ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ
Team Udayavani, Mar 31, 2023, 8:25 PM IST
ಬಸವಕಲ್ಯಾಣ: ಗುರುವಾರ ನಡೆದ ರಾಮನವಮಿ ಆಚರಣೆಯ ವೇಳೆ ಶ್ರೀರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕಾಂಗ್ರೆಸ್ ಸೇರಿ ಹಲವು ಸಂಘಟನೆಗಳು ವಿರೋಧ ವ್ಯಕ್ತ ಪಡಿಸಿದ ಬಳಿಕ ಶರಣು ಸಲಗರ ಅವರು ಸಾಮಾಜಿಕ ತಾಣದ ಮೂಲಕ ಕ್ಷಮೆ ಯಾಚಿಸಿದ್ದಾರೆ.
ಬೃಹತ್ ರಾಮ ಮೂರ್ತಿಗೆ ಮಾಲಾರ್ಪಣೆ ಮಾಡುವ ವೇಳೆ ಶಾಸಕ ಶರಣು ಸಲಗರ ಅವರು ವಿಗ್ರಹದ ತೊಡೆಯ ಮೇಲೆ ಕಾಲಿಟ್ಟು ಹೂವಿನ ಹಾರ ಹಾಕಿದ್ದರು. ಚುನಾವಣೆಯ ವೇಳೆ ನಡೆದ ಈ ಘಟನೆ ಕಾಂಗ್ರೆಸ್ ಸೇರಿ ವಿಪಕ್ಷ ಗಳಿಗೆ ಆಹಾರವಾಗಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಕಾಂಗ್ರೆಸ್ ಆಕ್ರೋಶ
ರಾಮ ಮೂರ್ತಿಯ ಮೇಲೆಯೇ ಕಾಲಿಟ್ಟ ಬಿಜೆಪಿ ಶಾಸಕ ಶರಣು ಸಲಗರ ಅವರ ರಾಮಭಕ್ತಿ ಹೀಗಿದೆ! ಬಿಜೆಪಿ ಗೆ ‘ರಾಮ’ ಎಂದರೆ ಚುನಾವಣಾ ರಾಜಕೀಯದ ಸರಕು ಹೊರತು ನೈಜ ಭಕ್ತಿಯಲ್ಲ.ಬಿಜೆಪಿಯ ಭಯಂಕರ ಧರ್ಮರಕ್ಷಕರಾದ ಸಿಟಿ ರವಿ, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ನಳಿನ್ ಕುಮಾರ್ ಕಟೀಲ್ ಅವರುಗಳು ರಾಮನಿಗಾದ ಈ ಅಪಚಾರದ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಕ್ಷಮೆ ಯಾಚನೆ
ಆಕ್ರೋಶದ ಬೆನ್ನಲ್ಲೇ ಫೇಸ್ ಬುಕ್ ಲೈವ್ ನಲ್ಲಿ ಕ್ಷಮೆ ಯಾಚಿಸಿದ ಶರಣು ಸಲಗರ, ನಾನು ಕಾರ್ಯಕ್ರಮ ಆಯೋಜಕರ ಅನುಮತಿಯ ಮೇರೆಗೆ ಮೇಲೇರಿ ಹಾರಾರ್ಪಣೆ ಮಾಡಿದ್ದೇನೆ. ಇಳಿಯುವಾಗ ರಾಮ ಮೂರ್ತಿ ತೊಡೆಗೆ ಹಣೆ ಹಚ್ಚಿ ನಮಸ್ಕರಿಸಿದ್ದೇನೆ. ಅದನ್ನು ಯಾರೂ ತೋರಿಸಿಲ್ಲ ಎಂದು, ನಾನು ರಾಮಭಕ್ತ, ಹಿಂದೂ ಪರ ಕಾರ್ಯಕರ್ತ, ಅತೀ ಭಕ್ತಿ ಮತ್ತು ಪ್ರೀತಿಯಿಂದ ಮೇಲೇರಿ ಹಾರ ಅರ್ಪಿಸಿದ್ದೇನೆ. ತಪ್ಪಿಗೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ