ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಹಂತಕರನ್ನು 4 ಗಂಟೆಗಳಲ್ಲಿ ಪತ್ತೆ ಹಚ್ಚಿದ್ಹೇಗೆ!
ಕಾಮಗಾರಿಯಲ್ಲಿದ್ದ ಜೆಸಿಬಿಯನ್ನು ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ಪೊಲೀಸರು!
Team Udayavani, Jul 5, 2022, 6:33 PM IST
ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳನ್ನು ಕೇವಲ ನಾಲ್ಕು ಗಂಟೆ ಅವಧಿಯಲ್ಲಿ ರಾಮದುರ್ಗ ಪೊಲೀಸರು ಮುಳ್ಳೂರು ಘಾಟ್ ಬಳಿಯ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಕೊಲೆ ನಡೆಸಿ ಪರಾರಿಯಾಗುತ್ತಿದ್ದಂತೆ ಪೊಲೀಸರು ಅಕ್ಕಪಕ್ಕದ ಜಿಲ್ಲೆಯ ಪೊಲೀಸರನ್ನು ಅಲರ್ಟ್ ಮಾಡಿದ್ದರು. ಆರೋಪಿಗಳ ಮೊಬೈಲ್ ಲೋಕೇಶನ್ ಟ್ರೇಸ್ ಮಾಡುತ್ತಿದ್ದರು. ಈ ವೇಳೆ ರಾಮದುರ್ಗದ ಬಳಿ ಪೊಲೀಸರು ವಾಹನಗಳ ತಪಾಸಣೆ ಮಾಡುವ ವೇಳೆ ಮಹಾಂತೇಶ ಹಾಗೂ ಮಂಜುನಾಥ ಇದ್ದ ಕಾರು ಆಗಮಿಸಿದೆ. ಕೆಳಗೆ ಇಳಿಯುವಂತೆ ಸೂಚಿಸಿದರೂ ಇಳಿಯದಿದ್ದಾಗ ಡಿವೈಎಸ್ಪಿ ರಾಮನಗೌಡ ಹಟ್ಟಿ ಸರ್ವಿಸ್ ರಿವಾಲ್ವಾರ್ ಹಿಡಿದು ಶೂಟ್ ಮಾಡುವುದಾಗಿ ಎಚ್ಚರಿಸಿದ್ದಾರೆ. ಪ್ರತಿರೋಧ ತೋರದೆ ಆರೋಪಿಗಳು ಶರಣಾಗಿದ್ದಾರೆ.
ಆರೋಪಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಕಾಮಗಾರಿಯಲ್ಲಿದ್ದ ಜೆಸಿಬಿಯನ್ನು ಕೂಡ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದರು. ಹೆಚ್ಚಿನ ಭದ್ರತೆಯೊಂದಿಗೆ ನಾಕಾಬಂದಿ ಮಾಡಲಾಗಿತ್ತು. ಆರೋಪಿಗಳು ಕೊಲೆ ಮಾಡಿದ ನಂತರ ಧರಿಸಿದ್ದ ಬಟ್ಟೆಯನ್ನು ಬದಲಿಸಿಕೊಂಡಿದ್ದರು. ಕೊಲೆ ನಂತರ ಪರಾರಿಯಾಗಲು ಕಾರ್ ವ್ಯವಸ್ಥೆಯನ್ನು ಕೂಡ ಮಾಡಿಕೊಂಡಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ಪೊಲೀಸರ ಮಿಂಚಿನ ಕಾರ್ಯಾಚರಣೆ: ಚಂದ್ರಶೇಖರ ಗುರೂಜಿ ಹಂತಕರ ಬಂಧನ
ಪ್ರಮುಖ ರಸ್ತೆಗಳ ಮೂಲಕ ಹೋದರೆ ಟೋಲ್ ನಾಕಾ ಇತರೆ ತೊಂದರೆ ಒದಗಬಹುದು ಎಂದು ರಾಜ್ಯ ಹೆದ್ದಾರಿ ಮೂಲಕ ಪರಾರಿಯಾಗಲು ಯತ್ನಿಸಿದ್ದರು ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ