ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಎರಡು ತಿಂಗಳ ಬಳಿಕ ಪತ್ತೆ
Team Udayavani, Oct 14, 2019, 12:27 PM IST
ಶಿವಮೊಗ್ಗ: ಸುಮಾರು ಎರಡು ತಿಂಗಳ ಹಿಂದೆ ಕುಮದ್ವತಿ ನದಿ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಶವ ಸೋಮವಾರ ಪತ್ತೆಯಾಗಿದೆ.
ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಕುಂಸಿಯ ಅಮರನಾಥ್ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಮಹಾಮಳೆಯ ಪ್ರವಾಹದ ವೇಳೆ ಚೊರಡಿ ಕುಮದ್ವತಿ ನದಿ ಸೇತುವೆ ಮೇಲೆ ನಿಂತು ನದಿಯನ್ನು ನೋಡುತ್ತಿದ್ದಾಗ ಬೋಲೇರೋ ಡಿಕ್ಕಿ ಹೊಡೆದು ಮೂವರು ನದಿಗೆ ಬಿದ್ದಿದ್ದರು. ನದಿಗೆ ಬಿದ್ದ ಮರುದಿನವೇ ರಾಮಪ್ಪ ಎಂಬುವರ ಶವಪತ್ತೆಯಾಗಿತ್ತು. ಹರೀಶ್ ಶವ ಇನ್ನೂ ಪತ್ತೆಯಾಗಿಲ್ಲ.
ಹರೀಶ್ ಹಾಗೂ ಅಮರನಾಥ್ ಶವಕ್ಕಾಗಿ ಎನ್ ಡಿಆರ್ ಎಫ್ ಹದಿನೈದು ದಿನ ಕಾರ್ಯಾಚರಣೆ ನಡೆಸಿದರೂ ಶವ ಪತ್ತೆಯಾಗಿರಲಿಲ್ಲ. ಇದರಿಂದಾಗಿ ಎನ್ ಡಿಆರ್ ಎಫ್ ಸಿಬ್ಬಂಧಿಗಳು ಕಾರ್ಯಾಚರಣೆ ನಿಲ್ಲಿಸಿದ್ದರು.
ಸೋಮವಾರ ಚೊರಡಿ ಸಮೀಪದ ದೊಡ್ಡಿಮಟ್ಟಿ ಬಳಿ ಕುಮದ್ವತಿ ನದಿಪಾತ್ರದಲ್ಲಿ ಸ್ಥಳೀಯ ರೈತರು ಕೊಳೆತ ಶವವಿರುವುದನ್ನು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಶವದ ಮೇಲಿರುವ ಜರ್ಕಿನ್, ಬಟ್ಟೆಗಳ ಆಧಾರದ ಮೇಲೆ ಅಮರನಾಥ್ ಶವ ಎಂದು ಗುರುತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Modi ಕೀಳುಮಟ್ಟಕ್ಕಿಳಿದು ಮಾತನಾಡಬಾರದು: ಸಿಎಂ ಸಿದ್ದರಾಮಯ್ಯ
ದಿಂಗಾಲೇಶ್ವರ ಶ್ರೀಗೆ ನಾಮಪತ್ರ ವಾಪಾಸ್ ಪಡೆದು ಕಾಂಗ್ರೆಸ್ ಬೆಂಬಲಿಸಲು ಹೇಳಿದ್ದೇನೆ: ಸಿಎಂ
B.Y. Raghavendra: ಇಂಟರ್ಸಿಟಿ ರೈಲಿನ ಪ್ರಯಾಣಿಕರ ಬಳಿ ಬಿವೈಆರ್ ಮತಬೇಟೆ
Shimoga; ರಾಜ್ಯ ಸರ್ಕಾರದ ತುಷ್ಟೀಕರಣ ನೀತಿಗೆ ಹಿಂದೂಗಳ ಬಲಿ: ರಾಘವೇಂದ್ರ ಕಿಡಿ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ