ನ.4ರಿಂದ ಭಾಲ್ಕಿಯಲ್ಲಿ ಸಿದ್ದೇಶ‍್ವರ ಶ್ರೀಗಳ ಪ್ರವಚನ


Team Udayavani, Oct 30, 2021, 11:45 AM IST

9siddeshwara

ಭಾಲ್ಕಿ: ಸಿದ್ದೇಶ್ವರ ಶ್ರೀಗಳ ಪ್ರವಚನ ಕೇಳುವ ಸೌಭಾಗ್ಯ ತಾಲೂಕಿನ ಜನತೆಗೆ ಮತ್ತೂಮ್ಮೆ ಒಲಿದು ಬಂದಿದೆ. ನ.4ರಿಂದ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಶ್ರೀಗಳು ತಿಂಗಳ ಕಾಲ ಆಧ್ಯಾತ್ಮಿಕ ಪ್ರವಚನ ನಡೆಸಿ ಕೊಡಲಿದ್ದಾರೆ. ಅಂತಹ ಶ್ರೀಗಳ ಪ್ರವಚನ ಆಲಿಸಲು ಪೂರಕ ವಾತಾವರಣ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಪ್ರವಚನದ ಸ್ಥಳ ಪರಿಶೀಲನೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಅವರು ನಡೆದಾಡುವ ವಿಶ್ವವಿದ್ಯಾಲಯ ಮತ್ತು ಜ್ಞಾನದ ಕಣಜ ಆಗಿದ್ದಾರೆ. ಅವರ ಪ್ರವಚನ ಆಲಿಸಿ ಲಕ್ಷಾಂತರ ಜನ ಬದಲಾಗಿ ತಮ್ಮ ಜೀವನವನ್ನು ಪಾವನವಾಗಿಸಿಕೊಂಡಿದ್ದಾರೆ. ಅಂತಹ ಮಹಾಪುರುಷರು ನಮ್ಮ ಭಾಗದಲ್ಲಿ ಪ್ರವಚನ ನಡೆಸಿ ಕೊಡಲು ಬರುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆ ತರಿಸಿದೆ ಎಂದರು.

ಪ್ರತಿದಿನ ಬೆಳಗ್ಗೆ 6.30ರಿಂದ 7.30ರ ವರೆಗೆ ಶ್ರೀಗಳ ಪ್ರವಚನ ನಡೆಯಲಿದ್ದು, ಪ್ರವಚನ ಆಲಿಸಲು ಜಿಲ್ಲೆಯ ಮೂಲೆ ಮೂಲೆಯಿಂದ ಸಾವಿರಾರೂ ಸಂಖ್ಯೆಯಲ್ಲಿ ಜನರು ಹರಿದು ಬರಲಿದ್ದಾರೆ. ಪ್ರವಚನ ಸ್ಥಳದಲ್ಲಿ ಶಾಂತತೆ, ಶಿಸ್ತು, ಸ್ವತ್ಛತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಪ್ರವಚನದ ಅವಧಿಯಲ್ಲಿ ಚನ್ನಬಸವಾಶ್ರಮ ಎದುರಿನ ರಸ್ತೆಯಲ್ಲಿ ಬ್ಯಾರಿಕೇಡ್‌ ಅಳವಡಿಸಿ ಮಾರ್ಗ ಬದಲಿಸಿ ಶಾಂತತೆ ಕಾಪಾಡಬೇಕು. ಪಾರ್ಕಿಂಗ್‌ಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜತೆಗೆ ಪಟ್ಟಣದ ರಸ್ತೆ, ಚರಂಡಿ ಸ್ವತ್ಛತೆ, ಅಲ್ಲಲ್ಲಿ ಮೊಬೈಲ್‌ ಶೌಚಗೃಹ ಅಳವಡಿಸುವುದು, ಕುಡಿವ ನೀರಿನ ವ್ಯವಸ್ಥೆ ಕಲ್ಪಿಸುವುದು, ವಿದ್ಯುತ್‌ ವ್ಯತ್ಯಯ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ಸಿದ್ದೇಶ್ವರ ಸ್ವಾಮೀಜಿ ಅವರ ನಡೆ-ನುಡಿ ಜಗತ್ತಿಗೆ ಮಾದರಿ ಆಗಿದೆ. ಅವರ ಪ್ರವಚನದಿಂದ ಸಾಕಷ್ಟು ಜನ ಉದ್ಧಾರ ಆಗಿದ್ದಾರೆ. ಅವರು ಪ್ರವಚನ ನಡೆಸಿಕೊಡಲು ನಮ್ಮಲ್ಲಿಗೆ ಬರುತ್ತಿರುವುದು ಹರ್ಷ ತಂದಿದೆ. ಶ್ರೀಗಳ ಪ್ರವಚನ ಯಶಸ್ವಿಗೆ ಅಗತ್ಯ ಸಿದ್ಧತೆ ಮಾಡಿಕೊಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಇಂದೇ ಪುನೀತ್ ಅಂತ್ಯಕ್ರಿಯೆ ಸಾಧ್ಯತೆ : ಸಚಿವರಿಂದ ಸ್ಥಳ ಪರಿಶೀಲನೆ

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಕೀರ್ತಿ ಚಾಲಕ್‌, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ್‌, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಪ್ರಮುಖರಾದ ಹಣಮಂತರಾವ ಚವ್ಹಾಣ, ಶಶಿಧರ ಕೋಸಂಬೆ, ಟಿಂಕು ರಾಜಭವನ, ರಾಜಕುಮಾರ ಮೋರೆ, ಕಾಶಿನಾಥ ಲದ್ದೆ, ಬಸವರಾಜ ಮರೆ, ಜೈಪಾಲ ಬೋರಾಳೆ, ಪ್ರಶಾಂತ ಕೊಟಗೀರಾ, ದೀಪಕ ಠಮಕೆ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.