌ ಡಯಾಸೀಸ್‌ ಆಫ್‌ ಧರ್ಮಾಧ್ಯಕ್ಷರ ನಿವಾಸದಲ್ಲಿ ಜಾಗತಿಕ ಪ್ರಾರ್ಥನೆ ಮತ್ತು ಉಪವಾಸ ಆಚರಿಸಲಾಯಿತು.

ಪ್ರಾಸ್ತಾವಿಕ ಮಾತನಾಡಿದ ಫಾ| ಐವನ್‌ ಪಿಂಟೊ, ಕೋವಿಡ್ ಮಹಾಮಾರಿ ಜಗತ್ತಿನಾದ್ಯಂತ ಹರಡಿದೆ. ಮಾನವ ಕುಲದ ಜೀವನವನ್ನು ಅಸ್ತವ್ಯಸ್ಥಗೊಳಿಸಿದೆ. ಜಗತ್ತಿನಾದ್ಯಂತ ಲಕ್ಷಾಂತರ ಜನರು ಕೊರೊನಾ ಸೋಂಕಿನಿಂದ ಮರಣ ಹೊಂದಿದ್ದಾರೆ. ಕೋಟ್ಯಂತರ ಜನರಿಗೆ ಸೋಂಕು ಆವರಿಸಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶ್ವಗುರು ಪೋಪ್‌ ಫ್ರಾನ್ಸಿಸ್‌ ಮತ್ತು ಮಾನವ ಐಕ್ಯಮತ್ಯದ ಉನ್ನತ ಸಮಿತಿಯು (ಹೈಯರ್‌ ಕಮಿಟಿ ಆಫ್‌ ಹ್ಯೂಮನ್‌ ಫ್ರಟರ್ನಿಟಿ) ಕರೆ ನೀಡಿರುವ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲೂ ಗುರುವಾರ ಜಾಗತಿಕ ಪ್ರಾರ್ಥನೆ ಮತ್ತು ಉಪವಾಸ ದಿನವನ್ನಾಗಿ ಆಚರಿಸಲಾಗಿದೆ ಎಂದವರು ತಿಳಿಸಿದರು.

ಮನುಕುಲ ಆವರಿಸಿಕೊಂಡಿರುವ ಕೊರೊನ ವೈರಸ್‌ ಎಂಬ ರೋಗವನ್ನು ದೇವರ ಕೃಪೆಯಿಂದ ವಿನಾಶಗೊಳಿಸಲು ಪ್ರಾರ್ಥನೆ ಮತ್ತು ಉಪವಾಸ ದಿನವನ್ನಾಗಿ ಆಚರಿಸಲು ನಾವಿಂದು ಇಲ್ಲಿ ಸೇರಿದ್ದೇವೆ. ನ್ಯಾಯಾಧೀಶ ಮಹಮ್ಮದ್‌ ಅಬ್ಧೆಲ್‌ ಸಲಾಂ ಮಾತನಾಡಿದರು. ಧರ್ಮಾಧ್ಯಕ್ಷ ಹೆನ್ರಿ ಡಿಸೋಜ, ಬೈಬಲ್‌ ಗ್ರಂಥದ ಪವಿತ್ರ ನುಡಿಗಳನ್ನು ಪಠಿಸುತ್ತಾ ದೇವರಲ್ಲಿ ದೃಢ ವಿಶ್ವಾಸ ಹೆಚ್ಚಿಸಿ ಸೋಂಕಿನಿಂದ ಪ್ರಭಾವಿತರಾದವರಿಗೆ ಅಗತ್ಯ ಸೇವೆ, ಪರಿಹಾರ ಹಾಗೂ ಉಪಶಮನ ನೀಡುವುದರ ಮೂಲಕ ಸಮಾಜದಲ್ಲಿ ಸಹಕಾರ ಹೆಚ್ಚಿಸಿ ಸಹೋದರತ್ವದಿಂದ ಜೀವಿಸಬೇಕು ಎಂದು ಕರೆ ನೀಡಿದರು.

ಕಲ್ಯಾಣ ಸ್ವಾಮೀಜಿ ವಚನ ಸಾಹಿತ್ಯ ಪಠಿಸಿದರು. ಜಿಲ್ಲೆಯ ಖಾಝೀ ಸಿದ್ದಿಕಿ ಮೊಹಮಿತ್‌ ಕುರಾನಿನ ಪವಿತ್ರ ವಾಕ್ಯಗಳನ್ನು ಪಠಿಸಿದರು. ಬ್ರಹ್ಮ ಕುಮಾರಿ ಸಮಾಜದ ಮುಖ್ಯಸ್ಥೆ ನಿರ್ಮಲ ಸನಾತನ ಭಗವದ್ಗೀತಾ ಪವಿತ್ರ ಗ್ರಂಥವನ್ನು ಪಠಿಸಿದರು. ಜೈನ ಧರ್ಮದ ನಾಯಕರಾದ ಬಸಂತರವರು ಆಗಮ ಪವಿತ್ರ ಗ್ರಂಥದ ಪಠಣೆ ಮಾಡಿದರು. ಪಾಸ್ಟಾರ್‌ ಪ್ರಭಾಕರ್‌ ಪ್ರಾರ್ಥಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.