ಸಿಂಘು ಗಡಿಯಲ್ಲಿ ಪೊಲೀಸರಿಂದ ದೇಶಭಕ್ತಿ ಗೀತೆ ಪ್ರಸಾರ; ಪ್ರತಿಭಟನಾ ನಿರತ ರೈತರಿಂದ ಆಕ್ಷೇಪ
Team Udayavani, Feb 2, 2021, 9:07 AM IST
ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆಯನ್ನು ವಿರೋಧಿಸಿ ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು, ಧ್ವನಿವರ್ಧಕಗಳ ಮುಖಾಂತರ ದೆಹಲಿ ಪೊಲೀಸರು ದೇಶ ಭಕ್ತಿ ಗೀತೆಗಳನ್ನು ಪ್ರಸಾರ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ ಎಂದು ವರದಿಯಾಗಿದೆ.
ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಪತ್ರಿಕಾ ಹೇಳಿಕೆ ಪ್ರಕಾರ, ಕೆಂದ್ರ ಸರ್ಕಾರದೊಂದಿಗೆ ಮಾತುಕತೆಗೂ ಮುನ್ನ ದೆಹಲಿ ಪೊಲೀಸರು ಸಿಂಘು ಗಡಿಯಲ್ಲಿ ಬಳಸುತ್ತಿರುವ ಲೌಡ್ ಸ್ಪೀಕರ್ ಗಳನ್ನು ಬಂದ್ ಮಾಡಬೇಕು ಎಂದು ಆಗ್ರಹಿಸಿವೆ.
ಇದನ್ನೂ ಓದಿ: ಬಾಲಿವುಡ್ ಬೆಡಗಿ ಸಾರಾ ಅಲಿ ಖಾನ್ ಗ್ಲಾಮರಸ್ ಫೋಟೋ ಗ್ಯಾಲರಿ
ಈ ಕುರಿತ ವಿಡಿಯೋ ಒಂದು ಕೂಡ ವೈರಲ್ ಆಗಿದ್ದು, ಬಾಲಿವುಡ್ ‘ಬಾರ್ಡರ್’ ಸಿನಿಮಾದ ‘Sandese Aate Hain’ ಎಂಬ ಹಾಡನ್ನು ಲೌಡ್ ಸ್ಪೀಕರ್ ಮೂಲಕ ಪ್ರಸಾರ ಮಾಡಲಾಗುತ್ತಿದೆ. ಸ್ಥಳದಲ್ಲಿ ಅತೀ ಹೆಚ್ಚು ಭದ್ರತೆಯನ್ನು ನಿಯೋಜಿಸಿರುವುದು ಕೂಡ ಕಂಡುಬರುತ್ತಿದೆ.
सिंघू बॉर्डर पर पुलिस के जवानों का जोश बढ़ाने के लिए कई जगह म्यूज़िक सिस्टम लगाए गए हैं। देशभक्ति के गाने बजाए जा रहे हैं। pic.twitter.com/SKeiDINygZ
— Tanseem Haider तनसीम हैदर Aajtak (@TanseemHaider) February 1, 2021
ಮಾತ್ರವಲ್ಲದೆ ರೈತ ಸಂಘಟನೆಗಳು ಗಣರಾಜ್ಯೋತ್ಸವ ದಿನದಂದು ನಡೆದ ಹಿಂಸಾಚಾರದ ನಂತರ ಬಂಧಿಸಲ್ಪಟ್ಟವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.ಜೊತೆಗೆ ಪ್ರತಿಭಟನಾ ಸ್ಥಳದಲ್ಲಿ ನೀರು, ಶೌಚಾಲಯ, ಇಂಟರ್ ನೆಟ್ ವ್ಯವಸ್ಥೆಯನ್ನೂ ಕಲ್ಪಿಸಬೇಕೆಂದು ಬೇಡಿಕೆಯಿರಿಸಿವೆ.
ಜನವರಿ 26 ರಂದು ಹಿಂಸಾಚಾರ ನಡೆದ ಬಳಿಕ ದೆಹಲಿಯ ಸಿಂಘು ಗಡಿಯಲ್ಲಿ ಅತೀ ಹೆಚ್ಚು ಪೊಲೀಸರನ್ನು ಹಾಗೂ ಭದ್ರತಾಪಡೆಗಳನ್ನು ನಿಯೋಜಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ: ಹಿಮಪಾತದಿಂದ ರಸ್ತೆ ಬಂದ್; ಸೇನಾ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India ಕೋಚ್ ಹುದ್ದೆಗೆ ಮೋದಿ, ಶಾ, ಧೋನಿ, ಶಾರುಖ್, ಸಚಿನ್ ಅರ್ಜಿ! ಏನಿದರ ಅಸಲೀಯತ್ತು?
Meteorite; ಕೃಷಿಭೂಮಿಗೆ ಬಿದ್ದ ಉಲ್ಕಾಶಿಲೆ; ಗುಂಡಿಯಿಂದ ಹೊರಬರುತ್ತಿದೆ ಶಾಖ
Rebel star ಅಂಬರೀಶ್ ಹುಟ್ಟುಹಬ್ಬ; ಕಂಠೀರವ ಸ್ಟುಡಿಯೋದತ್ತ ಫ್ಯಾನ್ಸ್
AUSvsNAM; ಆಟಗಾರರ ಕೊರತೆ: ಫೀಲ್ಡಿಂಗ್ ಮಾಡಿದ ಆಸೀಸ್ ಕೋಚ್, ಆಯ್ಕೆ ಸಮಿತಿ ಮುಖ್ಯಸ್ಥ
Pangala Case; ಎಲ್ಲಿದ್ದರೂ ತಂದು ನಿಲ್ಲಿಸುತ್ತೇನೆಂದ ದೈವದ ನುಡಿ ನಿಜವಾಯಿತು; ಶರಣಾದ ಆರೋಪಿ