JDU ಅಧ್ಯಕ್ಷರನ್ನು ಕಿತ್ತೆಸೆಯಲು ಮುಂದಾದ ಬಿಹಾರ ಸಿಎಂ ನಿತೀಶ್ ಕುಮಾರ್
Team Udayavani, Dec 23, 2023, 10:23 AM IST
ಪಾಟ್ನಾ: ಜೆಡಿಯು ಪಕ್ಷದ ಮುಖ್ಯಸ್ಥ ಸ್ಥಾನದಿಂದ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಾಲನ್ ಸಿಂಗ್ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೆಳಗಿಳಿಸಲಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 29ರಂದು ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಸಿಎಂ ನಿತೀಶ್ ಕುಮಾರ್ ಅವರೇ ಪಕ್ಷದ ಮುಖ್ಯಸ್ಥನ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ನಿತೀಶ್ ಅವರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ನಿತೀಶ್ ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ, ಇದು ಪಕ್ಷದೊಳಗೆ ಯಾವುದೇ ಗದ್ದಲವನ್ನು ತಪ್ಪಿಸಲು ಸಹಾಯ ಮಾಡುತ್ತದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ನಿತೀಶ್ ಕುಮಾರ್ ಅವರು ಲಾಲನ್ ಸಿಂಗ್ ಅವರು ಕಾರ್ಯನಿರ್ವಹಿಸುತ್ತಿರುವ ರೀತಿ ಮತ್ತು ವಿಶೇಷವಾಗಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೊಂದಿಗಿನ ಅವರ ಸಾಮೀಪ್ಯದಿಂದ ಅಸಮಾಧಾನಗೊಂಡಿದ್ದಾರೆ.
ಇದನ್ನೂ ಓದಿ:Hindu temple: ಅಮೆರಿಕಾದಲ್ಲಿ ಭಾರತ ವಿರೋಧಿ ಘೋಷಣೆ ಬರೆದು ಹಿಂದೂ ದೇವಾಲಯ ವಿರೂಪ
2024 ರ ಲೋಕಸಭೆ ಚುನಾವಣೆಯಲ್ಲಿ ಮುಂಗರ್ ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಲು ಲಾಲನ್ ಸಿಂಗ್ ಉತ್ಸುಕರಾಗಿದ್ದಾರೆ, ಅಲ್ಲದೆ ಅವರು ಆರ್ಜೆಡಿ (ರಾಷ್ಟ್ರೀಯ ಜನತಾ ದಳ) ಟಿಕೆಟ್ನಲ್ಲಿ ಸ್ಪರ್ಧಿಸಬಹುದು ಎಂದು ವರದಿಗಳು ತಿಳಿಸಿವೆ.
ನಿತೀಶ್ ಅವರು ತಮ್ಮ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಈಡೇರಿಸಲು ಇಂಡಿಯಾ ಬ್ಲಾಕ್ ಪಾಲುದಾರರೊಂದಿಗೆ ಉತ್ತಮವಾಗಿ ಸಹಕರಿಸುವಲ್ಲಿ ವಿಫಲರಾದ ಲಾಲನ್ ಸಿಂಗ್ ಅವರೊಂದಿಗೆ ಅಸಮಾಧಾನಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ
Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
MUST WATCH
ಹೊಸ ಸೇರ್ಪಡೆ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ