Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
Team Udayavani, May 5, 2024, 9:10 AM IST
ದಾಂಡೇಲಿ: ಗಂಡ-ಹೆಂಡತಿಯ ಜಗಳದಿಂದಾಗಿ 6 ವರ್ಷದ ಗಂಡು ಮಗುವೊಂದನ್ನು ನಾಲಾಕ್ಕೆ ಬಿಸಾಕಿದ ಅಮಾನವೀಯ ಘಟನೆ ಮೇ.4ರ ಶನಿವಾರ ರಾತ್ರಿ ದಾಂಡೇಲಿ ತಾಲೂಕಿನ ಹಾಲಮಡ್ಡಿ ಎಂಬಲ್ಲಿ ನಡೆದಿದೆ.
ಹಾಲಮಡ್ಡಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ರವಿಕುಮಾರ್ ಶೆಳ್ಳೆ ಮತ್ತು ಸಾವಿತ್ರಿ ದಂಪತಿಗಳು ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಜಗಳದಿಂದ ಮಾನಸಿಕವಾಗಿ ನೊಂದ ಸಾವಿತ್ರಿ 6 ವರ್ಷದ ಮಗು ವಿನೋದ್ ನನ್ನು ಅಲ್ಲೆ ಹತ್ತಿರದಲ್ಲಿರುವ ದೊಡ್ಡ ನಾಲಾಕ್ಕೆ ಎಸೆದು ಬಂದಿದ್ದಾಳೆ.
ಸ್ವಲ್ಪ ಹೊತ್ತಿನ ಬಳಿಕ ಈ ಘಟನೆಯಿಂದ ಮಾನಸಿಕವಾಗಿ ಅಘಾತಗೊಂಡ ಸಾವಿತ್ರಿ ಮಗುವನ್ನು ಎಸೆದು ಬಂದಿರುವುದನ್ನು ಸ್ಥಳೀಯರಿಗೆ ತಿಳಿಸಿದ್ದಾಳೆ.
ತಕ್ಷಣವೇ ಸ್ಥಳೀಯರು ನಾಲಾದ ಹತ್ತಿರ ಬಂದು ಮಗುವಿಗಾಘಿ ಹುಡುಕಾಟ ನಡೆಸಿ, ಕೂಡಲೇ ದಾಂಡೇಲಿಯ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು.
ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಸಹಕಾರದಲ್ಲಿ ಹಾಗೂ ಸ್ಥಳೀಯ ಮುಳುಗು ತಜ್ಞರ ಮತ್ತು ಸ್ಥಳೀಯರ ನೆರವಿನೊಂದಿಗೆ ಮಗುವಿನ ಶೋಧ ಕಾರ್ಯ ನಡೆಸಲಾಗಿದೆ.
ಶೋಧ ಕಾರ್ಯಾಚರಣೆ ಭಾನುವಾರವು ಮುಂದುವರೆದಿದೆ. ಇದೀಗ ಮಗು ಮೊಸಳೆಯ ಬಾಯಲ್ಲಿದ್ದು ಆಗೊಮ್ಮೆ ಈಗೊಮ್ಮೆ ಮೊಸಳೆ ಮಗುವನ್ನು ಬಾಯಲ್ಲಿಟ್ಟು ಪ್ರತ್ಯಕ್ಷವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ
Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ
Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ
Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ
MUST WATCH
ಹೊಸ ಸೇರ್ಪಡೆ
Mysore; ಲೋಕಸಭೆ ಮುಗಿದ ಕೂಡಲೇ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿದ್ದರಾಮಯ್ಯ
ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ
Form 17c: ಚುನಾವಣ ಆಯೋಗಕ್ಕೆ ನಿರ್ದೇಶನ ನೀಡಲು ಸುಪ್ರೀಂ ನಕಾರ, ಆದೇಶದಲ್ಲೇನಿದೆ?
Vijayanagara: ದಶಕಗಳ ಬಳಿಕ ಹುಲಿಕೆರೆ ಕೆರೆಗೆ ನೀರು… ಗ್ರಾಮಸ್ಥರಿಂದ ಗಂಗಾ ಪೂಜೆ