ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ : ಕೆ.ಗೋಪಾಲ ಪೂಜಾರಿ

ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆಗಳೇನು ಎಂದು ಜನರಿಗೆ ತಿಳಿಸಲಿ

Team Udayavani, May 9, 2023, 4:01 PM IST

ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ : ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಕೊನೆಯ ಹಂತ ಕಾಂಗ್ರೆಸ್‌ ಅಬ್ಬರದ ಚುನಾವಣಾ ಪ್ರಚಾರ ಕೈಗೊಂಡಿದೆ. ಸಿದ್ದಾಪುರ, ತಲ್ಲೂರು, ವಂಡ್ಸೆ, ಬೈಂದೂರು,ಉಪ್ಪುಂದ ಸೇರಿದಂತೆ ವಿವಿಧ ಕಡೆ ನಡೆದ ರೋಡ್‌ ಶೋಗಳಲ್ಲಿ ಜನಸಾಗರ ಸೇರಿದೆ.ಇದು ಕಾಂಗ್ರೆಸ್‌ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಿದೆ.

ಪ್ರತಿ ವಾರ್ಡ್‌ಗಳಲ್ಲಿ ಅಚ್ಚುಕಟ್ಟಿನ ಪ್ರಚಾರ ಕೈಗೊಂಡಿರುವುದು ಮತ್ತು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಒಲವಿರುವ ಜೊತೆಗೆ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಯವರನ್ನು ಈ ಬಾರಿ ಗೆಲ್ಲಿಸಬೇಕೆನ್ನುವ ಅನುಕಂಪ ಎದ್ದು ಕಾಣುತ್ತಿದೆ.

ಬೈಂದೂರು ಕ್ಷೇತ್ರದ ವಿವಿಧ ಕಡೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಕೆ.ಗೋಪಾಲ ಪೂಜಾರಿಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆಯಿದೆ. ಸೋಲಿನ ಭೀತಿಯಿಂದ ಹತಾಶರಾದ ಬಿಜೆಪಿ ಸುಳ್ಳುಗಳ ಪ್ರಚಾರದ ಮೂಲಕ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ.ಆದರೆ ಬೈಂದೂರು ಕ್ಷೇತ್ರದ ಜನ ಬಿಜೆಪಿಯ ಸುಳ್ಳು ಪ್ರಚಾರಕ್ಕೆ ಬೆಲೆ ಕೊಡುವುದಿಲ್ಲ.

ಬೈಂದೂರು ಕರಾವಳಿ ಹಾಗೂ ಮಲೆನಾಡು ಭಾಗಗಳನ್ನು ಹೊಂದಿದೆ.ಇಲ್ಲಿ ಪ್ರತಿ ಕುಟುಂಬಗಳು ಕೂಡ ಕಷ್ಟಪಟ್ಟು ಮೇಲೆ ಬಂದವರಾಗಿದ್ದಾರೆ.ನನ್ನ ಬಾಲ್ಯದಲ್ಲಿ ಊಟಕ್ಕೂ ಕೂಡ ಕಷ್ಟಪಡಬೇಕಾಗಿತ್ತು.ಹೋಟೆಲ್‌ಗ‌ಳಲ್ಲಿ ಕೂಲಿ ಮಾಡಿ ಮೇಲೆ ಬಂದ ನನಗೆ ಜೀವನದ ಕಷ್ಟದ ಇಂಚಿಂಚೂ ಕೂಡ ತಿಳಿದಿದೆ.ಆದರೆ ಆ ಕಷ್ಟಗಳನ್ನು ಮಾರ್ಕೆಟಿಂಗ್‌ ಮಾಡಿಕೊಂಡು ಜನರಲ್ಲಿ ಸುಳ್ಳು ಅಪಪ್ರಚಾರ ಮಾಡಿ ಚುನಾವಣೆ ಎದುರಿಸುವಂತ ಕೆಲಸ ನಾನು ಯಾವತ್ತು ಮಾಡಿಲ್ಲ. ಸತ್ಯ ಮತ್ತು ನ್ಯಾಯದ ಜೊತೆ ಜನರ ಬಳಿ ಮತಯಾಚಿಸಿದ್ದೇನೆ.ನನ್ನ ವ್ಯಕ್ತಿತ್ವ ಕ್ಷೇತ್ರದ ಪ್ರತಿ ಮನೆ ಮನೆಯ ಜನರಿಗೂ ತಿಳಿದಿದೆ.ಕ್ಷೇತ್ರಾದ್ಯಂತ ಕಾಂಗ್ರೆಸ್‌ ಪರ ಅಲೆ ಸುನಾಮಿಯಂತೆ ಎದ್ದಿದೆ.ಜನರಿಗೆ ಚುನಾವಣೆ ಬಂದಾಕ್ಷಣ ಪ್ರತ್ಯಕ್ಷವಾಗುವ ನಾಯಕರು ಬೇಕಿಲ್ಲ. ಕ್ಷೇತ್ರದ ಸೇವೆ ಮಾಡಿ ಸಂಕಷ್ಟಗಳಿಗೆ ಸದಾ ಸ್ಪಂಧಿಸುವ ನನ್ನ ಪ್ರಾಮಾಣಿಕ ವ್ಯಕ್ತಿತ್ವಕ್ಕೆ ಆಶೀರ್ವಾದ ಮಾಡುತ್ತಾರೆ.ಪ್ರಚಂಡ ಬಹುಮತದಿಂದ ಗೆಲ್ಲಿಸುತ್ತಾರೆ ಎಂದರು.

ಬೈಂದೂರು ಕ್ಷೇತ್ರಕ್ಕೆ ಗಂಟಿಹೊಳೆ ಕೊಡುಗೆ ಏನು,ಜನಸಾಮಾನ್ಯರ ಪ್ರಶ್ನೆ

ಬೈಂದೂರು ಕ್ಷೇತ್ರದಲ್ಲಿ ಸೋಶಿಯಲ್‌ ಮೀಡಿಯಾ ವಾರ್‌ ತಾರಕಕ್ಕೇರಿದೆ.ಜನಸಾಮಾನ್ಯರು ಮತ್ತು ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೈಂದೂರು ಕ್ಷೇತ್ರದಲ್ಲಿ ಗೋಪಾಲ ಪೂಜಾರಿಯವರು ವಯಕ್ತಿಕ ದೇಣಿಗೆ ನೀಡಿ ಅಭಿವೃದ್ದಿಪಡಿಸಿದಷ್ಟು ದೈವ,ದೇವಸ್ಥಾನಗಳಿಗೆ ನೀವು ಇನ್ನೂ ಬೇಟಿ ಕೂಡ ನೀಡಿಲ್ಲ. ಚುನಾವಣೆಯಲ್ಲಿ ಯಾವ ನೈತಿಕತೆಯಲ್ಲಿ ಮತ ಕೇಳುತ್ತೀರಿ.ಕೋವಿಡ್‌ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದಲ್ಲಿ ನೀವು ಎಲ್ಲೂ ಕೂಡ ನೆರವಿಗೆ ಬಂದಿಲ್ಲ. ಬೈಂದೂರಿನ ವಿವಿಧ ಕಡೆ ಜಲಾವೃತಗೊಂಡಾಗ, ತಾಲೂಕು ಹೋರಾಟ ಸೇರಿದಂತೆ ಕನಿಷ್ಟ ಪಕ್ಷ ಗ್ರಾ.ಪಂ ಚುನಾವಣೆಯಲ್ಲೂ ಕೂಡ ಭಾಗವಹಿಸದ ನೀವು ಕಳೆದ ಐದು ವರ್ಷಗಳಲ್ಲಿ ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆಗಳೇನು ಎಂದು ಜನರಿಗೆ ತಿಳಿಸಲಿ ಎನ್ನುವುದು ಮುಖಂಡರ ಅಭಿಪ್ರಾಯವಾಗಿದೆ.

ಕಾರ್ಯಕರ್ತರೆ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರು:

ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರ,ರಾಜ್ಯ ನಾಯಕರು,ಸಿನಿಮಾ ತಾರೆಯರು ಸೇರಿ ಅನೇಕ ಸ್ಟಾರ್‌ ಪ್ರಚಾರಕರು ಬಂದಿದ್ದಾರೆ.ಆದರೆ ಬೈಂದೂರು ಕ್ಷೇತ್ರದ ಮನೆ ಮಗನಾದ ನನ್ನ ಬಗ್ಗೆ ಕ್ಷೇತ್ರದ ಜನರ ಪ್ರೀತಿಯ ಶ್ರೀರಕ್ಷೆಯಿದೆ.ನಮ್ಮ ಕಾರ್ಯಕರ್ತರೆ ಪಕ್ಷದ ಪಾಲಿನ ಸ್ಟಾರ್‌ ಪ್ರಚಾರಕರು. ಕಳೆದ ಚುನಾವಣೆಯಲ್ಲಿ ಸುತ್ತಾಡಲು ಕಷ್ಟವಿರಲಿಲ್ಲ.ಆದರೆ ಈ ಚುನಾವಣೆಯಲ್ಲಿ ಜಾಸ್ತಿ ನಡೆದಾಡಬಾರದು ಎಂದು ವೈದ್ಯರು ಹೇಳಿದರೂ ಕೂಡ ಗೋಪಾಲ ಪೂಜಾರಿಯವರು ಆರು ತಿಂಗಳಿನಿಂದ ಪ್ರಚಾರ ಕೈಗೊಂಡು ಐದು ಸಾವಿರ ಕಿ.ಮೀ ಅಧಿಕ ನಡೆದಿದ್ದಾರೆ. 246 ಬೂತ್‌ಗಳಲ್ಲಿ ಸಭೆ ನಡೆಸಿ ಮತದಾರರ ಮನದಾಳದ ಪ್ರೀತಿ ವಿಶ್ವಾಸಗಳಿಸಿದ್ದಾರೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್‌ ಹೇಳಿದ್ದಾರೆ.

ಕೆ.ಗೋಪಾಲ ಪೂಜಾರಿಯವರಿಗೆ ಮೀನುಗಾರರ ವಿಶೇಷ ಒಲವು:

ಕಳೆದ ಐದು ವರ್ಷಗಳಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರ ಬಹುತೇಕ ಯೋಜನೆಗಳು ಭರವಸೆಯಾಗಿಯೆ ಉಳಿದಿದೆ.ಸೀಮೆಎಣ್ಣೆ ಸೇರಿದಂತೆ ಬಂದರುಗಳ ನಿರ್ಲಕ್ಷದಿಂದ ಕರಾವಳಿ ಭಾಗದ ಮೀನುಗಾರರು ಸಂಕಷ್ಟದಲ್ಲಿದ್ದಾರೆ.ಕಾಂಗ್ರೆಸ್‌ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಬಿಜೆಪಿ ಅವಧಿಯಲ್ಲಿ ತಟಸ್ಥಗೊಂಡಿದೆ.

ಹೀಗಾಗಿ ಗಂಗೊಳ್ಳಿ, ಮರವಂತೆ, ಕೊಡೇರಿ, ಅಳ್ವೆಗದ್ದೆ ಮೀನುಗಾರಿಕಾ ಬಂದರುಗಳನ್ನು ಆಯ್ಕೆಯಾದ ಮೊದಲ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸುತ್ತಾರೆ. ಕಾಂಗ್ರೇಸ್‌ ಪ್ರಣಾಳಿಕೆ ಪ್ರಕಾರ ಮೀನುಗಾರರಿಗೆ ಪ್ರತಿ ಲೀಟರ್‌ ಡಿಸೇಲ್‌ಗೆ 25 ರೂಪಾಯಿ ಸಬ್ಸಿಡಿ ತಿಂಗಳಿಗೆ 500 ಲೀಟರ್‌ ಸೀಮೆಎಣ್ಣೆ 94/ಸಿ ಯೋಜನೆ,ಅಕ್ರಮ -ಸಕ್ರಮ ಯೋಜನೆ ಸೇರಿದಂತೆ ಬಹುತೇಕ ಯೋಜನೆಗಳು ಈ ಬಾರಿ ಕರಾವಳಿ ಭಾಗದ ಮೀನುಗಾರರಿಗೆ ಭರವಸೆ ಕೊಟ್ಟಿದೆ.ಮತದಾರರು ಗೋಪಾಲ ಪೂಜಾರಿ ಬಗ್ಗೆ ವಿಶೇಷ ಒಲವು ಹೊಂದಿದ್ದಾರೆ ಎಂದು ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮದನ್‌ ಕುಮಾರ್‌ ಹೇಳಿದ್ದಾರೆ.

ಪ್ರತಿ ಜಿ.ಪಂ ವ್ಯಾಪ್ತಿಯಲ್ಲಿ ಗೋಶಾಲೆ:

ಧರ್ಮಜಾಗೃತಿ ಸೇರಿದಂತೆ ಅಭಿವೃದ್ದಿ ಬಗ್ಗೆ ಕಾಂಗ್ರೆಸ್‌ ಪಕ್ಷ ನೂರಕ್ಕೆ ನೂರು ಪ್ರಾಮಾಣಿಕ ಕರ್ತವ್ಯ ನಿರ್ವಹಿಸುತ್ತಿದೆ. ಜಾತ್ಯಾತೀತ ತತ್ವದೊಂದಿಗೆ ಸರ್ವರನ್ನು ಪ್ರೀತಿಯಿಂದ ಮುನ್ನೆಡೆಸುವ ಜೊತೆಗೆ ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಪಶು ಆಸ್ಪತ್ರೆಗೆ ಸ್ವಂತ ಸ್ಥಳ ಮೀಸಲಿರಿಸಲಾಗಿದೆ ಹಾಗೂ ಅದರಲ್ಲಿ ಕಟ್ಟಡ ಕೂಡ ನಿರ್ಮಾಣವಾಗಿದೆ.ಎಲ್ಲಾ ಗ್ರಾಮದಲ್ಲಿ ಪಶು ಆಸ್ಪತ್ರೆ ಸೇವೆಯ ಜೊತೆಗೆ ಪ್ರತಿ ಜಿ.ಪಂ ವ್ಯಾಪ್ತಿಯಲ್ಲಿ ಗೋಶಾಲೆ ಆರಂಭಿಸುವ ಯೋಜನೆಯಿದೆ ಎಂದು ಗೋಪಾಲ ಪೂಜಾರಿ ತಿಳಿಸಿದ್ದಾರೆ.

ಬಿಜೆಪಿ ಸುಕುಮಾರ ಶೆಟ್ಟಿಯವರನ್ನು ನಿರ್ಲಕ್ಷಿಸಿದ ಬಿಜೆಪಿ:

ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಶೆಟ್ಟಿ ಮಾತನಾಡಿ ಬೈಂದೂರು ಕ್ಷೇತ್ರ ವ್ಯಾಪ್ತಿ ಕಾಂಗ್ರೆಸ್‌ ಪರ ವ್ಯಾಪಕ ಬೆಂಬಲವಿದೆ. ಬಿಜೆಪಿಯಲ್ಲಿ ರಿಮೋಟ್‌ ಕಂಟ್ರೋಲ್‌ ವ್ಯವಸ್ಥೆ ಹೊಂದಿದೆ. ಬೆಂಗಳೂರಿನಲ್ಲಿ ಕುಳಿತ ಆರ್‌.ಎಸ್‌.ಎಸ್‌ ನಾಯಕರು ಕಷ್ಟಪಟ್ಟು ಪಕ್ಷ ಕಟ್ಟಿದ ನಾಯಕರನ್ನು ಕಂಟ್ರೋಲ್‌ ಮಾಡುವ ವ್ಯವಸ್ಥೆಯಿದೆ. ಕಾರ್ಯಕರ್ತರ ಶ್ರಮಕ್ಕೆ ಬೆಲೆಯಿಲ್ಲಾ. ಚುನಾವಣೆ ಮುಗಿದ ಬಳಿಕ ಸ್ಥಳೀಯ ನಾಯಕರು ಅತಂತ್ರ. ಹೀಗಾಗಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.