ಗಣ್ಯರ ಅನುಪಸ್ಥಿತಿ: ಕಳೆಗುಂದಿದ ಘಟಿಕೋತ್ಸವ ! ಕೋವಿಡ್ ಆತಂಕದಿಂದ ಅತಿಥಿಗಳ ಗೈರು


Team Udayavani, Oct 1, 2020, 6:04 PM IST

ಗಣ್ಯರ ಅನುಪಸ್ಥಿತಿ: ಕಳೆಗುಂದಿದ ಘಟಿಕೋತ್ಸವ ! ಕೋವಿಡ್ ಆತಂಕದಿಂದ ಅತಿಥಿಗಳ ಗೈರು

ದಾವಣಗೆರೆ: ಒಂದೆಡೆ ಕೊರೊನಾಂತಕ, ಮತ್ತೂಂದೆಡೆ ಕುಲಾಧಿಪತಿ, ಸಮಕುಲಾಧಿಪತಿ ಅಷ್ಟೇ ಅಲ್ಲ, ಕುಲಪತಿ ಅನುಪಸ್ಥಿತಿಯಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ (2018-19ನೇ ಸಾಲಿನ) ಏಳನೇ ಘಟಿಕೋತ್ಸವ ಉತ್ಸವವಾಗದೆ ಸರಳ ಕಾರ್ಯಕ್ರಮದ ರೀತಿಯಲ್ಲಿ ಬುಧವಾರ ವಿವಿ ಆವರಣದಲ್ಲಿ ನಡೆಯಿತು.

ವಿವಿ ಘಟಿಕೋತ್ಸವದ ಮುಖ್ಯ ಜವಾಬ್ದಾರಿ ನಿರ್ವಹಿಸಬೇಕಾದ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್‌.ವಿ. ಹಲಸೆ ಅವರಲ್ಲಿ ಕೋವಿಡ್  ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರು ಘಟಿಕೋತ್ಸವದಿಂದ ದೂರ ಉಳಿದು ಆನ್‌ಲೈನ್‌ ಮೂಲಕವೇ ತಮ್ಮ ಸ್ವಾಗತ ಭಾಷಣ ಮಾಡಿದರು. ಸಾಮಾನ್ಯವಾಗಿ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲರು, ಸಮಕುಲಾಧಿಪತಿಗಳಾದ ಉನ್ನತ ಶಿಕ್ಷಣ ಸಚಿವರು ಗೈರಾದರೂ ಕುಲಪತಿಯಾದವರು ಮುಂದೆ ನಿಂತು ಘಟಿಕೋತ್ಸವ ನಡೆಸಿಕೊಡುತ್ತಾರೆ. ಆದರೆ ಕೊರೊನಾ ಕಾರಣದಿಂದಾಗಿ ಇದೇ ಮೊದಲ ಬಾರಿಗೆ ವಿವಿ ಕುಲಪತಿ ಅನುಪಸ್ಥಿತಿಯಲ್ಲಿಯೇ ಘಟಿಕೋತ್ಸವ ನಡೆಸುವಂತಾಯಿತು.

ಗೌರವ ಡಾಕ್ಟರೇಟ್‌ಗೆ ಭಾಜನರಾದ ಕಲಬುರಗಿಯ ಶರಣಬಸವೇಶ್ವರ ವಿದ್ಯಾವರ್ಧಕ ಸಂಘಟನೆಯ ಮುಖ್ಯಸ್ಥೆ ದಾಕ್ಷಾಯಿಣಿ ಅಪ್ಪ ಸಹ ಕೊರೊನಾ ಭೀತಿಯಿಂದಾಗಿ ದೂರ ಪ್ರಯಾಣ ಮಾಡಲು ಹಿಂದೇಟು ಹಾಕಿ ಘಟಿಕೋತ್ಸವಕ್ಕೆ ಗೈರಾದರು. ಘಟಿಕೋತ್ಸವದ ಮುಖ್ಯ ಅತಿಥಿ ಬೆಂಗಳೂರಿನ ಇಸ್ರೋ ಸಂಸ್ಥೆ ಮಾಜಿ ಅಧ್ಯಕ್ಷ, ವಿಕ್ರಮ್‌ ಸಾರಾಭಾಯಿ ಬಾಹ್ಯಾಕಾಶ ಸಂಸ್ಥೆ ಪ್ರಾಧ್ಯಾಪಕ ಡಾ| ಎ.ಎಸ್‌. ಕಿರಣಕಮಾರ್‌ ಸಹ ಆನ್‌ಲೈನ್‌ನಲ್ಲಿಯೇ ತಮ್ಮ ಭಾಷಣ ಮಾಡಿದರು.

ಇದನ್ನೂ ಓದಿ :ಗುಡ್ ನ್ಯೂಸ್: ಭಾರೀ ಗಾತ್ರದ ಮೀನು ಹಿಡಿದು ಒಂದೇ ದಿನದಲ್ಲಿ ಶ್ರೀಮಂತೆಯಾದ ಬಡ ಮಹಿಳೆ!

ಅಗೋಚರ ಉಪಸ್ಥಿತಿ: ಸ್ವರ್ಣಪದಕ, ರ್‍ಯಾಂಕ್‌ ಹಾಗೂ ವಿವಿಧ ಪದವಿ ಪಡೆದ ವಿದ್ಯಾರ್ಥಿಗಳು ವೇದಿಕೆಯಲ್ಲಿದ್ದ ಕುಲಸಚಿವೆ ಡಾ. ಎಚ್‌.ಎಸ್‌. ಅನಿತಾ, ವಿವಿ ಹಣಕಾಸು ಅಧಿಕಾರಿ ಗೋಪಾಲ ಎಂ.ಅಡವಿ ರಾವ್‌ ಅವರಿಂದ ಪ್ರಮಾಣಪತ್ರ ಸ್ವೀಕರಿಸಿದರು. ವೇದಿಕೆಯಲ್ಲಿ ಕುಲಾಧಿಪತಿ, ಸಮಕುಲಾಧಿಪತಿ ಹಾಗೂ ಕುಲಪತಿ ಇಲ್ಲದಿದ್ದರೂ ಶಿಷ್ಟಾಚಾರದಂತೆ ಎಲ್ಲ ವಿದ್ಯಾರ್ಥಿಗಳು ಕುಲಾಧಿಪತಿ, ಸಮಕುಲಾಧಿಪತಿ ಹಾಗೂ ಕುಲಪತಿಯವರಿಗೆ ಎರಡೆರಡು ಬಾರಿ(ಪ್ರಮಾಣಪತ್ರ ಸೀÌಕರಿಸುವ ಮುನ್ನ ಮತ್ತು ನಂತರ) ನಮಸ್ಕರಿಸಿ ಪ್ರಮಾಣಪತ್ರ ಸ್ವೀಕರಿಸಿದ್ದು ಸಭಿಕರಿಗೆ ಅಗೋಚರ ಉಪಸ್ಥಿತಿಯ ಕಲ್ಪನೆ ಮೂಡಿಸಿತು.

ಕಳೆಗುಂದಿದ ಉತ್ಸವ: ಕೊರೊನಾ ಕಾರಣದಿಂದಾಗಿ ಈ ಬಾರಿ ವಿವಿಯ ಘಟಿಕೋತ್ಸವ ಅಕ್ಷರಶಃ ಕಳೆಗುಂದಿತ್ತು. ಎರಡು, ಮೂರು ಸಾವಿರ ವಿದ್ಯಾರ್ಥಿಗಳು, ಗಣ್ಯರು ಸೇರಿ ಆಚರಿಸುತ್ತಿದ್ದ ಘಟಿಕೋತ್ಸವದಲ್ಲಿ ಈ ಬಾರಿ ಗರಿಷ್ಠ 250 ಜನರು ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು. ಗಣ್ಯರನ್ನು ವೇದಿಕೆಗೆ ಕರೆತರುವ ಮೆರವಣಿಗೆಗೂ ಕೊರೊನಾ ಕರಿನೆರಳು ಬಿದ್ದಿದ್ದರಿಂದ ಅದೂ ಸರಳವಾಗಿ ನಡೆಯಿತು. ಮಾಸ್ಕ್, ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದ್ದರೂ ಸಾಮಾಜಿಕ ಅಂತರ ಎಲ್ಲೆಡೆ ಸಾಧ್ಯವಾಗಲಿಲ್ಲ. ಪ್ರಮಾಣಪತ್ರ ಕೊಡುವವರು, ಪಡೆದವರು ಎಲ್ಲರೂ ಮಾಸ್ಕ್ ಹಾಕಿಕೊಂಡೇ ಫೋàಟೋಕ್ಕೆ ಮುಗುಳ್ನಗೆ ಬೀರುವಅನಿವಾರ್ಯತೆ ಸೃಷ್ಟಿಯಾಗಿತ್ತು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.