ಚಾಮರಾಜನಗರ: ದ್ವಿತೀಯ ಪಿಯುಸಿ ಶೇ. 69.29 ಫಲಿತಾಂಶ


Team Udayavani, Jul 14, 2020, 5:20 PM IST

ಚಾಮರಾಜನಗರ: ದ್ವಿತೀಯ ಪಿಯುಸಿ ಶೇ. 69.29 ಫಲಿತಾಂಶ

ಚಾಮರಾಜನಗರ: ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ. 69.29ರಷ್ಟು ಫಲಿತಾಂಶ ದೊರೆತಿದೆ.

ಈ ಮೂಲಕ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಒಂದಾಗಿರುವ ಚಾಮರಾಜನಗರವು ಒಟ್ಟಾರೆ ಫಲಿತಾಂಶದಲ್ಲಿ ರಾಜ್ಯದಲ್ಲಿ 12 ನೇ ಸ್ಥಾನವನ್ನು ಪಡೆದುಕೊಂಡಿದೆ.

ಜಿಲ್ಲೆಯಲ್ಲಿ 5,686 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರಲ್ಲಿ 3,940 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಸಲ 12ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿಯೂ ಅದೇ ಸ್ಥಾನವನ್ನು ಕಾಯ್ದುಕೊಂಡಿದೆ.

ಬಾಲಕಿಯರೇ ಮೇಲುಗೈ:
ಈ ಸಲವೂ ಜಿಲ್ಲೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅಲ್ಲದೇ ಬಾಲಕರಿಗಿಂತ ಬಾಲಕಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದಿದ್ದರೂ ಎಂಬುದೂ ವಿಶೇಷ. ಶೇ. 69.57ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದರೆ, ಶೇ. 52.84ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ.

3119 ಬಾಲಕರು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 1648 ಮಂದಿ ಉತ್ತೀರ್ಣರಾಗಿದ್ದಾರೆ. 3674 ಮಂದಿ ಬಾಲಕಿಯರು ಪರೀಕ್ಷೆಗೆ ಕುಳಿತಿದ್ದು, ಇದರಲ್ಲಿ 2556 ಮಂದಿ ತೇರ್ಗಡೆಯಾಗಿದ್ದಾರೆ.

ಪಟ್ಟಣ ಪ್ರದೇಶದ ವಿದ್ಯಾರ್ಥಿಗಳ ಮುನ್ನಡೆ:
ಪಟ್ಟಣ ಪ್ರದೇಶದ 3,876 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 2,764 ಮಂದಿ ತೇರ್ಗಡೆಯಾಗಿದ್ದಾರೆ (ಶೇ. 71.31). ಗ್ರಾಮೀಣ ಪ್ರದೇಶದ 1810 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 1176 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 64.97).

ಜಿಲ್ಲೆಯಲ್ಲಿ ಈ ಬಾರಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಹೆಚ್ಚಿನ ಫಲಿತಾಂಶ ಪಡೆದಿದ್ದಾರೆ. (ಶೇ. 79.73) ವಿಜ್ಞಾನ ವಿಭಾಗ ಎರಡನೇ ಸ್ಥಾನ ಶೇ. (75.83) ಹಾಗೂ ಕಲಾ ವಿಭಾಗ (ಶೇ.53.71) ಮೂರನೇ ಸ್ಥಾನ ಪಡೆದಿದೆ.

ವಾಣಿಜ್ಯ ವಿಭಾಗದಿಂದ 2,329 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 1857 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಿಜ್ಞಾನ ವಿಭಾಗದಿಂದ 1266 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಇವರಲ್ಲಿ 960 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಿಂದ 2091 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇವರ ಪೈಕಿ 1123 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಮಾರಕವಾದ ಲಾಕ್‌ ಡೌನ್: ಇಂಗ್ಲಿಷ್‌ನಲ್ಲಿ ಹೆಚ್ಚು ಫೇಲ್
ಮಾರ್ಚ್ ತಿಂಗಳಲ್ಲಿ ಬಂದ ಲಾಕ್‌ ಡೌನ್ ಕಲಾ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ತೊಡಕಾಯಿತೇ? ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ ಅನುತ್ತೀಣರಾಗಿರುವ ವಿದ್ಯಾರ್ಥಿಗಳ ಶೇಕಡಾವಾರು ನೋಡಿದರೆ ಹೀಗನಿಸದೇ ಇರದು.

ಜಿಲ್ಲೆಯಲ್ಲಿ ಕಳೆದ ವರ್ಷ ಜಿಲ್ಲೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ. 83.18ರಷ್ಟು, ಕಲಾ ವಿಭಾಗದಲ್ಲಿ ಶೇ. 69.18 ಹಾಗೂ ವಿಜ್ಞಾನ ವಿಭಾಗದಲ್ಲಿ 59.50 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ವಿಜ್ಞಾನ ವಿಭಾಗ ನಿರೀಕ್ಷೆಗೂ ಮೀರಿ ಉತ್ತಮ ಫಲಿತಾಂಶ ದಾಖಲಿಸಿದೆ. ಕಲಾ ವಿಭಾಗ ತೀವ್ರ ಕುಸಿತ ಕಂಡಿದ್ದು, ಕಳೆದ ವರ್ಷ ಶೇ.  69.18 ರಿಂದ 53.71ಕ್ಕೆ ಕುಸಿದಿದೆ. ಇದಕ್ಕೆ ಇಂಗ್ಲಿಷ್ ವಿಷಯದಲ್ಲಿ ಅನುತ್ತೀರ್ಣರಾಗಿರುವವರ ಸಂಖ್ಯೆ ಹೆಚ್ಚಿರುವುದು ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.