ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ


Team Udayavani, Sep 4, 2021, 6:38 PM IST

4-17

ಶೃಂಗೇರಿ: “ಓಟು ಏಕೆ ಹಾಕಬೇಕ್ರಿ? ಓಡಾಡಲು ಸಮರ್ಪಕವಾದ ರಸ್ತೆಯನ್ನೇ ಮಾಡಿಕೊಡದ ಮೇಲೆ ನಮಗ್ಯಾಕ್ರಿ ಓಟು? ಓಟು ಹಾಕಿ ಸಾಕಾಗಿದೆ. ಇನ್ನು ನಮ್ಮ ಮನೆ ಮುಂದೆ ಯಾರೂ ಓಟು ಕೇಳಲು ಬರಬ್ಯಾಡ್ರಿ. ಇದು ತಾಲೂಕಿನ ಧರೆಕೊಪ್ಪ ಗ್ರಾಪಂನ ಧರೆಕೊಪ್ಪ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳ ಜನರ ಮಾತಾಗಿದೆ.

ಕಳೆದ 2-3 ದಶಕಗಳಿಂದ ರಸ್ತೆಯ ಅಭಿವೃದ್ಧಿಯನ್ನೇ ಕಾಣದೆ ಇರುವ ಶೃಂಗೇರಿ- ಆಗುಂಬೆ ಮಾರ್ಗವಾದ ರಾಜ್ಯ ಹೆದ್ದಾರಿ ರಸ್ತೆ ತಾಲೂಕಿನ ಧರೇಕೊಪ್ಪ ಗ್ರಾಪಂನ ಕೈಮನೆ ಬಳಿಯ ಬೈಪಾಸ್‌ ರಸ್ತೆಯಿಂದ ತೆರಳುವ ಮಾರ್ಗವಾಗಿದೆ. ಧರೆಕೊಪ್ಪ ಮಾರ್ಗವಾಗಿ ಜಿಲ್ಲೆಯ ಮಳೆಯ ದೇವರೆಂದೇ ಕರೆಯಲ್ಪಡುವ ಕಿಗ್ಗಾ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳುವ ರಸ್ತೆಯಾಗಿದೆ.

ಪ್ರತಿನಿತ್ಯ ಇಲ್ಲಿ ನೂರಾರು ಜನರು, ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ತೀವ್ರವಾಗಿ ಹದಗೆಟ್ಟಿರುವ ರಸ್ತೆಯಾಗಿದ್ದು, ಭಾರೀ ಗಾತ್ರದ ಹೊಂಡಗಳು ಉಂಟಾಗಿದ್ದು ಡಾಂಬರು ಕಾಣದೆ ಕಲ್ಲು, ಮಣ್ಣು, ಜಲ್ಲಿಕಲ್ಲುಗಳಿಂದಕೂಡಿದ ಅರೆಬರೆ ರಸ್ತೆಯಾಗಿ ನಿತ್ಯ ಸಂಚರಿಸುವವರ ಪಾಲಿಗೆ ನಿತ್ಯ ಕಿರಿಕಿರಿಯಾಗಿದೆ. ರಸ್ತೆಯಲ್ಲಿ ಹೊಂಡ ಮಳೆಗಾಲದಲ್ಲಿ ಮಳೆಯ ನೀರೆಲ್ಲಾ ರಸ್ತೆಯ ಮೇಲೆ ಹರಿಯುವುದರಿಂದ ಗುಂಡಿಗಳಲ್ಲಿ ನಿಂತ ನೀರು ವಾಹನ ಅಪಘಾತಕ್ಕೆ ಕಾರಣವಾಗಿದೆ.

ರಸ್ತೆ ಸಂಪೂರ್ಣ ಹಾನಿಗೊಂಡಿದ್ದರೂ ಜಿಲ್ಲಾ, ತಾಲೂಕು ಆಡಳಿತ, ಗ್ರಾಪಂ, ತಾಪಂ, ಜಿಪಂ ಜನಪ್ರತಿನಿಧಿಗಳು ತಲೆ ಕೆಡಿಸಿಕೊಳ್ಳದಿರುವುದು ಆಶ್ಚರ್ಯ ತಂದಿದೆ. ಕಳೆದ 3 ವರ್ಷದಿಂದ ತಾಲೂಕಿನಲ್ಲಿ ದಾಖಲೆ ಪ್ರಮಾಣದಲ್ಲಿ ಅತಿವೃಷ್ಟಿಯಾಗುತ್ತಿದ್ದು, ಗ್ರಾಮೀಣ ಭಾಗದ ರಸ್ತೆಗಳು ಅತಿವೃಷ್ಟಿಯಿಂದಾಗಿ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಿಸಿದ್ದು ಅನುದಾನಗಳನ್ನು ಸಾಕಷ್ಟು ಬಿಡುಗಡೆ ಮಾಡಿದ್ದರೂ ಬಂದಿರುವ ಅನುದಾನದಲ್ಲಿ ಈ ರಸ್ತೆಯ ಅಭಿವೃದ್ಧಿಗೆ ಮೀಸಲಿಡುವುದು ಬಿಟ್ಟು ಜನಪ್ರತಿನಿಧಿ ಗಳು ತಮ್ಮ ಪಕ್ಷದ ಕಾರ್ಯಕರ್ತರ ಮನೆಗಳಿಗೆ ಹೋಗುವ ರಸ್ತೆಗಳಿಗೆ ಮಾತ್ರ ಅನುದಾನವನ್ನು ಮೀಸಲಿಡಲಾಗುತ್ತಿದೆ.

ಇಂತಹ ಕುಗ್ರಾಮ ಹಳ್ಳಿಗಳಿಗೆ ತೆರಳುವ ರಸೆ ¤ಗಳು ಹದಗೆಟ್ಟಿರುವುದು ಇವರ ಕಣ್ಣಿಗೆ ಬೀಳುವುದೇ ಇಲ್ಲ. ಚುನಾವಣಾ ಬಹಿಷ್ಕಾರ: ಪ್ರತೀ ಚುನಾವಣಾ ಸಂದರ್ಭದಲ್ಲಿ ಜನಪ್ರತಿನಿಧಿಗಳು ನೀಡುವ ಆಶ್ವಾಸನೆ, ಭರವಸೆಗಳನ್ನು ಕೇಳಿ ಕೇಳಿ ಬೇಸತ್ತ ಜನ ಈ ಭಾರಿ ಸ್ಥಳೀಯ ಚುನಾವಣೆಗಳನ್ನು ಬಹಿಷ್ಕರಿಸಲು ಮುಂದಾಗಿದ್ದಾರೆ. ಈ ರಸ್ತೆಯ ಅಭಿವೃದ್ಧಿ ಬಗ್ಗೆ ಯಾರೂ ಗಮನ ನೀಡದೇ ಇರುವುದರಿಂದ ಈ ಭಾಗದ ಗ್ರಾಮಸ್ಥರು ರಸ್ತೆಯಪಕ್ಕದಲ್ಲಿ ಚುನಾವಣೆ  ಬ್ಯಾನರ್‌ಗಳನ್ನು ಹಾಕಿ ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಿದ್ದಾರೆ.

ಈ ರಸ್ತೆಯು ಶೃಂಗೇರಿ- ಆಗುಂಬೆ ಮಾರ್ಗದ ಕೈಮನೆ ಬಳಿ ಬೈಪಾಸ್‌ ರಸ್ತೆಯಿಂದ ತೆರಳುವ ಮಾರ್ಕಸು, ಧರೆಕೊಪ್ಪ, ಚೋಳರಮನೆ, ಮೀಗಾ, ಚೇರುಗೋಡು, ಬೀಳೂಕೊಪ್ಪ, ಬೋಳೂರು, ಕೆಲ್ಲಾರು, ಕಂಪಿನಬೈಲು, ಹೆಡ್ಲುಕುಡಿಗೆ, ಕಿತ್ಲೆಬೈಲ್‌, ಕೆರೆಕುಡಿಗೆ, ಗಗ್ಗುಡಿಗೆ ಮುಂತಾದ ಹಳ್ಳಿಯ ಗ್ರಾಮಸ್ಥರು ನಿತ್ಯ ಓಡಾಡುವ ಮಾರ್ಗವಾಗಿದೆ. ಇಷ್ಟೇ ಅಲ್ಲದೆ ಈ ರಸ್ತೆಯು ತಾಲೂಕಿನ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಕಿಗ್ಗಾ-ಸಿರಿಮನೆ ಜಲಪಾತಕ್ಕೆ ವೀಕ್ಷಿಸಲು ತೆರಳುವ ಮಾರ್ಗವಾಗಿದೆ.

ನಿತ್ಯ ನೂರಾರು ಪ್ರವಾಸಿಗರು ಆಗುಂಬೆ, ತೀರ್ಥಹಳ್ಳಿ, ದ.ಕ. ಜಿಲ್ಲೆ, ಶಿವಮೊಗ್ಗ ಜಿಲ್ಲೆಯಿಂದ ಬರುವ ಪ್ರವಾಸಿಗರು ಶೃಂಗೇರಿಗೆ 4-5 ಕಿ.ಮೀ ಸುತ್ತಿ ಬಳಸಿ ಬರುವುದರ ಬದಲು ಹತ್ತಿರದ ಮಾರ್ಗವಾದ ಕೈಮನೆ ಬೈಪಾಸ್‌ ರಸ್ತೆಯಿಂದ ಸಿರಿಮನೆ ಜಲಪಾತ ವೀಕ್ಷಿಸಲು ತೆರಳುವವರಾಗಿದ್ದಾರೆ. ಆದರೆಈರಸ್ತೆ ಸಮರ್ಪಕವಾಗಿ ಹದಗೆಟ್ಟಿರುವುದರಿಂದ ಪ್ರವಾಸಿಗರುಈಮಾರ್ಗದಲ್ಲಿ ಬರುವವರ ಸಂಖ್ಯೆ ಇದೀಗ ಕಡಿಮೆಯಾಗಿದೆ.

ಈ ಹಿಂದೆ ಉಡುಪಿ‌ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಡಿ.ಸಿ. ಶ್ರೀಕಂಠಪ್ಪನವರ ಕಾಲದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ಈ ಅಭಿವೃದ್ಧಿಪಡಿಸಲಾಗಿತ್ತು. ನಂತರ ಇಲ್ಲಿಯತನ ಅಭಿವೃದ್ಧಿಪಡಿಸದೇ ಇರುವುದು ಇದೀಗ ಸಂಪೂರ್ಣ ರಸ್ತೆಯೇ ನೇಪಥ್ಯಕ್ಕೆ ಸರಿದಿದೆ. ತುರ್ತು ಚಿಕಿತ್ಸೆಗೆ ಪರದಾಡಬೇಕಿದೆ. ಇನ್ನಾದರೂ ಸಂಬಂಧ ಪಟ್ಟ ಇಲಾಖೆ ಗಮನ ಹರಿಸಬೇಕಾಗಿದೆ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.