ನನ್ನ ಆರೋಪಗಳಿಗೆ ಬಿಎಸ್ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ
Team Udayavani, Apr 17, 2024, 8:38 PM IST
ಶಿವಮೊಗ್ಗ: ನನ್ನ ಆರೋಪಗಳಿಗೆ ಬಿ.ಎಸ್.ಯಡಿಯೂರಪ್ಪ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಆದರೆ ಅದು ಸಾಧ್ಯವಿಲ್ಲ, ಅವರು ಪ್ರತಿಕ್ರಿಯೆ ಕೊಡಲೇಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಂದಾಣಿಕೆ ರಾಜಕೀಯ, ಜಾತಿ ರಾಜಕೀಯ ಮಾಡಿಲ್ಲ, ತಮಗೆ ಬೇಕಾದವರಿಗೆ ಟಿಕೆಟ್ ಕೊಡಿಸಿಲ್ಲ ಎಂದು ಪ್ರಾಮಾಣಿಕವಾಗಿ ಹೇಳಲಿ. ತಮ್ಮ ಪುತ್ರರಿಗಾಗಿ ಎಂತಹ ಕೆಲಸಕ್ಕೂ ಕೈ ಹಾಕುತ್ತಿದ್ದಾರೆ. ಪಕ್ಷಕ್ಕೆ ಇಂತಹ ಹೀನ ಸ್ಥಿತಿ ಬರಲು ಬಿಎಸ್ವೈ ಕೂಡ ಕಾರಣ. ಬಿಜೆಪಿ ಇತಿಹಾಸದಲ್ಲಿ ಒಳ ಒಪ್ಪಂದ ಎಂಬುದು ಇರಲೇ ಇಲ್ಲ. ಸೋಲು-ಗೆಲುವು ಏನೇ ಇದ್ದರೂ ನೇರಾನೇರ ಚುನಾವಣೆ ನಡೆಸುತ್ತಿದ್ದೆವು. ಯಡಿಯೂರಪ್ಪ, ನಾನು, ಅನಂತಕುಮಾರ್ ಸೇರಿದಂತೆ ಹಲವಾರು ಮುಖಂಡರು 40 ವರ್ಷಗಳ ಕಾಲ ತಪಸ್ಸಿನಂತೆ ಪಕ್ಷ ಕಟ್ಟಿದ್ದರಿಂದ ಇಂದು ಅಧಿಕಾರಕ್ಕೆ ಏರುವಂತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka CM ಸಿದ್ದುಗೆ ಮಿಷನ್ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್ ನಂಬಿಕೆ: ಜೆ.ಪಿ.ನಡ್ಡಾ
Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ
State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !