ಪುನೀತ್ ಅಂತಿಮ ನಮನ : ಪುತ್ರಿಯ ಕಂಡು ಕಂಠೀರವದಲ್ಲಿ ಕಣ್ಣೀರ ಕೋಡಿ
Team Udayavani, Oct 30, 2021, 6:16 PM IST
ಬೆಂಗಳೂರು : ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುತ್ರಿ ಧೃತಿ ಶನಿವಾರ ಅಮೆರಿಕಾದಿಂದ ಆಗಮಿಸಿ ತಂದೆಯ ತಲೆಯನ್ನು ಮುಟ್ಟಿ ಕಣ್ಣೀರಿಟ್ಟಿದ್ದಾರೆ. ಭಾವುಕ ಕ್ಷಣವನ್ನು ಕಂಡು ಸ್ಥಳದಲ್ಲಿದ್ದ ನೂರಾರು ಗಣ್ಯರು, ಕುಟುಂಬ ಸದಸ್ಯರೂ ಕಣ್ಣೀರಿಟ್ಟರು.
ಮಧ್ಯಾಹ್ನ ಅಮೆರಿಕಾದಿಂದ ದೆಹಲಿಗೆ ಬಂದಿಳಿದ ಧೃತಿ ಏರ್ ಇಂಡಿಯಾ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದರು. ಭಾರಿ ಭದ್ರತೆಯಲ್ಲಿ ಅವರನ್ನು ಸಂಜೆ ಸದಾಶಿವ ನಗರದ ಮನೆಗೆ ಕರೆದೊಯ್ದು ಬಳಿಕ ಕಂಠೀರವ ಕ್ರೀಡಾಂಗಣಕ್ಕೆ ಕರೆತರಲಾಯಿತು.
ಪುನೀತ್ ಅವರ ಪತ್ನಿ ಅಶ್ವಿನಿ ಅವರು ಮಗಳಿಗೆ ಸಾಂತ್ವನ ಹೇಳಿದರು. ದೊಡ್ಡಪ್ಪ ಶಿವರಾಜ್ ಕುಮಾರ್ ಹಣೆಗೆ ಮುತ್ತಿಟ್ಟು ಸಂತೈಸಿದರು.
ಇನ್ನೋರ್ವ ಪುತ್ರಿ ವಂದಿತಾ ಕೂಡ ಸಹೋದರಿಯೊಂದಿಗೆ, ಮರಳಿಬಾರದ ಊರಿಗೆ ಪಯಣಿಸಿದ ಪ್ರೀತಿಯ ಪಪ್ಪಾ ನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತರು. ರಾಜ್ ಕುಟುಂಬ ಕಣ್ಣೀರ ಪ್ರವಾಹದಲ್ಲಿ ಮುಳುಗಿದೆ.
ನಾಳೆ(ಭಾನುವಾರ) ಸಕಲ ಸರಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಇಂದೂ ಪುನೀತ್ ಅವರ ಅಂತಿಮ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದೆ.
ಹರಿದು ಬರುತ್ತಿದೆ ಅಭಿಮಾನ ಸಾಗರ
ಪ್ರವಾಹದೋಪಾದಿಯಲ್ಲಿ ಅಕಾಲಿಕವಾಗಿ ಕಾಲನ ವಶವಾದ ನೆಚ್ಚಿನ ಅಪ್ಪುವನ್ನು ನೋಡಲು ಸಾವಿರಾರು ಗಣ್ಯರು, ಲಕ್ಷಾಂತರ ಅಭಿಮಾನಿಗಳು ಶನಿವಾರ ಸಂಜೆಯವರೆಗೆ ಆಗಮಿಸಿದ್ದು, ಅಭಿಮಾನಿಗಳ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚುತ್ತಲೇ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?